ಬ್ರೇಕಿಂಗ್ ನ್ಯೂಸ್
20-03-25 05:29 pm HK News Staff ಕ್ರೈಂ
ಬೆಂಗಳೂರು, ಮಾ.20: ಮಂಗಳೂರು ಪೊಲೀಸರು ವಿಮಾನದಲ್ಲಿ ತರುತ್ತಿದ್ದ ಭಾರೀ ಡ್ರಗ್ಸ್ ದಂಧೆಯನ್ನು ಬಯಲಿಗೆಳೆದ ಬೆನ್ನಲ್ಲೇ ಬೆಂಗಳೂರು ಏರ್ಪೋರ್ಟ್ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ವಿದೇಶದಿಂದ ಅಕ್ರಮವಾಗಿ ಡ್ರಗ್ಸ್ ತರುತ್ತಿದ್ದ ಮಹಿಳೆಯನ್ನು ಕಂದಾಯ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದು, 38.8 ಕೋಟಿ ಮೌಲ್ಯದ 3 ಕೆ.ಜಿ ಕೊಕೇನ್ ವಶಕ್ಕೆ ಪಡೆದಿದ್ದಾರೆ.
ಮಾರ್ಚ್ 18ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕತಾರ್ ದೇಶದಿಂದ ಬಂದಿದ್ದ ಮಹಿಳೆಯನ್ನು ತಪಾಸಣೆ ನಡೆಸಿದಾಗ, ಆಕೆ ಅಕ್ರಮವಾಗಿ ಮಾದಕ ದ್ರವ್ಯ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಆರೋಪಿ ಮಹಿಳೆ ಆಫ್ರಿಕಾದ ಘಾನಾ ದೇಶದ ಪ್ರಜೆಯಾಗಿದ್ದಾಳೆ.

ಖಚಿತ ಮಾಹಿತಿ ಆಧರಿಸಿ ಮಹಿಳೆಯ ಲಗೇಜ್ ಪರಿಶೀಲನೆ ನಡೆಸಿದ್ದು 38.8 ಕೋಟಿ ಮೌಲ್ಯದ 3 ಕೆ.ಜಿ ಕೊಕೇನ್ ಪತ್ತೆಯಾಗಿದೆ. ಬಳಿಕ ಆಕೆಯನ್ನು ಬಂಧಿಸಲಾಗಿದೆ ಎಂದು ಡಿಆರ್ಐ ಮೂಲಗಳು ತಿಳಿಸಿವೆ. ಮಹಿಳೆಗೆ ಕಳ್ಳ ಸಾಗಣಿಕೆದಾರರ ಜೊತೆಗೆ ನಂಟು ಇದೆಯೇ ಎಂಬ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಮಂಗಳೂರು ಪೊಲೀಸರು ಇತ್ತೀಚೆಗೆ ರಾಜ್ಯದಲ್ಲೇ ಅತಿ ದೊಡ್ಡದು ಎನ್ನಲಾದ 75 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ವಶಪಡಿಸಿದ್ದರು. ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಡ್ರಗ್ಸ್ ತಂದು ಪೂರೈಕೆ ಮಾಡುತ್ತಿದ್ದ ದಕ್ಷಿಣ ಅಫ್ರಿಕಾ ಮೂಲದ ಪ್ರಜೆಗಳಿಬ್ಬರನ್ನು ಬಂಧಿಸಿ, 75 ಕೋಟಿ ಮೊತ್ತದ 37.870 ಕೆಜಿ ಎಡಿಎಂಎ ವಶಪಡಿಸಿಕೊಂಡಿದ್ದರು.
Directorate of Revenue Intelligence (DRI) officials seized 3.186 kg of cocaine worth Rs 38.4 crore from a woman from Ghana at Kempegowda International Airport. The accused, identified as Jennifer Abbe, arrived in Bengaluru from Doha, Qatar earlier on Wednesday. Based on a tip-off, DRI officials conducted a thorough inspection and discovered the contraband in her possession.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am