ಬ್ರೇಕಿಂಗ್ ನ್ಯೂಸ್
08-04-25 03:27 pm HK News Desk ಕ್ರೈಂ
ಕೊಯಂಬತ್ತೂರು, ಎ.8 : ತಮಿಳುನಾಡಿನ ಕೊಯಂಬತ್ತೂರು ನಗರದ ಕಿಂಗ್ಸ್ ಜನರೇಶನ್ ಚರ್ಚ್ ಪಾಸ್ಟರ್ ಆಗಿರುವ ಜಾನ್ ಜೇಬರಾಜ್ ಇಬ್ಬರು ಅಪ್ರಾಪ್ತ ಹೆಣ್ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ. ಕೊಯಂಬತ್ತೂರು ಮಹಿಳಾ ಠಾಣೆಯಲ್ಲಿ ಮಾರ್ಚ್ 21ರಂದು ಎಫ್ಐಆರ್ ದಾಖಲಾಗಿದ್ದು, ಅದರ ಬೆನ್ನಲ್ಲೇ ಜಾನ್ ತಲೆಮರೆಸಿಕೊಂಡಿದ್ದಾನೆ.
ಪೋಕ್ಸೋ ಕಾಯ್ದೆಯ 9(1) ಲೈಂಗಿಕ ಕಿರುಕುಳ ಮತ್ತು ಸೆಕ್ಷನ್ 10ರಡಿ ಕೇಸು ದಾಖಲಾಗಿದ್ದು, ಆರೋಪಿ ಪತ್ತೆಗಾಗಿ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದೆ. ಜಾನ್ ಜೇಬರಾಜ್ ಕೊಯಂಬತ್ತೂರಿನ ಜಿ.ಎನ್ ಮಿಲ್ಸ್ ಏರಿಯಾದಲ್ಲಿರುವ ತನ್ನ ಮನೆಯಲ್ಲಿ 17 ಮತ್ತು 14 ವರ್ಷದ ಇಬ್ಬರು ಬಾಲಕಿಯರಿಗೆ ಕಿರುಕುಳ ನೀಡಿದ್ದಾನೆಂದು ದೂರು ದಾಖಲಾಗಿದೆ.
17 ವರ್ಷದ ಅನಾಥ ಬಾಲಕಿಯನ್ನು ಪಾಸ್ಟರ್ ಜಾನ್ ಜೇಬರಾಜ್ ಅವರ ಅಜ್ಜ ಸಾಕಿಕೊಂಡಿದ್ದರೆ, 14 ವರ್ಷದ ಹೆಣ್ಮಗಳು ಆತನ ನೆರೆಮನೆಯ ನಿವಾಸಿಯಾಗಿದ್ದಳು. ಇಬ್ಬರು ಹೆಣ್ಮಕ್ಕಳು ಜಾನ್ ಮನೆಯಲ್ಲಿ ನಡೆದಿದ್ದ ಪಾರ್ಟಿಗೆ ಬಂದಿದ್ದು, ಅಲ್ಲಿ ಕಿರುಕುಳ ನೀಡಿದ್ದಾನೆಂದು ಆರೋಪಿಸಲಾಗಿದೆ. ಅಲ್ಲದೆ, ಈ ಬಗ್ಗೆ ಯಾರಿಗಾದ್ರೂ ಹೇಳಿದರೆ ಕೊಲ್ಲುತ್ತೇನೆಂದು ಬೆದರಿಕೆ ಹಾಕಿದ್ದನೆಂದು ದೂರಿನಲ್ಲಿ ತಿಳಿಸಿದ್ದಾರೆ.
ವರ್ಷದ ಹಿಂದೆ ನಡೆದ ಘಟನೆ ಬಗ್ಗೆ ಇತ್ತೀಚೆಗೆ 14 ವರ್ಷದ ಮಗಳು ತನ್ನ ಮನೆಯವರಿಗೆ ತಿಳಿಸಿದ್ದು ಅದರಂತೆ ಕೊಯಂಬತ್ತೂರು ಮಹಿಳಾ ಠಾಣೆಗೆ ದೂರು ನೀಡಲಾಗಿದೆ. ಆದರೆ ದೂರು ದಾಖಲಾದ ಬೆನ್ನಲ್ಲೇ ಆರೋಪಿ ಜಾನ್ ತಪ್ಪಿಸಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
Christian preacher Pastor John Jebaraj of Kings Generation Church, Coimbatore, has been booked under the Protection of Children from Sexual Offences (POCSO) Act, for allegedly sexually assaulting two minor girls. FIR was filed against him on March 21 by the Coimbatore Central All Women’s Police Station. The accused has been absconding since. According to reports, a special team has been formed to nab him
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm