ಬ್ರೇಕಿಂಗ್ ನ್ಯೂಸ್
03-04-25 05:01 pm HK News Desk ಕ್ರೈಂ
ಕಲಬುರಗಿ, ಎ.3 : ತನ್ನಿಬ್ಬರು ಮಕ್ಕಳು ಮತ್ತು ಪತ್ನಿಯನ್ನು ಕೊಂದು ಜೆಸ್ಕಾಂ ಹಿರಿಯ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ತಡರಾತ್ರಿ ಕಲಬುರಗಿ ನಗರದಲ್ಲಿ ನಡೆದಿದೆ.
ನಗರದ ಹಳೇ ಜೇವರ್ಗಿ ರಸ್ತೆಯ ಗಾಬರೆ ಲೇಔಟ್ನ ಅಪಾರ್ಟ್ಮೆಂಟ್ ಒಂದರಲ್ಲಿ ಘಟನೆ ನಡೆದಿದೆ. ಜೆಸ್ಕಾಂ ಅಧಿಕಾರಿ ಸಂತೋಷ್ ಕೊರಳಿ (45) ನೇಣು ಬಿಗಿದುಕೊಂಡಿದ್ದು ಇದಕ್ಕೂ ಮುನ್ನ ಪತ್ನಿ ಶೃತಿ (35), ಮಕ್ಕಳಾದ ಮುನೀಶ್ (9) ಹಾಗೂ ಮೂರು ತಿಂಗಳ ಮಗು ಅನೀಶ್ನನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಸಂತೋಷ್ ಅವರು ಕಲಬುರಗಿ ಜೆಸ್ಕಾಂ ಕಚೇರಿಯಲ್ಲಿ ಹಿರಿಯ ಸಹಾಯಕ ಲೆಕ್ಕಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿರಬಹುದು. ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಡೆತ್ ನೋಟ್ ಬರೆದಿಟ್ಟಿದ್ದು ಸಿಕ್ಕಿದೆ ಎಂದು ಕಲಬುರಗಿ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ. ತಿಳಿಸಿದ್ದಾರೆ.
'ಸಂತೋಷ್ ಹಾಗೂ ಶೃತಿ 10 ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿ ನಡುವೆ ಪದೇ ಪದೇ ಗಲಾಟೆ ಆಗುತ್ತಿತ್ತು. ಏಳು ವರ್ಷಗಳಿಂದ ಎರಡೂ ಕುಟುಂಬದ ಸಂಬಂಧಿಕರ ಜೊತೆಗೆ ಸಂಪರ್ಕ ಹೊಂದಿರಲಿಲ್ಲ. ಬುಧವಾರ ಸಂತೋಷ್ ಅವರು ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಂತೆ ಮತ್ತೆ ಗಲಾಟೆಯಾಗಿದೆ. ಕೌಟುಂಬಿಕ ಕಲಹಕ್ಕೆ ಈ ದುರುಂತ ನಡೆದಿರಬಹುದು ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ತನಿಖೆ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಅವರು ತಿಳಿಸಿದ್ದಾರೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident that has left the local community in disbelief, a government employee of JESCOM reportedly killed his wife and two children before taking his own life in a tragic family dispute.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
13-08-25 04:14 pm
HK News Desk
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm