ಬ್ರೇಕಿಂಗ್ ನ್ಯೂಸ್
18-12-20 03:19 pm Mangalore Correspondent ಕ್ರೈಂ
ಬೆಳ್ತಂಗಡಿ, ಡಿ.18: ಉಜಿರೆಯ ಉದ್ಯಮಿ ಎ.ಕೆ.ಶಿವನ್ ಎಂಬವರ ಮೊಮ್ಮಗನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಎಸ್ಪಿ ಲಕ್ಷ್ಮೀಪ್ರಸಾದ್ ಅಪಹೃತ ಬಾಲಕನ ಮನೆಗೆ ಭೇಟಿ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಮಾತನಾಡಿದ ಎಸ್ಪಿ, ಬಾಲಕನ ಪತ್ತೆಗಾಗಿ ನಾಲ್ಕು ತಂಡಗಳನ್ನು ರಚನೆ ಮಾಡಿದ್ದೇವೆ. ಬಂಟ್ವಾಳ ಡಿವೈಎಸ್ಪಿ ವೆಲಂಟೈನ್ ಡಿಸೋಜ ನೇತೃತ್ವದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ನಡುವೆ ಅಪಹರಣಕಾರರು ತಮ್ಮ ಬೇಡಿಕೆಯನ್ನು 60 ಬಿಟ್ ಕಾಯಿನ್ ಗೆ ಇಳಿಸಿದ್ದಾರೆ. ಬಿಟ್ ಕಾಯಿನ್ ಯಾಕೆ ಕೇಳುತ್ತಿದ್ದಾರೆಂದು ತನಿಖೆ ನಡೆಸುತ್ತಿದ್ದೇವೆ ಎಂದಿದ್ದಾರೆ.
ಅಲ್ಲದೆ, ಅಪಹರಣಕಾರರು ಮನೆಯವರಿಗೆ ಪರಿಚಿತರೇ ಆಗಿರುವ ಶಂಕೆಯಿದೆ ಎಂದು ಹೇಳಿರುವ ಎಸ್ಪಿ, ಮನೆಮಂದಿ ಬಳಿ ಮಾಹಿತಿ ಸಂಗ್ರಹ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.
17ರಿಂದ 10 ಕೋಟಿಗೆ ಇಳಿದ ಬೇಡಿಕೆ
ನಿನ್ನೆ ಬಾಲಕನ ಅಪಹರಿಸಿದ ತಂಡ ತಾಯಿಗೆ ಫೋನ್ ಮಾಡಿದ್ದು 17 ಕೋಟಿ ರೂ. ನೀಡುವಂತೆ ಬೇಡಿಕೆ ಇರಿಸಿತ್ತು. ಅಲ್ಲದೆ, ಬಿಟ್ ಕಾಯಿನ್ ರೂಪದಲ್ಲೇ ನೀಡುವಂತೆ ಕೇಳಿಕೊಂಡಿದ್ದರು. ಅಪಹರಣಕಾರರು ಹಿಂದಿಯಲ್ಲಿ ಮಾತನಾಡಿದ್ದರು ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ, ಇಂದು ತಮ್ಮ ಬೇಡಿಕೆಯನ್ನು ಹತ್ತು ಕೋಟಿ (60 ಬಿಟ್ ಕಾಯಿನ್) ಗೆ ಇಳಿಸಿದ್ದಾರೆ. ಹೀಗಾಗಿ ಮನೆಯವರ ಬಗ್ಗೆ ಮಾಹಿತಿ ಇದ್ದವರೇ ಈ ಕೃತ್ಯದ ಹಿಂದಿರುವ ಶಂಕೆಯಿದೆ.

ಹಾಸನದಲ್ಲಿ ಮೊಬೈಲ್ ಟ್ರೇಸ್ !
ನಿನ್ನೆ ಸಂಜೆ 6.30ರ ಸುಮಾರಿಗೆ ಬಾಲಕನನ್ನು ಆತನ ಮನೆಯ ಮುಂಭಾಗದಿಂದಲೇ ಕಿಡ್ನಾಪ್ ಮಾಡಲಾಗಿತ್ತು. ಆನಂತರ ಅಪಹರಣಕಾರರು ಬಾಲಕನ ತಾಯಿಗೆ ಫೋನ್ ಮಾಡಿದ್ದರು. ಈ ಕರೆ ಬಂದಿರುವ ನಂಬರನ್ನು ಪೊಲೀಸರು ಟ್ರೇಸ್ ಮಾಡಿದ್ದು, ಹಾಸನ ಜಿಲ್ಲೆಯ ತಣ್ಣೀರುಹಳ್ಳ ಎಂಬಲ್ಲಿ ಕೊನೆಯ ಬಾರಿಗೆ ಲೊಕೇಶನ್ ತೋರಿಸಿದ್ದು ಆಬಳಿಕ ಸ್ವಿಚ್ ಆಫ್ ಆಗಿದೆ. ಹೀಗಾಗಿ ಅಪಹರಣಕಾರರು ಹಾಸನ ಮೂಲಕ ತಪ್ಪಿಸಿಕೊಂಡಿದ್ದಾರೆ ಎನ್ನುವ ಶಂಕೆ ಮೂಡಿದೆ.

ಮುಂದುವರಿದ ವಾಟ್ಸಪ್ ಸಂಭಾಷಣೆ
ಅಪಹರಣಕಾರರು ಎಲ್ಲಿದ್ದಾರೆ ಎಂದು ಗೊತ್ತಿಲ್ಲದಿದ್ದರೂ, ವಾಟ್ಸಪ್ ಸಂಭಾಷಣೆ ಮುಂದುವರಿಸಿದ್ದಾರೆ. ವಾಟ್ಸಪ್ ಕರೆಯನ್ನು ಟ್ರೇಸ್ ಮಾಡಲು ಸಾಧ್ಯವಾಗದ ಕಾರಣ, ಕಿಡ್ನಾಪರ್ಸ್ ಈ ಐಡಿಯಾ ಮಾಡಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೆ, ನೀವು ಯಾಕೆ ಪೊಲೀಸರಿಗೆ ಹೇಳಿದ್ದು ಎಂದು ಪ್ರಶ್ನೆ ಮಾಡಿದ್ದಾರೆ. ನೀವು ಡಿಜಿಟಲ್ ರೂಪದಲ್ಲಿ ಹಣ ಕಳಿಸಿ, ನಾವು ಬಾಲಕನನ್ನು ಬಿಟ್ಟು ಬಿಡುತ್ತೇವೆ ಎಂದು ಹೇಳುತ್ತಿದ್ದಾರಂತೆ.

ವಾರದ ಮೊದಲೇ ಹಾಕಿದ್ದರು ಪ್ಲಾನ್
ವಾರದ ಮೊದಲೇ ಉಜಿರೆ ವ್ಯಾಪ್ತಿಯಲ್ಲಿ ಯೆಲ್ಲೋ ಬೋರ್ಡ್ ಇರುವ ಬಿಳಿ ಕಲರ್ ಇಂಡಿಕಾ ಓಡಾಡುತ್ತಿತ್ತು ಎಂದು ಸ್ಥಳೀಯರು ಹೇಳುತ್ತಾರೆ. ಬಾಲಕನ ಮನೆಯ ಆಸುಪಾಸಿನಲ್ಲಿ ಸುಳಿದಾಡುತ್ತಿದ್ದುದರಿಂದ ವಾರಕ್ಕೆ ಮೊದಲೇ ಈ ಅಪಹರಣಕ್ಕೆ ಸ್ಕೆಚ್ ಹಾಕಿದ್ದರು ಎನ್ನೋ ಶಂಕೆ ಮೂಡುತ್ತಿದೆ.
ಇದನ್ನೂ ಓದಿ: ಉಜಿರೆ ; ಬಾಲಕನ ಅಪಹರಿಸಿ 17 ಕೋಟಿ ಬೇಡಿಕೆ !! ಬಿಟ್ ಕಾಯಿನ್ ದಂಧೆ ಶಂಕೆ
The police have traced the location of kidnappers who have kidnapped an Eight -year-Old Boy from Ujre in Dakshina Kannada. The kidnappers have demanded 60 Bitcoins by WhatsApp messages.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm