ಬ್ರೇಕಿಂಗ್ ನ್ಯೂಸ್
08-04-25 03:27 pm HK News Desk ಕ್ರೈಂ
ಕೊಯಂಬತ್ತೂರು, ಎ.8 : ತಮಿಳುನಾಡಿನ ಕೊಯಂಬತ್ತೂರು ನಗರದ ಕಿಂಗ್ಸ್ ಜನರೇಶನ್ ಚರ್ಚ್ ಪಾಸ್ಟರ್ ಆಗಿರುವ ಜಾನ್ ಜೇಬರಾಜ್ ಇಬ್ಬರು ಅಪ್ರಾಪ್ತ ಹೆಣ್ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ. ಕೊಯಂಬತ್ತೂರು ಮಹಿಳಾ ಠಾಣೆಯಲ್ಲಿ ಮಾರ್ಚ್ 21ರಂದು ಎಫ್ಐಆರ್ ದಾಖಲಾಗಿದ್ದು, ಅದರ ಬೆನ್ನಲ್ಲೇ ಜಾನ್ ತಲೆಮರೆಸಿಕೊಂಡಿದ್ದಾನೆ.
ಪೋಕ್ಸೋ ಕಾಯ್ದೆಯ 9(1) ಲೈಂಗಿಕ ಕಿರುಕುಳ ಮತ್ತು ಸೆಕ್ಷನ್ 10ರಡಿ ಕೇಸು ದಾಖಲಾಗಿದ್ದು, ಆರೋಪಿ ಪತ್ತೆಗಾಗಿ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದೆ. ಜಾನ್ ಜೇಬರಾಜ್ ಕೊಯಂಬತ್ತೂರಿನ ಜಿ.ಎನ್ ಮಿಲ್ಸ್ ಏರಿಯಾದಲ್ಲಿರುವ ತನ್ನ ಮನೆಯಲ್ಲಿ 17 ಮತ್ತು 14 ವರ್ಷದ ಇಬ್ಬರು ಬಾಲಕಿಯರಿಗೆ ಕಿರುಕುಳ ನೀಡಿದ್ದಾನೆಂದು ದೂರು ದಾಖಲಾಗಿದೆ.
17 ವರ್ಷದ ಅನಾಥ ಬಾಲಕಿಯನ್ನು ಪಾಸ್ಟರ್ ಜಾನ್ ಜೇಬರಾಜ್ ಅವರ ಅಜ್ಜ ಸಾಕಿಕೊಂಡಿದ್ದರೆ, 14 ವರ್ಷದ ಹೆಣ್ಮಗಳು ಆತನ ನೆರೆಮನೆಯ ನಿವಾಸಿಯಾಗಿದ್ದಳು. ಇಬ್ಬರು ಹೆಣ್ಮಕ್ಕಳು ಜಾನ್ ಮನೆಯಲ್ಲಿ ನಡೆದಿದ್ದ ಪಾರ್ಟಿಗೆ ಬಂದಿದ್ದು, ಅಲ್ಲಿ ಕಿರುಕುಳ ನೀಡಿದ್ದಾನೆಂದು ಆರೋಪಿಸಲಾಗಿದೆ. ಅಲ್ಲದೆ, ಈ ಬಗ್ಗೆ ಯಾರಿಗಾದ್ರೂ ಹೇಳಿದರೆ ಕೊಲ್ಲುತ್ತೇನೆಂದು ಬೆದರಿಕೆ ಹಾಕಿದ್ದನೆಂದು ದೂರಿನಲ್ಲಿ ತಿಳಿಸಿದ್ದಾರೆ.
ವರ್ಷದ ಹಿಂದೆ ನಡೆದ ಘಟನೆ ಬಗ್ಗೆ ಇತ್ತೀಚೆಗೆ 14 ವರ್ಷದ ಮಗಳು ತನ್ನ ಮನೆಯವರಿಗೆ ತಿಳಿಸಿದ್ದು ಅದರಂತೆ ಕೊಯಂಬತ್ತೂರು ಮಹಿಳಾ ಠಾಣೆಗೆ ದೂರು ನೀಡಲಾಗಿದೆ. ಆದರೆ ದೂರು ದಾಖಲಾದ ಬೆನ್ನಲ್ಲೇ ಆರೋಪಿ ಜಾನ್ ತಪ್ಪಿಸಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
Christian preacher Pastor John Jebaraj of Kings Generation Church, Coimbatore, has been booked under the Protection of Children from Sexual Offences (POCSO) Act, for allegedly sexually assaulting two minor girls. FIR was filed against him on March 21 by the Coimbatore Central All Women’s Police Station. The accused has been absconding since. According to reports, a special team has been formed to nab him
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am