ಬ್ರೇಕಿಂಗ್ ನ್ಯೂಸ್
08-04-25 03:27 pm HK News Desk ಕ್ರೈಂ
ಕೊಯಂಬತ್ತೂರು, ಎ.8 : ತಮಿಳುನಾಡಿನ ಕೊಯಂಬತ್ತೂರು ನಗರದ ಕಿಂಗ್ಸ್ ಜನರೇಶನ್ ಚರ್ಚ್ ಪಾಸ್ಟರ್ ಆಗಿರುವ ಜಾನ್ ಜೇಬರಾಜ್ ಇಬ್ಬರು ಅಪ್ರಾಪ್ತ ಹೆಣ್ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ. ಕೊಯಂಬತ್ತೂರು ಮಹಿಳಾ ಠಾಣೆಯಲ್ಲಿ ಮಾರ್ಚ್ 21ರಂದು ಎಫ್ಐಆರ್ ದಾಖಲಾಗಿದ್ದು, ಅದರ ಬೆನ್ನಲ್ಲೇ ಜಾನ್ ತಲೆಮರೆಸಿಕೊಂಡಿದ್ದಾನೆ.
ಪೋಕ್ಸೋ ಕಾಯ್ದೆಯ 9(1) ಲೈಂಗಿಕ ಕಿರುಕುಳ ಮತ್ತು ಸೆಕ್ಷನ್ 10ರಡಿ ಕೇಸು ದಾಖಲಾಗಿದ್ದು, ಆರೋಪಿ ಪತ್ತೆಗಾಗಿ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದೆ. ಜಾನ್ ಜೇಬರಾಜ್ ಕೊಯಂಬತ್ತೂರಿನ ಜಿ.ಎನ್ ಮಿಲ್ಸ್ ಏರಿಯಾದಲ್ಲಿರುವ ತನ್ನ ಮನೆಯಲ್ಲಿ 17 ಮತ್ತು 14 ವರ್ಷದ ಇಬ್ಬರು ಬಾಲಕಿಯರಿಗೆ ಕಿರುಕುಳ ನೀಡಿದ್ದಾನೆಂದು ದೂರು ದಾಖಲಾಗಿದೆ.
17 ವರ್ಷದ ಅನಾಥ ಬಾಲಕಿಯನ್ನು ಪಾಸ್ಟರ್ ಜಾನ್ ಜೇಬರಾಜ್ ಅವರ ಅಜ್ಜ ಸಾಕಿಕೊಂಡಿದ್ದರೆ, 14 ವರ್ಷದ ಹೆಣ್ಮಗಳು ಆತನ ನೆರೆಮನೆಯ ನಿವಾಸಿಯಾಗಿದ್ದಳು. ಇಬ್ಬರು ಹೆಣ್ಮಕ್ಕಳು ಜಾನ್ ಮನೆಯಲ್ಲಿ ನಡೆದಿದ್ದ ಪಾರ್ಟಿಗೆ ಬಂದಿದ್ದು, ಅಲ್ಲಿ ಕಿರುಕುಳ ನೀಡಿದ್ದಾನೆಂದು ಆರೋಪಿಸಲಾಗಿದೆ. ಅಲ್ಲದೆ, ಈ ಬಗ್ಗೆ ಯಾರಿಗಾದ್ರೂ ಹೇಳಿದರೆ ಕೊಲ್ಲುತ್ತೇನೆಂದು ಬೆದರಿಕೆ ಹಾಕಿದ್ದನೆಂದು ದೂರಿನಲ್ಲಿ ತಿಳಿಸಿದ್ದಾರೆ.
ವರ್ಷದ ಹಿಂದೆ ನಡೆದ ಘಟನೆ ಬಗ್ಗೆ ಇತ್ತೀಚೆಗೆ 14 ವರ್ಷದ ಮಗಳು ತನ್ನ ಮನೆಯವರಿಗೆ ತಿಳಿಸಿದ್ದು ಅದರಂತೆ ಕೊಯಂಬತ್ತೂರು ಮಹಿಳಾ ಠಾಣೆಗೆ ದೂರು ನೀಡಲಾಗಿದೆ. ಆದರೆ ದೂರು ದಾಖಲಾದ ಬೆನ್ನಲ್ಲೇ ಆರೋಪಿ ಜಾನ್ ತಪ್ಪಿಸಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
Christian preacher Pastor John Jebaraj of Kings Generation Church, Coimbatore, has been booked under the Protection of Children from Sexual Offences (POCSO) Act, for allegedly sexually assaulting two minor girls. FIR was filed against him on March 21 by the Coimbatore Central All Women’s Police Station. The accused has been absconding since. According to reports, a special team has been formed to nab him
16-04-25 11:03 pm
Bangalore Correspondent
ಒಂದನೇ ತರಗತಿಗೆ ಪ್ರವೇಶ ; ಈ ವರ್ಷಕ್ಕೆ ಮಾತ್ರ ಮಕ್ಕಳ...
16-04-25 09:07 pm
Bigg Boss Kannada, Rajath arrested: ರೀಲ್ಸ್ ಶೋ...
16-04-25 06:42 pm
CM Siddaramaiah, Lokayukta, Muda: ಸಿಎಂ ಸಿದ್ದರ...
15-04-25 08:44 pm
Kannada Journalist S K Shyamsundar Death: ಹಿರ...
15-04-25 12:51 pm
16-04-25 03:54 pm
HK News Desk
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
16-04-25 10:58 pm
Mangalore Correspondent
Mangalore Traffic diversion, Anti Waqf bill p...
16-04-25 08:22 pm
Asif Apatbandava, Rauf Bengre Honey Trap, Man...
16-04-25 02:02 pm
Panambur Bike Accident, Mangalore: ಪಣಂಬೂರಿನಲ್...
16-04-25 01:29 pm
NIA, Praveen Nettaru: ಪ್ರವೀಣ್ ನೆಟ್ಟಾರು ಕೊಲೆ ಪ...
15-04-25 09:57 pm
15-04-25 10:24 pm
HK News Desk
Pastor John Jebraj Arrest: ಇಬ್ಬರು ಹೆಣ್ಮಕ್ಕಳಿಗ...
15-04-25 06:17 pm
Mangalore Crime, Fire: ಕುಡಿದ ಮತ್ತಿನಲ್ಲಿ ಏಸಿಡ್...
15-04-25 05:13 pm
Mangalore CCB, Drugs, Crime: ಮಂಗಳೂರು ಸಿಸಿಬಿ ಪ...
12-04-25 10:52 pm
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm