ಬ್ರೇಕಿಂಗ್ ನ್ಯೂಸ್
31-03-25 09:29 pm Mangalore Correspondent ಕ್ರೈಂ
ಮಂಗಳೂರು, ಮಾ.31 : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ(ಮೂಡಾ) ಉರ್ವಾ ಕಚೇರಿಯಲ್ಲಿ ಬ್ರೋಕರುಗಳ ಆಟಾಟೋಪ ಮಿತಿಮೀರಿದ್ದು ಮುಡಾ ಕಮಿಷನರ್ ಅವರನ್ನೇ ಬ್ಲಾಕ್ಮೇಲ್ ಮಾಡುವ ಹಂತಕ್ಕಿಳಿದಿದ್ದಾರೆ. ಇದರಿಂದ ನೊಂದ ಮುಡಾ ಕಮಿಷನರ್ ನೂರ್ ಝಹರಾ ಖಾನಂ ಅವರು ಇಬ್ಬರು ಬ್ರೋಕರ್ ಗಳ ವಿರುದ್ಧ ಉರ್ವಾ ಠಾಣೆಗೆ ದೂರು ನೀಡಿದ್ದು ಎಫ್ಐಆರ್ ದಾಖಲಾಗಿದೆ.
ಬ್ರೋಕರ್ ವಹಾಬ್ (45) ಮತ್ತು ಅಸಿಸ್ಟೆಂಟ್ ಬ್ರೋಕರ್ ಸಬಿತ್ (25) ಎಂಬ ಇಬ್ಬರ ವಿರುದ್ಧ ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಜನವರಿ 7ರಂದು ಮುಡಾ ಕಚೇರಿ ಒಳಕ್ಕೆ ನುಗ್ಗಿದ್ದ ಬ್ರೋಕರ್ ವ್ಯಕ್ತಿಯೊಬ್ಬ ಸಿಬಂದಿ ಇಲ್ಲದ ಸಂದರ್ಭದಲ್ಲಿ ಕಚೇರಿ ದಾಖಲೆಗಳನ್ನು ಪರಿಶೀಲಿಸಿ ಫೋಟೊ ನಕಲು ಮಾಡಿದ್ದ ಘಟನೆ ನಡೆದಿತ್ತು. ಇದರ ಸಿಸಿಟಿವಿ ವಿಡಿಯೋ ಹೊರ ಬಂದಿದ್ದರಿಂದ ಮುಡಾ ಕಚೇರಿಯ ಬ್ರೋಕರ್ ವ್ಯವಹಾರ ಜಗಜ್ಜಾಹೀರಾಗಿತ್ತು. ಆನಂತರ ಮೂಡಾ ಕಮಿಷನರ್ ನೂರ್ ಝಹರಾ ಅವರು, ಸಿಬಂದಿ ಹೊರತುಪಡಿಸಿ ಇತರ ಯಾರು ಕೂಡ ಕಚೇರಿ ಒಳ ಬರುವಂತಿಲ್ಲ ಎಂದು ನಿರ್ಬಂಧ ವಿಧಿಸಿದ್ದರು.
ಇದರಿಂದ ಕಸಿವಿಸಿಗೊಳಗಾದ ಬ್ರೋಕರ್ ಗಳು ಮುಡಾ ಕಮಿಷನರ್ ವಿರುದ್ಧ ಇತರ ಬ್ರೋಕರುಗಳನ್ನು ಒಟ್ಟುಗೂಡಿಸಿ ವಾಟ್ಸಪ್ ಗ್ರೂಪ್ ರಚಿಸಿ ಮಹಿಳಾ ಕಮಿಷನರ್ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿಕೊಂಡಿದ್ದರು. ಅಧಿಕಾರಿ ಬಗ್ಗೆ ಅವಮಾನಕರ ಸಂದೇಶಗಳನ್ನು ಪೋಸ್ಟ್ ಮಾಡುವುದು, ಗುಂಪು ಕೂಡಿಕೊಂಡು ಕಚೇರಿ ಒಳಗೆ ಬಂದು ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಫೋನ್ ಮೂಲಕ ಜೀವ ಬೆದರಿಕೆ ಒಡ್ಡುವುದು ಮಾಡುತ್ತಿದ್ದರು.
ಅಲ್ಲದೆ, ಸಾರ್ವಜನಿಕರ ಮುಂದೆ ಕಮಿಷನರ್ ಅವರನ್ನು ಅವಮಾನಿಸುವುದು, ಜನರನ್ನು ಸೇರಿಸಿ ಶಾಂತಿ ಕದಡಲು ಯತ್ನಿಸಿದ್ದಲ್ಲದೆ, ವಾಮಾಚಾರ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾರೆ ಎಂದು ಮುಡಾ ಕಮಿಷನರ್ ನೂರ್ ಝಹರಾ ದೂರಿನಲ್ಲಿ ತಿಳಿಸಿದ್ದಾರೆ.
FIR has been registered against two brokers following allegations of blackmail and threats directed at Noor Zahara Khanam, the Muda Commissioner. The complaint was lodged after Khanam reportedly received life threats and was pressured into compliance through intimidation tactics.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am