ಬ್ರೇಕಿಂಗ್ ನ್ಯೂಸ್
08-04-25 10:01 pm HK News Desk ಕ್ರೈಂ
ಕಾರವಾರ, ಎ.8: ಉತ್ತರ ಕನ್ನಡ ಜಿಲ್ಲೆಯ ಮನೆಯೊಂದರಲ್ಲಿ 500 ರೂ. ಮುಖಬೆಲೆಯ ಬರೋಬ್ಬರಿ 14 ಕೋಟಿ ಖೋಟಾ ನೋಟುಗಳು ಪತ್ತೆಯಾಗಿದ್ದು, ನೋಟುಗಳನ್ನು ಕಂಡು ಪೊಲೀಸರೇ ಶಾಕ್ ಆಗಿದ್ದಾರೆ. ದಾಂಡೇಲಿಯ ಗಾಂಧಿ ನಗರದ ಅರ್ಷದ್ ಖಾನ್ ಎಂಬಾತನ ಮನೆಯಲ್ಲಿ 500 ರೂ. ಮೌಲ್ಯದ 14 ಕೋಟಿ ರೂ. ನಕಲಿ ನೋಟುಗಳನ್ನ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಖಚಿತ ಮಾಹಿತಿ ಮೇರೆಗೆ ನಗರ ಠಾಣೆ ಪೊಲೀಸರು ದಾಳಿ ನಡೆಸಿ ನಕಲಿ ನೋಟುಗಳು ಹಾಗೂ ಹಣ ಏಣಿಕೆ ಯಂತ್ರವನ್ನ ವಶಪಡಿಸಿದ್ದಾರೆ. ನೂರ್ಜಾನ್ ಜುಂಜುವಾಡ್ಕರ ಎಂಬವರಿಗೆ ಸೇರಿದ ಮನೆಯಲ್ಲಿ ಗೋವಾ ಮೂಲದವನು ಎನ್ನಲಾದ ಅರ್ಷದ್ ಬಾಡಿಗೆಗೆ ವಾಸವಿದ್ದ. ಕಳೆದ ಒಂದು ತಿಂಗಳಿನಿಂದ ಈತ ಮನೆಯಲ್ಲಿ ಇಲ್ಲದೇ ಇರುವುದನ್ನ ಗಮನಿಸಿ, ಮತ್ತು ಮನೆಯ ಹಿಂಬದಿಯ ಬಾಗಿಲ ಚಿಲಕ ಸರಿ ಹಾಕದೇ ಇರುವುದನ್ನು ತಿಳಿದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪರಿಶೀಲನೆ ಮಾಡಿದಾಗ ನಕಲಿ ನೋಟುಗಳ ಜಾಲ ಪತ್ತೆಯಾಗಿದೆ.
500 ರೂ. ನೋಟಿನ ಮೇಲೆ ರಿವರ್ಸ್ ಬ್ಯಾಂಕ್ ಆಫ್ ಇಂಡಿಯಾ ಎಂಬ ಬರಹ ಇದ್ದು, ಗವರ್ನರ್ ಸಹಿ ಖಾಲಿ ಬಿಡಲಾಗಿದೆ. ಸಂಖ್ಯೆಗಳಿರಬೇಕಾದ ಜಾಗದಲ್ಲಿ ಸೊನ್ನೆಯನ್ನಷ್ಟೇ ನಮೂದಿಸಲಾಗಿದೆ. ಮೂವಿ ಶೂಟಿಂಗ್ ಪರ್ಪಸ್ ಓನ್ಲಿ ಎಂದು ಬರೆದಿರುವ ಶೈನಿಂಗ್ ಪೇಪರಿನಲ್ಲಿ ಮುದ್ರಿತ 500 ಮುಖಬೆಲೆಯ ಅಂದಾಜು 14 ಕೋಟಿ ರೂಪಾಯಿ ನಕಲಿ ನೋಟುಗಳು ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಪಡಿಸಿದ್ದಾರೆ.
ಮನೆಯಲ್ಲಿ ಬಾಡಿಗೆದಾರನಾಗಿದ್ದ ಅರ್ಷದ್ ಖಾನ್ ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ.
Fake note racket busted at Dandeli, 14 crore rs fake note Seized. The arrested has been identified as Arshad Khan native of Goa.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am