ಬ್ರೇಕಿಂಗ್ ನ್ಯೂಸ್
08-04-25 10:01 pm HK News Desk ಕ್ರೈಂ
ಕಾರವಾರ, ಎ.8: ಉತ್ತರ ಕನ್ನಡ ಜಿಲ್ಲೆಯ ಮನೆಯೊಂದರಲ್ಲಿ 500 ರೂ. ಮುಖಬೆಲೆಯ ಬರೋಬ್ಬರಿ 14 ಕೋಟಿ ಖೋಟಾ ನೋಟುಗಳು ಪತ್ತೆಯಾಗಿದ್ದು, ನೋಟುಗಳನ್ನು ಕಂಡು ಪೊಲೀಸರೇ ಶಾಕ್ ಆಗಿದ್ದಾರೆ. ದಾಂಡೇಲಿಯ ಗಾಂಧಿ ನಗರದ ಅರ್ಷದ್ ಖಾನ್ ಎಂಬಾತನ ಮನೆಯಲ್ಲಿ 500 ರೂ. ಮೌಲ್ಯದ 14 ಕೋಟಿ ರೂ. ನಕಲಿ ನೋಟುಗಳನ್ನ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಖಚಿತ ಮಾಹಿತಿ ಮೇರೆಗೆ ನಗರ ಠಾಣೆ ಪೊಲೀಸರು ದಾಳಿ ನಡೆಸಿ ನಕಲಿ ನೋಟುಗಳು ಹಾಗೂ ಹಣ ಏಣಿಕೆ ಯಂತ್ರವನ್ನ ವಶಪಡಿಸಿದ್ದಾರೆ. ನೂರ್ಜಾನ್ ಜುಂಜುವಾಡ್ಕರ ಎಂಬವರಿಗೆ ಸೇರಿದ ಮನೆಯಲ್ಲಿ ಗೋವಾ ಮೂಲದವನು ಎನ್ನಲಾದ ಅರ್ಷದ್ ಬಾಡಿಗೆಗೆ ವಾಸವಿದ್ದ. ಕಳೆದ ಒಂದು ತಿಂಗಳಿನಿಂದ ಈತ ಮನೆಯಲ್ಲಿ ಇಲ್ಲದೇ ಇರುವುದನ್ನ ಗಮನಿಸಿ, ಮತ್ತು ಮನೆಯ ಹಿಂಬದಿಯ ಬಾಗಿಲ ಚಿಲಕ ಸರಿ ಹಾಕದೇ ಇರುವುದನ್ನು ತಿಳಿದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪರಿಶೀಲನೆ ಮಾಡಿದಾಗ ನಕಲಿ ನೋಟುಗಳ ಜಾಲ ಪತ್ತೆಯಾಗಿದೆ.
500 ರೂ. ನೋಟಿನ ಮೇಲೆ ರಿವರ್ಸ್ ಬ್ಯಾಂಕ್ ಆಫ್ ಇಂಡಿಯಾ ಎಂಬ ಬರಹ ಇದ್ದು, ಗವರ್ನರ್ ಸಹಿ ಖಾಲಿ ಬಿಡಲಾಗಿದೆ. ಸಂಖ್ಯೆಗಳಿರಬೇಕಾದ ಜಾಗದಲ್ಲಿ ಸೊನ್ನೆಯನ್ನಷ್ಟೇ ನಮೂದಿಸಲಾಗಿದೆ. ಮೂವಿ ಶೂಟಿಂಗ್ ಪರ್ಪಸ್ ಓನ್ಲಿ ಎಂದು ಬರೆದಿರುವ ಶೈನಿಂಗ್ ಪೇಪರಿನಲ್ಲಿ ಮುದ್ರಿತ 500 ಮುಖಬೆಲೆಯ ಅಂದಾಜು 14 ಕೋಟಿ ರೂಪಾಯಿ ನಕಲಿ ನೋಟುಗಳು ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಪಡಿಸಿದ್ದಾರೆ.
ಮನೆಯಲ್ಲಿ ಬಾಡಿಗೆದಾರನಾಗಿದ್ದ ಅರ್ಷದ್ ಖಾನ್ ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ.
Fake note racket busted at Dandeli, 14 crore rs fake note Seized. The arrested has been identified as Arshad Khan native of Goa.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am