ಬ್ರೇಕಿಂಗ್ ನ್ಯೂಸ್
28-03-25 06:12 pm Bangalore Correspondent ಕ್ರೈಂ
ಬೆಂಗಳೂರು, ಮಾ.28 : ಎರಡು ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದ ಸುಂದರಿ ಪತ್ನಿಯನ್ನು ಸಾಫ್ಟ್ವೇರ್ ಪತಿಯೇ ಭೀಕರವಾಗಿ ಕೊಲೆಗೈದು ಪೀಸ್ ಪೀಸ್ ಮಾಡಿ ಸೂಟ್ ಕೇಸಿನಲ್ಲಿ ತುಂಬಿಸಿಟ್ಟು ಮನೆಯಿಂದ ಪರಾರಿಯಾದ ಘಟನೆ ಹುಳಿಮಾವು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯ ಹೆಸರು ಗೌರಿ ಅನಿಲ್ ಸಾಂಬೇಕರ್. ಮಾಸ್ ಕಮ್ಯುನಿಕೇಷನ್ನಲ್ಲಿ ಡಿಗ್ರಿ ಮುಗಿಸಿದ್ದ ಗೌರಿ ಗಂಡನೊಂದಿಗೆ ಬೆಂಗಳೂರಿಗೆ ಬಂದು ಕೆಲಸದ ಹುಡುಕಾಟ ನಡೆಸುತ್ತಿದ್ದಳು. ಪತಿ ರಾಕೇಶ್ ಮಹಾರಾಷ್ಟ್ರದ ಪುಣೆ ಮೂಲದ ನಿವಾಸಿಯಾಗಿದ್ದು ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಕಂಪನಿಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಆಗಿದ್ದ.
ಒಂದು ತಿಂಗಳ ಹಿಂದಷ್ಟೇ ಬೆಂಗಳೂರಿನ ಹುಳಿಮಾವು ಪರಿಸರದ ದೊಡ್ಡ ಕಮ್ಮನಹಳ್ಳಿಯ ಬಾಡಿಗೆ ಮನೆ ಮಾಡಿ ನೆಲೆಸಿದ್ದರು. ಪತ್ನಿ ಗೌರಿ, ಮನೆಯಲ್ಲೇ ಇದ್ದು ಕೆಲಸ ಹುಡುಕುತ್ತಿದ್ದಳು. ಈ ನಡುವೆ, ಪತಿ ರಾಕೇಶ್ ವರ್ಕ್ ಫ್ರಮ್ ಹೋಮ್ ಕೆಲ್ಸ ಮಾಡುತ್ತಿದ್ದ. ಸುಖ ಜೀವನದಲ್ಲಿದ್ದಾಗಲೇ ಮೊನ್ನೆ ರಾತ್ರಿ ಊಟದ ಸಮಯದಲ್ಲಿ ಪತಿ- ಪತ್ನಿ ಸಣ್ಣ ವಿಚಾರಕ್ಕೆ ಗಲಾಟೆ ಮಾಡಿದ್ದಾರೆ. ಗಲಾಟೆ ವಿರೋಪಕ್ಕೆ ತಿರುಗಿದ್ದು ರಾಕೇಶ್ ಕೋಪದಲ್ಲಿ ಚೂರಿಯಿಂದ ಇರಿದು ಪತ್ನಿಯನ್ನು ಕೊಲೆ ಮಾಡಿದ್ದಾನೆ. ಬಳಿಕ ಪತ್ನಿಯ ಕುತ್ತಿಗೆ, ಹೊಟ್ಟೆಯ ಭಾಗದಲ್ಲಿ ಕೊಯ್ದು ಸೂಟ್ಕೇಸ್ಗೆ ತುಂಬಿಸಿ ಹೊರಕ್ಕೆ ಒಯ್ಯಲು ಯತ್ನಿಸಿದ್ದಾನೆ.
ಆದರೆ ಸೂಟ್ಕೇಸ್ ತುಂಬಿದ್ದ ರಾಕೇಶ್ ನಡುರಾತ್ರಿ 12.30ರ ಸುಮಾರಿಗೆ ಒಬ್ಬನೇ ನಡೆದುಕೊಂಡು ಅಪಾರ್ಟ್ ಮೆಂಟ್ ಬಳಿ ನಿಲ್ಲಿಸಿದ್ದ ತನ್ನ ಕಾರಿನಲ್ಲಿ ಎಸ್ಕೇಪ್ ಆಗಿದ್ದಾನೆ. ಇದಕ್ಕೂ ಮುನ್ನ ಪತ್ನಿ ಗೌರಿ ಮನೆಯವರಿಗೆ ಮತ್ತು ತಾವು ಬಾಡಿಗೆ ಇದ್ದ ಕೆಳಗಿನ ಮನೆಯವರಿಗೂ ಕರೆ ಮಾಡಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ವಿಷ್ಯ ತಿಳಿಸಿದ್ದಾನೆ. ಕೆಳಗಿನ ಮನೆಯಲ್ಲಿದ್ದ ಮಾಲೀಕರು ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿದ್ದರು. ಬಳಿಕ ಹುಳಿಮಾವು ಪೊಲೀಸರು ಸ್ಥಳಕ್ಕೆ ಬಂದು, ಮನೆಯ ಬಾಗಿಲು ಓಪನ್ ಮಾಡಿದಾಗ ಟಾಯ್ಲೆಟ್ನಲ್ಲಿ ಇಟ್ಟಿದ್ದ ಸೂಟ್ಕೇಸ್ನಲ್ಲಿ ಶವ ಪತ್ತೆ ಆಗಿದೆ.
ಇದೇ ವೇಳೆ, ಪೊಲೀಸರು ಆರೋಪಿ ರಾಕೇಶ್ ಸಿಂಗ್ ನನ್ನು ಸಿಡಿಆರ್ ಮೂಲಕ ಟ್ರೇಸ್ ಮಾಡಿದ್ದು ಪುಣೆಯಲ್ಲಿ ಬಂಧಿಸಿದ್ದಾರೆ.
A 36-year-old man has been arrested in connection with the murder of his 32-year-old wife, whose body was found stuffed in a suitcase at their rented house in south Bengaluru.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm