ಬ್ರೇಕಿಂಗ್ ನ್ಯೂಸ್
01-04-25 11:07 pm Mangalore Correspondent ಕ್ರೈಂ
ಮಂಗಳೂರು, ಎ.1 : ಮನೆಯ ಲಾಕರಿನಲ್ಲಿಟ್ಟಿದ್ದ ಅಂದಾಜು ಒಂದು ಕೋಟಿ ಮೌಲ್ಯದ ಒಂದು ಕೇಜಿಯಷ್ಟು ಚಿನ್ನಾಭರಣ ಕಳವಾದ ಬಗ್ಗೆ ಬಜ್ಪೆ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬಜಪೆ ಸಮೀಪದ ಪೆರ್ಮುದೆ ನಿವಾಸಿ, ಕುವೈಟ್ ಉದ್ಯೋಗಿ ಜೋಸೆಫ್ ಪಿಂಟೋ ಎಂಬವರ ಮನೆಯಲ್ಲಿ ಕಳ್ಳತನ ಆಗಿದ್ದು ಮನೆ ನೋಡಿಕೊಳ್ಳುತ್ತಿದ್ದ ಕೇರಳ ಮೂಲದ ದಂಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ಜೋಸೆಫ್ ಪಿಂಟೋ ಅವರ ಕುಟುಂಬ ಕುವೈಟ್ ನಲ್ಲಿ ನೆಲೆಸಿದ್ದು ವರ್ಷಕ್ಕೊಮ್ಮೆ ಪೆರ್ಮುದೆಯ ಮನೆಗೆ ಬರುತ್ತಿದ್ದರು. ಮನೆಯ ಲಾಕರಿನಲ್ಲಿದ್ದ ಒಂದು ಕೆ.ಜಿ ಬಂಗಾರ ಕಳವಾಗಿರೋದು ಮಂಗಳವಾರ ತಿಳಿದುಬಂದಿದ್ದು ದಂಪತಿ ಪೊಲೀಸ್ ದೂರು ನೀಡಿದ್ದಾರೆ.
ಮನೆಯಲ್ಲಿ 12 ಸಿ.ಸಿ. ಕ್ಯಾಮರಾ ಹಾಗೂ ಆರು ನಾಯಿಗಳಿದ್ದು ಇದರ ನಡುವೆಯೇ ಕಳ್ಳತನ ಆಗಿರುವುದಾಗಿ ದೂರು ನೀಡಿದ ದಂಪತಿ ತಿಳಿಸಿದ್ದಾರೆ. ಆದರೆ ಮನೆಗೆ ಕಳ್ಳರು ಬಂದಿರುವುದರ ಬಗ್ಗೆ ಯಾವುದೇ ಸಿ.ಸಿ. ಕ್ಯಾಮರಾದಲ್ಲೂ ದಾಖಲಾಗಿಲ್ಲ. ಹೀಗಾಗಿ ಮನೆ ನೋಡಿಕೊಳ್ಳುತ್ತಿದ್ದ ಕೇರಳ ಮೂಲದ ದಂಪತಿ ಬಗ್ಗೆಯೇ ಸಂಶಯ ಉಂಟಾಗಿದೆ. ಮಾಲೀಕ ಜೋಸೆಫ್ ಪಿಂಟೋ ಸೂಚನೆಯಂತೆ ಪೊಲೀಸ್ ದೂರು ದಾಖಲಾಗಿದ್ದು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
In a shocking incident reported in Bajpe, Mangalore, gold jewellery valued at several crores was stolen from a residential locker, leaving homeowners in disbelief.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am