ಬ್ರೇಕಿಂಗ್ ನ್ಯೂಸ್
07-04-25 11:23 am Mangalore Correspondent ಕ್ರೈಂ
ಮಂಗಳೂರು, ಎ.7 : ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ಯಾರೋ ಮಾಟ, ಮಂತ್ರ ಮಾಡಿಸಿದ್ದಾರೆಂದು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ, ಒಂದು ಲಕ್ಷ ರೂ.ಗಳನ್ನು ಪಡೆದು ವಂಚಿಸಿದ ಆರೋಪದಲ್ಲಿ ಹೆಜಮಾಡಿಯ ಮುಸ್ಲಿಂ ಧರ್ಮಗುರು ಒಬ್ಬನನ್ನು ಮಂಗಳೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
2022ರಲ್ಲಿ ಸಂತ್ರಸ್ತ ಮಹಿಳೆಗೆ ಖಿನ್ನತೆಯ ಸಮಸ್ಯೆ ಉಂಟಾಗಿದ್ದು , ಆಕೆ ತನ್ನ ಅಕ್ಕನ ಗಂಡನ ಸಲಹೆಯಂತೆ ಆಗ ಹೆಜಮಾಡಿಯಲ್ಲಿದ್ದ ಉಸ್ತಾದ್ ಅಬ್ದುಲ್ ಕರೀಮ್ ಮನೆಗೆ ಹೋಗಿದ್ದರು. ಅಲ್ಲಿ ಕೂಳೂರು ಉಸ್ತಾದ್ ಎಂಬ ಹೆಸರಿನ ಈ ಅಬ್ದುಲ್ ಕರೀಮ್ ಎಂಬಾತ ಮಹಿಳೆಯನ್ನು ನೋಡಿ ನಿಮಗೆ ಯಾರೋ ಮಾಟ ಮಂತ್ರ ಮಾಡಿಸಿದ್ದಾರೆ ಎಂದು ನಂಬಿಸಿ ಅದನ್ನು ತೆಗೆಸಬೇಕು ಎಂದು ಹೇಳಿದನೆನ್ನಲಾಗಿದೆ.
ಮಾಟ ಮಂತ್ರ ನಿವಾರಿಸುವ ಚಿಕಿತ್ಸೆ ಕೊಡುತ್ತೇನೆ ಎಂದು ನಂಬಿಸಿ ಆ ಮಹಿಳೆಯನ್ನು ಆಗಾಗ ತನ್ನ ಮನೆಗೆ ಬರಲು ತಿಳಿಸಿದ್ದ. ಮಹಿಳೆ ತನ್ನ ಅಕ್ಕನ ಜೊತೆ ಈ ವ್ಯಕ್ತಿಯ ಬಳಿ ಹಲವು ಬಾರಿ ಹೋಗಿದ್ದಾರೆ. ಅಲ್ಲಿ ಈತ ಮಹಿಳೆಗೆ ಕುರಾನ್ ಓದಿಸಿರುವುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ. 2022, ಫೆ.10 ರಂದು ಸಂತ್ರಸ್ತೆಯ ಅಕ್ಕನಿಗೆ ಕೆಲಸ ಇದ್ದ ಕಾರಣ ಸಂತ್ರಸ್ತೆ ಒಬ್ಬಳೇ ಹೆಜಮಾಡಿಯ ಮನೆಗೆ ಹೋಗಿದ್ದರು. ಅಲ್ಲಿ ಉಸ್ತಾದ್ ಆಕೆಯಲ್ಲಿ ಕುರಾನ್ ಓದಿಸಿ ಬಳಿಕ ಆಕೆಗೆ ಚಿಕಿತ್ಸೆಯ ನೆಪದಲ್ಲಿ ಮೈಮುಟ್ಟಿ ಕಿರುಕುಳ ನೀಡಿದ್ದಾನೆ. ಮತ್ತು ಮಹಿಳೆಯಿಂದ 55,000 ರೂ. ಪಡೆದಿರುವುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ.
ತಾನು ಹೆಜಮಾಡಿಗೆ ಹೋದಾಗಲೆಲ್ಲಾ, ತನ್ನಲ್ಲಿ ಚಿಕಿತ್ಸೆಗೆ ಜಾಸ್ತಿ ಹಣ ಖರ್ಚಾಗುತ್ತದೆ ಎಂದು ಉಸ್ತಾದ್ ಹೇಳಿ ತನ್ನನ್ನು ವಂಚಿಸಿ ಸುಮಾರು ಒಂದು ಲಕ್ಷ ರೂ. ಪಡೆದು ವಂಚಿಸಿರುವುದಾಗಿ ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ. ಮಂಗಳೂರು ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕ ಬಾಲಕೃಷ್ಣ ನಾಯಕ್ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Mangalore Maulvi Arrested for Sexually Harassing Woman Under Guise of Black Magic Rituals. The arrested has been identified as G Abdul Kareem alias Kuloor Ustad, a resident of Guruvayanakere.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am