ಬ್ರೇಕಿಂಗ್ ನ್ಯೂಸ್
23-03-25 03:56 pm HK News Desk ಕ್ರೈಂ
ಬೆಳಗಾವಿ, ಮಾ.23 : ಗೋಕಾಕ್ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಬಹುಕೋಟಿ ವಂಚನೆ ಪ್ರಕರಣದಲ್ಲಿ ಉತ್ತರ ಕರ್ನಾಟಕದ ಪ್ರಮುಖ ಮಠಾಧೀಶರೊಬ್ಬರನ್ನು ಸಿಐಡಿ ಅಧಿಕಾರಿಗಳು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಹೊಸ ಬಬಲಾದಿ ಮಠದ ಸದಾಶಿವ ಹಿರೇಮಠ ಸ್ವಾಮೀಜಿ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ನಾಲ್ಕು ತಿಂಗಳ ಹಿಂದೆ ಮಹಾಲಕ್ಷ್ಮಿ ಸೊಸೈಟಿಯ ವಂಚನೆ ಪ್ರಕರಣ ಬಯಲಾಗಿತ್ತು. ಇದರಿಂದ ನೂರಾರು ಗ್ರಾಹಕರು ಸೊಸೈಟಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದರು. ಬಳಿಕ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿತ್ತು. ಬಹುಕೋಟಿ ವಂಚನೆ ಪ್ರಕರಣದ ಆರೋಪಿಯಿಂದಲೇ ಸದಾಶಿವ ಹಿರೇಮಠ ಸ್ವಾಮೀಜಿ ಹಾಗೂ ಅವರ ಕುಟುಂಬಸ್ಥರ ಖಾತೆಗಳಿಗೆ 60 ಲಕ್ಷಕ್ಕೂ ಅಧಿಕ ಹಣ ವರ್ಗಾವಣೆ ಮಾಡಲಾಗಿದೆ. ಸ್ವಾಮೀಜಿ, ಸ್ವಾಮೀಜಿ ಪತ್ನಿ ಹಾಗೂ ಪುತ್ರನ ಖಾತೆಗೆ ಹಣ ವರ್ಗಾವಣೆ ಆಗಿರೋದು ತನಿಖೆಯಿಂದ ಬಯಲಾಗಿದೆ. ಇದೇ ಹಣದಲ್ಲಿ ಸ್ವಾಮೀಜಿ ನಿವೇಶನ ಖರೀದಿಸಿದ್ದಾರೆಂಬ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಶ್ರೀಗಳನ್ನು ವಶಕ್ಕೆ ಪಡೆದು, ತನಿಖೆ ನಡೆಸಿದ್ದಾರೆ.
ನಿವೇಶನ ಅಷ್ಟೇ ಅಲ್ಲದೇ ಹೊಸ ಬಬಲಾದಿ ಮಠದ ಜಾತ್ರೆ ಹಾಗೂ ಅನ್ನ ಸಂತರ್ಪಣೆಗೂ ಲಕ್ಷಾಂತರ ಹಣವನ್ನು ಆರೋಪಿ ನೀಡಿದ್ದಾನೆ. ಈ ಹಿನ್ನೆಲೆಯಲ್ಲಿ ಸದಾಶಿವ ಹಿರೇಮಠ ಸ್ವಾಮೀಜಿ ವಶಕ್ಕೆ ಪಡೆದಿರುವ ಸಿಐಡಿ, ಕೋರ್ಟ್ ಗೆ ಹಾಜರು ಪಡಿಸಿದ್ದಾರೆ. ಮಹಾಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿಯಲ್ಲಿ ಅಟೆಂಡರ್ ಆಗಿದ್ದ ಸಾಗರ ಸಬಕಾಳೆ ಹಾಗೂ ಇತರೇ ಸಿಬ್ಬಂದಿ ಬ್ಯಾಂಕ್ ನಲ್ಲಿ ಇದ್ದ ನೂರಾರು ಕೊಟಿ ಹಣವನ್ನು ವಂಚನೆ ಮಾಡಿದ್ದರು. ಬ್ಯಾಂಕಿನಲ್ಲಿ ಅಕ್ರಮವಾಗಿ 76 ಕೋಟಿ ಸಾಲ ಪಡೆದು ಮರಳಿಸದೇ ವಂಚನೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಆರ್ಬಿಐ ಅಧಿಕಾರಿಗಳೇ ದಂಗಾಗುವಂತೆ ವಂಚನೆ ಎಸಗಲಾಗಿತ್ತು. ಅಡಿಟ್ ವೇಳೆ ಸಾಲಗಾರರು ಹಾಗೂ ಠೇವಣಿ ಇಟ್ಟವರ ಮಾಹಿತಿ ತಿದ್ದುಪಡಿ ಮಾಡಿರುವುದು ಪತ್ತೆಯಾಗಿತ್ತು.
ಮೂರು ವರ್ಷಗಳಲ್ಲಿ ಅಡಿಟ್ ವೇಳೆಯೂ ವಂಚನೆ ಪ್ರಕರಣ ಬೆಳಕಿಗೆ ಬರದಂತೆ ಆರೋಪಿಗಳು ನೋಡಿಕೊಂಡಿದ್ದರು. ಈ ಹಣದಿಂದಲೇ ಗೋಕಾಕ್, ಬೆಳಗಾವಿ, ಹುಬ್ಬಳ್ಳಿಯಲ್ಲಿ ಜಮೀನು ಖರೀದಿಸಲಾಗಿತ್ತು. ಬ್ಯಾಂಕ್ ನಿರ್ದೇಶಕ ನೀಡಿದ ದೂರಿನನ್ವಯ ಪ್ರಕರಣ ಭೇದಿಸಿದ್ದ ಬೆಳಗಾವಿ ಪೊಲೀಸರು ಬಳಿಕ ಸಿಐಡಿ ತನಿಖೆಗೆ ವರ್ಗಾವಣೆ ಮಾಡಿದ್ದರು. ಇದೀಗ ಸಿಐಡಿ ಪೊಲೀಸರು ಕಾಲಜ್ಞಾನಿ ಭವಿಷ್ಯ ನುಡಿಯುವ ಸದಾಶಿವ ಹಿರೇಮಠ ಶ್ರೀಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
Gokak Society Multi-Crore Fraud Case, Sadashiv Hiremath Swamiji Caught in CID Net
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm