ಬ್ರೇಕಿಂಗ್ ನ್ಯೂಸ್
02-04-25 01:11 pm HK News Desk ಕ್ರೈಂ
ಚಿಕ್ಕಮಗಳೂರು, ಎ.2 : ವ್ಯಕ್ತಿಯೊಬ್ಬ ಪತ್ನಿ ತನ್ನನ್ನು ಬಿಟ್ಟುಹೋದ ಸಿಟ್ಟಿನಲ್ಲಿ ಆರು ವರ್ಷದ ಮಗಳು, ಅತ್ತೆ, ನಾದಿನಿಯನ್ನು ಗುಂಡು ಹಾರಿಸಿ ಕೊಲೆ ಮಾಡಿದ್ದು, ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಖಾಂಡ್ಯ ಹೋಬಳಿ ಗ್ರಾಮದಲ್ಲಿ ನಡೆದಿದೆ.
ಕಡಬಗೆರೆಯ ಶಾಲೆಯೊಂದರಲ್ಲಿ ವಾಹನ ಚಾಲಕನಾಗಿದ್ದ ರತ್ನಾಕರ್ ತನ್ನ ಕುಟುಂಬದ ಮೂವರನ್ನು ಗುಂಡು ಹಾರಿಸಿ ಕೊಲೆಗೈದು ಸಾವಿಗೀಡಾಗಿದ್ದಾನೆ. ಅತ್ತೆ ಜ್ಯೋತಿ(50), ಮಗಳು ಮೌಲ್ಯ(6) ಮತ್ತು ನಾದಿನಿ ಸಿಂಧು(24) ಗುಂಡು ತಗುಲಿ ಮೃತಪಟ್ಟವರು. ನಾದಿನಿಯ ಗಂಡನ ಕಾಲಿಗೆ ಗುಂಡು ತಗಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎರಡು ವರ್ಷದ ಹಿಂದೆ ರತ್ನಾಕರ್ ಪತ್ನಿ ಮಗಳು ಮತ್ತು ಪತಿಯನ್ನು ಬಿಟ್ಟು ಹೋಗಿದ್ದಳು. ಶಾಲೆಯಲ್ಲಿ ಸಹಪಾಠಿಗಳು ನಿಮ್ಮ ಅಮ್ಮ ಎಲ್ಲಿ ಎಂದು ಕೇಳುತ್ತಾರೆಂದು ಅಪ್ಪ ರತ್ನಾಕರ್ ಬಳಿ ಮಗಳು ಅಳಲು ತೋಡಿಕೊಂಡಿದ್ದಳು. ಇದರಿಂದ ಮನನೊಂದಿದ್ದ ರತ್ನಾಕರ್ ನಿನ್ನೆ ಮಂಗಳವಾರ ರಾತ್ರಿ 10 ಗಂಟೆ ವೇಳೆಗೆ ಮನೆಗೆ ತೆರಳಿ, ಅತ್ತೆ, ನಾದಿನಿ ಹಾಗೂ ಮಗಳನ್ನು ನಾಡ ಬಂದೂಕಿನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ.
ರಾತ್ರಿ 10 ಗಂಟೆ ಸುಮಾರಿನಲ್ಲಿ ಕೃತ್ಯ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಹತ್ಯೆಯ ಬಳಿಕ ರತ್ನಾಕರ್, ಸೆಲ್ಫಿ ವಿಡಿಯೋ ಮಾಡಿ ಸಂಸಾರದ ನೋವನ್ನು ತೋಡಿಕೊಂಡಿದ್ದಾನೆ. ನನ್ನ ಹೆಂಡತಿ ಮೋಸ ಮಾಡಿ ಹೋಗಿ 2 ವರ್ಷ ಆಯ್ತು. ಮಗಳನ್ನು ಬೇಡ ಅಂತ ಬಿಟ್ಟು ಹೋಗಿದ್ದಾಳೆ. ಈಗ ಶಾಲೆಯಲ್ಲಿ ನನ್ನ ಮಗಳಿಗೆ ಆಕೆಯ ಸ್ನೇಹಿತರು ನಿನ್ನ ಅಮ್ಮ ಎಲ್ಲಿ ಎಂದು ಕೇಳುತ್ತಾರೆ. ಮಗಳು ಆಲ್ಬಂನಿಂದ ಅಮ್ಮನ ಫೋಟೋ ತೆಗೆದುಕೊಂಡು ಹೋಗಿ ಈಕೆಯೇ ನನ್ನ ಅಮ್ಮ ಅಂತ ತೋರಿಸಿದ್ದಾಳೆ. ನನಗೆ ಹಿಂಸೆಯಾಗುತ್ತಿದ್ದು ಬದುಕು ಸಾಕೆಂದು ನಿರ್ಧರಿಸಿದ್ದೇನೆ ಎಂದು ವಿಡಿಯೋದಲ್ಲಿ ರತ್ನಾಕರ್ ನೋವನ್ನು ವ್ಯಕ್ತಪಡಿಸಿದ್ದಾನೆ.
ಮೂವರನ್ನು ಹತ್ಯೆ ಮಾಡಿದ ಬಳಿಕ ರತ್ನಾಕರ್ ತಾನು ಅದೇ ಬಂದೂಕಿನಿಂದ ಗುಂಡು ಹಾರಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆಯಲ್ಲಿ ಮೃತ ಸಿಂಧು ಗಂಡ ಅವಿನಾಶ್ ಕಾಲಿಗೂ ಗುಂಡೇಟು ತಗುಲಿದ್ದು ಆಸ್ಪತ್ರೆಗೆ ದಾಖಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Chikkamagaluru murder, father kills three of family including six year old daughter, kills himself. In a shocking incident that has sent ripples of horror through the community, a father allegedly shot and killed three members of his own family, including his six-year-old daughter, before turning the gun on himself.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm