ಬ್ರೇಕಿಂಗ್ ನ್ಯೂಸ್
26-03-25 08:00 pm Bangalore Correspondent ಕ್ರೈಂ
ಬೆಂಗಳೂರು, ಮಾ.26 : ಸೈಬರ್ ಕ್ರೈಂ ಪ್ರಕರಣದಲ್ಲಿ ತನಿಖೆ ನಡೆಸುವುದಕ್ಕಾಗಿ ಲಂಚ ಪಡೆಯುತ್ತಿದ್ದ ಆರೋಪದಲ್ಲಿ ಎಸಿಪಿ ಹಾಗೂ ಎಎಸ್ಐ ದರ್ಜೆಯ ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಎರಡು ಲಕ್ಷ ರು. ಸ್ವೀಕರಿಸುತ್ತಿದ್ದಾಗಲೇ ಬೆಂಗಳೂರು ಈಶಾನ್ಯ ವಿಭಾಗದ ಸಿಇಎನ್ ಠಾಣೆಯ ಎಸಿಪಿ ತನ್ವೀರ್ ಎಸ್.ಆರ್. ಹಾಗೂ ಎಎಸ್ಐ ಕೃಷ್ಣಮೂರ್ತಿ ಅವರನ್ನ ಬಂಧಿಸಲಾಗಿದೆ.
ಅದ್ವಿ ಗ್ರೂಪ್ ಆಫ್ ಕಂಪನೀಸ್ ಎಂಬ ಉದ್ಯಮ ಸಮೂಹದ ವೆಬ್ ಸೈಟ್ ಅನ್ನು ಹ್ಯಾಕ್ ಮಾಡಿದ್ದ ದುಷ್ಕರ್ಮಿಗಳು, ಅದರಲ್ಲಿ ತಪ್ಪು ಮಾಹಿತಿ ಪ್ರಕಟಿಸಿದ್ದರು. ಇದರಿಂದ ಕಂಪನಿಯ ಗೌರವಕ್ಕೆ ಧಕ್ಕೆ ಉಂಟಾಗಿತ್ತು. ಕಂಪನಿಯ ಮಾಲೀಕ ಮಧುಸೂದನ್ ಈಶಾನ್ಯ ವಿಭಾಗದ ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪೊಲೀಸರು ಎಫ್ಐಆರ್ ದಾಖಲಿಸಿದ್ದರೂ, ಆರೋಪಿಗಳನ್ನು ಬಂಧಿಸಿರಲಿಲ್ಲ. ಅನುಮಾನಿತ ಆರೋಪಿಯನ್ನ ವಿಚಾರಣೆ ನಡೆಸಿ ಪ್ರಕರಣದ ತನಿಖೆ ಕೈಗೊಳ್ಳಲು ಎಸಿಪಿ ತನ್ವೀರ್ ಮತ್ತು ಎಎಸೈ ಕೃಷ್ಣಮೂರ್ತಿ 4 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಲೋಕಾಯುಕ್ತ ಪೊಲೀಸರಿಗೆ ಮಧುಸೂದನ್ ದೂರು ನೀಡಿದ್ದರು.
ಮಂಗಳವಾರ ರಾತ್ರಿ ಆರ್.ಟಿ. ನಗರಕ್ಕೆ ಬಂದು ಹಣ ತಲುಪಿಸುವಂತೆ ಎಎಸ್ಐ ಕೃಷ್ಣಮೂರ್ತಿ ಸೂಚಿಸಿದ್ದರು. ಅದರಂತೆ ಅಲ್ಲಿಗೆ ತಲುಪಿದ ದೂರುದಾರರು ಹಣ ಕೊಟ್ಟ ಕೂಡಲೇ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆಬಳಿಕ ಎಸಿಪಿ ತನ್ವೀರ್ ಅವರನ್ನೂ ತಡರಾತ್ರಿ ವೇಳೆಗೆ ಬಂಧಿಸಿದ್ದಾರೆ.
ಲೋಕಾಯುಕ್ತ ಪೊಲೀಸ್ ವಿಭಾಗದ ಬೆಂಗಳೂರು ನಗರ ಘಟಕ-2 ರ ಎಸ್ಪಿ ಕೆ. ವಂಶಿಕೃಷ್ಣ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ಎಚ್.ಜೆ. ತಿಪ್ಪೇಸ್ವಾಮಿ, ಇನ್ ಸ್ಪೆಕ್ಟರ್ ಗಳಾದ ವಿಜಯ್ ಕೃಷ್ಣ, ಪ್ರಶಾಂತ್, ಅಂಜನ್ ಕುಮಾರ್ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
Two Senior Police Officers including ACP Tanveer S R Arrested in Bengalore for Bribery in Cyber Fraud Case by the Lokayukta police on Tuesday night, following a sting operation prompted by a complaint from a 42-year-old software engineer.
The Lokayukta, Karnataka’s anti-corruption watchdog, revealed that the officers had demanded Rs four lakh (approximately $4,800) from the complainant to investigate a cyber fraud case and arrest the accused.
22-07-25 11:10 pm
Bangalore Correspondent
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
23-07-25 12:00 pm
Mangalore Correspondent
Dharmasthala SIT Latest News; ಧರ್ಮಸ್ಥಳ ಎಸ್ಐಟಿ...
23-07-25 10:19 am
Puttur Bus News; ಮಂಗಳೂರು-ಪುತ್ತೂರು ಬಸ್ ನಲ್ಲಿ ಯ...
22-07-25 11:13 pm
ಧರ್ಮಸ್ಥಳ ಕೇಸ್ ; ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ...
22-07-25 10:57 pm
Mangalore Yathicorp AI: ಯತಿಕಾರ್ಪ್ ಸಂಸ್ಥೆಯಿಂದ...
22-07-25 09:42 pm
23-07-25 11:36 am
Udupi Correspondent
Mangalore CCB Police, Arrest, Crime: ಸಿಸಿಬಿ ಕ...
22-07-25 09:45 pm
Kalaburagi Jewellery Robbery, Arrest: ಕಲಬುರಗಿ...
22-07-25 12:38 pm
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm