ಬ್ರೇಕಿಂಗ್ ನ್ಯೂಸ್
23-03-25 03:56 pm HK News Desk ಕ್ರೈಂ
ಬೆಳಗಾವಿ, ಮಾ.23 : ಗೋಕಾಕ್ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಬಹುಕೋಟಿ ವಂಚನೆ ಪ್ರಕರಣದಲ್ಲಿ ಉತ್ತರ ಕರ್ನಾಟಕದ ಪ್ರಮುಖ ಮಠಾಧೀಶರೊಬ್ಬರನ್ನು ಸಿಐಡಿ ಅಧಿಕಾರಿಗಳು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಹೊಸ ಬಬಲಾದಿ ಮಠದ ಸದಾಶಿವ ಹಿರೇಮಠ ಸ್ವಾಮೀಜಿ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ನಾಲ್ಕು ತಿಂಗಳ ಹಿಂದೆ ಮಹಾಲಕ್ಷ್ಮಿ ಸೊಸೈಟಿಯ ವಂಚನೆ ಪ್ರಕರಣ ಬಯಲಾಗಿತ್ತು. ಇದರಿಂದ ನೂರಾರು ಗ್ರಾಹಕರು ಸೊಸೈಟಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದರು. ಬಳಿಕ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿತ್ತು. ಬಹುಕೋಟಿ ವಂಚನೆ ಪ್ರಕರಣದ ಆರೋಪಿಯಿಂದಲೇ ಸದಾಶಿವ ಹಿರೇಮಠ ಸ್ವಾಮೀಜಿ ಹಾಗೂ ಅವರ ಕುಟುಂಬಸ್ಥರ ಖಾತೆಗಳಿಗೆ 60 ಲಕ್ಷಕ್ಕೂ ಅಧಿಕ ಹಣ ವರ್ಗಾವಣೆ ಮಾಡಲಾಗಿದೆ. ಸ್ವಾಮೀಜಿ, ಸ್ವಾಮೀಜಿ ಪತ್ನಿ ಹಾಗೂ ಪುತ್ರನ ಖಾತೆಗೆ ಹಣ ವರ್ಗಾವಣೆ ಆಗಿರೋದು ತನಿಖೆಯಿಂದ ಬಯಲಾಗಿದೆ. ಇದೇ ಹಣದಲ್ಲಿ ಸ್ವಾಮೀಜಿ ನಿವೇಶನ ಖರೀದಿಸಿದ್ದಾರೆಂಬ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಶ್ರೀಗಳನ್ನು ವಶಕ್ಕೆ ಪಡೆದು, ತನಿಖೆ ನಡೆಸಿದ್ದಾರೆ.
ನಿವೇಶನ ಅಷ್ಟೇ ಅಲ್ಲದೇ ಹೊಸ ಬಬಲಾದಿ ಮಠದ ಜಾತ್ರೆ ಹಾಗೂ ಅನ್ನ ಸಂತರ್ಪಣೆಗೂ ಲಕ್ಷಾಂತರ ಹಣವನ್ನು ಆರೋಪಿ ನೀಡಿದ್ದಾನೆ. ಈ ಹಿನ್ನೆಲೆಯಲ್ಲಿ ಸದಾಶಿವ ಹಿರೇಮಠ ಸ್ವಾಮೀಜಿ ವಶಕ್ಕೆ ಪಡೆದಿರುವ ಸಿಐಡಿ, ಕೋರ್ಟ್ ಗೆ ಹಾಜರು ಪಡಿಸಿದ್ದಾರೆ. ಮಹಾಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿಯಲ್ಲಿ ಅಟೆಂಡರ್ ಆಗಿದ್ದ ಸಾಗರ ಸಬಕಾಳೆ ಹಾಗೂ ಇತರೇ ಸಿಬ್ಬಂದಿ ಬ್ಯಾಂಕ್ ನಲ್ಲಿ ಇದ್ದ ನೂರಾರು ಕೊಟಿ ಹಣವನ್ನು ವಂಚನೆ ಮಾಡಿದ್ದರು. ಬ್ಯಾಂಕಿನಲ್ಲಿ ಅಕ್ರಮವಾಗಿ 76 ಕೋಟಿ ಸಾಲ ಪಡೆದು ಮರಳಿಸದೇ ವಂಚನೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಆರ್ಬಿಐ ಅಧಿಕಾರಿಗಳೇ ದಂಗಾಗುವಂತೆ ವಂಚನೆ ಎಸಗಲಾಗಿತ್ತು. ಅಡಿಟ್ ವೇಳೆ ಸಾಲಗಾರರು ಹಾಗೂ ಠೇವಣಿ ಇಟ್ಟವರ ಮಾಹಿತಿ ತಿದ್ದುಪಡಿ ಮಾಡಿರುವುದು ಪತ್ತೆಯಾಗಿತ್ತು.
ಮೂರು ವರ್ಷಗಳಲ್ಲಿ ಅಡಿಟ್ ವೇಳೆಯೂ ವಂಚನೆ ಪ್ರಕರಣ ಬೆಳಕಿಗೆ ಬರದಂತೆ ಆರೋಪಿಗಳು ನೋಡಿಕೊಂಡಿದ್ದರು. ಈ ಹಣದಿಂದಲೇ ಗೋಕಾಕ್, ಬೆಳಗಾವಿ, ಹುಬ್ಬಳ್ಳಿಯಲ್ಲಿ ಜಮೀನು ಖರೀದಿಸಲಾಗಿತ್ತು. ಬ್ಯಾಂಕ್ ನಿರ್ದೇಶಕ ನೀಡಿದ ದೂರಿನನ್ವಯ ಪ್ರಕರಣ ಭೇದಿಸಿದ್ದ ಬೆಳಗಾವಿ ಪೊಲೀಸರು ಬಳಿಕ ಸಿಐಡಿ ತನಿಖೆಗೆ ವರ್ಗಾವಣೆ ಮಾಡಿದ್ದರು. ಇದೀಗ ಸಿಐಡಿ ಪೊಲೀಸರು ಕಾಲಜ್ಞಾನಿ ಭವಿಷ್ಯ ನುಡಿಯುವ ಸದಾಶಿವ ಹಿರೇಮಠ ಶ್ರೀಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
Gokak Society Multi-Crore Fraud Case, Sadashiv Hiremath Swamiji Caught in CID Net
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm