ಬ್ರೇಕಿಂಗ್ ನ್ಯೂಸ್
28-03-25 06:12 pm Bangalore Correspondent ಕ್ರೈಂ
ಬೆಂಗಳೂರು, ಮಾ.28 : ಎರಡು ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದ ಸುಂದರಿ ಪತ್ನಿಯನ್ನು ಸಾಫ್ಟ್ವೇರ್ ಪತಿಯೇ ಭೀಕರವಾಗಿ ಕೊಲೆಗೈದು ಪೀಸ್ ಪೀಸ್ ಮಾಡಿ ಸೂಟ್ ಕೇಸಿನಲ್ಲಿ ತುಂಬಿಸಿಟ್ಟು ಮನೆಯಿಂದ ಪರಾರಿಯಾದ ಘಟನೆ ಹುಳಿಮಾವು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯ ಹೆಸರು ಗೌರಿ ಅನಿಲ್ ಸಾಂಬೇಕರ್. ಮಾಸ್ ಕಮ್ಯುನಿಕೇಷನ್ನಲ್ಲಿ ಡಿಗ್ರಿ ಮುಗಿಸಿದ್ದ ಗೌರಿ ಗಂಡನೊಂದಿಗೆ ಬೆಂಗಳೂರಿಗೆ ಬಂದು ಕೆಲಸದ ಹುಡುಕಾಟ ನಡೆಸುತ್ತಿದ್ದಳು. ಪತಿ ರಾಕೇಶ್ ಮಹಾರಾಷ್ಟ್ರದ ಪುಣೆ ಮೂಲದ ನಿವಾಸಿಯಾಗಿದ್ದು ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಕಂಪನಿಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಆಗಿದ್ದ.
ಒಂದು ತಿಂಗಳ ಹಿಂದಷ್ಟೇ ಬೆಂಗಳೂರಿನ ಹುಳಿಮಾವು ಪರಿಸರದ ದೊಡ್ಡ ಕಮ್ಮನಹಳ್ಳಿಯ ಬಾಡಿಗೆ ಮನೆ ಮಾಡಿ ನೆಲೆಸಿದ್ದರು. ಪತ್ನಿ ಗೌರಿ, ಮನೆಯಲ್ಲೇ ಇದ್ದು ಕೆಲಸ ಹುಡುಕುತ್ತಿದ್ದಳು. ಈ ನಡುವೆ, ಪತಿ ರಾಕೇಶ್ ವರ್ಕ್ ಫ್ರಮ್ ಹೋಮ್ ಕೆಲ್ಸ ಮಾಡುತ್ತಿದ್ದ. ಸುಖ ಜೀವನದಲ್ಲಿದ್ದಾಗಲೇ ಮೊನ್ನೆ ರಾತ್ರಿ ಊಟದ ಸಮಯದಲ್ಲಿ ಪತಿ- ಪತ್ನಿ ಸಣ್ಣ ವಿಚಾರಕ್ಕೆ ಗಲಾಟೆ ಮಾಡಿದ್ದಾರೆ. ಗಲಾಟೆ ವಿರೋಪಕ್ಕೆ ತಿರುಗಿದ್ದು ರಾಕೇಶ್ ಕೋಪದಲ್ಲಿ ಚೂರಿಯಿಂದ ಇರಿದು ಪತ್ನಿಯನ್ನು ಕೊಲೆ ಮಾಡಿದ್ದಾನೆ. ಬಳಿಕ ಪತ್ನಿಯ ಕುತ್ತಿಗೆ, ಹೊಟ್ಟೆಯ ಭಾಗದಲ್ಲಿ ಕೊಯ್ದು ಸೂಟ್ಕೇಸ್ಗೆ ತುಂಬಿಸಿ ಹೊರಕ್ಕೆ ಒಯ್ಯಲು ಯತ್ನಿಸಿದ್ದಾನೆ.
ಆದರೆ ಸೂಟ್ಕೇಸ್ ತುಂಬಿದ್ದ ರಾಕೇಶ್ ನಡುರಾತ್ರಿ 12.30ರ ಸುಮಾರಿಗೆ ಒಬ್ಬನೇ ನಡೆದುಕೊಂಡು ಅಪಾರ್ಟ್ ಮೆಂಟ್ ಬಳಿ ನಿಲ್ಲಿಸಿದ್ದ ತನ್ನ ಕಾರಿನಲ್ಲಿ ಎಸ್ಕೇಪ್ ಆಗಿದ್ದಾನೆ. ಇದಕ್ಕೂ ಮುನ್ನ ಪತ್ನಿ ಗೌರಿ ಮನೆಯವರಿಗೆ ಮತ್ತು ತಾವು ಬಾಡಿಗೆ ಇದ್ದ ಕೆಳಗಿನ ಮನೆಯವರಿಗೂ ಕರೆ ಮಾಡಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ವಿಷ್ಯ ತಿಳಿಸಿದ್ದಾನೆ. ಕೆಳಗಿನ ಮನೆಯಲ್ಲಿದ್ದ ಮಾಲೀಕರು ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿದ್ದರು. ಬಳಿಕ ಹುಳಿಮಾವು ಪೊಲೀಸರು ಸ್ಥಳಕ್ಕೆ ಬಂದು, ಮನೆಯ ಬಾಗಿಲು ಓಪನ್ ಮಾಡಿದಾಗ ಟಾಯ್ಲೆಟ್ನಲ್ಲಿ ಇಟ್ಟಿದ್ದ ಸೂಟ್ಕೇಸ್ನಲ್ಲಿ ಶವ ಪತ್ತೆ ಆಗಿದೆ.
ಇದೇ ವೇಳೆ, ಪೊಲೀಸರು ಆರೋಪಿ ರಾಕೇಶ್ ಸಿಂಗ್ ನನ್ನು ಸಿಡಿಆರ್ ಮೂಲಕ ಟ್ರೇಸ್ ಮಾಡಿದ್ದು ಪುಣೆಯಲ್ಲಿ ಬಂಧಿಸಿದ್ದಾರೆ.
A 36-year-old man has been arrested in connection with the murder of his 32-year-old wife, whose body was found stuffed in a suitcase at their rented house in south Bengaluru.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am