ಬ್ರೇಕಿಂಗ್ ನ್ಯೂಸ್
19-12-20 08:28 am Mangaluru Correspondent ಕ್ರೈಂ
ಮಂಗಳೂರು, ಡಿ.19: ಬಾಲಕನ ಅಪಹರಿಸಿ, ಬಿಟ್ ಕಾಯಿನ್ ರೂಪದಲ್ಲಿ ಹಣದ ಬೇಡಿಕೆ ಇಟ್ಟಿದ್ದ ಕಿಡ್ನಾಪರ್ಸ್ ಗಳನ್ನು ಪೊಲೀಸರು ಕೊನೆಗೂ ಬಂಧಿಸಲು ಯಶಸ್ವಿಯಾಗಿದ್ದಾರೆ.
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೂರ್ನಹೊಸಳ್ಳಿ ಗ್ರಾಮದ ಮನೆ ಒಂದರಲ್ಲಿ ಬಾಲಕನನ್ನು ಇರಿಸಲಾಗಿತ್ತು. ಮಂಜುನಾಥ್ ಎಂಬವರ ಮನೆಯಲ್ಲಿ ಇರಿಸಿದ್ದ ಬಾಲಕನನ್ನು ಮಾಸ್ತಿ ಠಾಣೆಯ ಪೊಲೀಸರು ರಕ್ಷಣೆ ಮಾಡಿದ್ದು ಪ್ರಕರಣ ಸಂಬಂಧಿಸಿ ನಾಲ್ವರನ್ನು ಬಂಧಿಸಿದ್ದಾರೆ. ಮಂಡ್ಯ ಮೂಲದ ಗಂಗಾಧರ್, ಬೆಂಗಳೂರಿನ ಕೋಮಲ್, ಕೂರ್ನಹೊಸಹಳ್ಳಿ ಗ್ರಾಮದ ಮಂಜುನಾಥ್ ಮತ್ತು ಮಹೇಶ್ ಎಂಬವರನ್ನು ಬಂಧಿಸಲಾಗಿದೆ.

ಬೆಂಗಳೂರಿನ ಇಲೆಕ್ಟ್ರಾನಿಕ್ ಸಿಟಿಯಲ್ಲಿ ಟ್ಯಾಂಕರ್ ಚಾಲಕನಾಗಿದ್ದ ಮಹೇಶ್ ಮತ್ತು ಕೋಮಲ್ ಗೆಳೆಯರಾಗಿದ್ದು ಮಂಡ್ಯದ ಗಂಗಾಧರ್ ಜೊತೆ ಸೇರಿ ಕಿಡ್ನಾಪ್ ಸ್ಕೆಚ್ ರೂಪಿಸಿದ್ದರು ಎನ್ನಲಾಗಿದೆ. ಗುರುವಾರ ಸಂಜೆಯಿಂದ ಕಾರಿನಲ್ಲಿ ತಿರುಗಾಡುತ್ತಿದ್ದ ತಂಡ, ಶುಕ್ರವಾರ ಸಂಜೆ ಕೋಲಾರಕ್ಕೆ ತಲುಪಿದೆ. ಮಹೇಶ್ ಅಲ್ಲಿಯದ್ದೇ ನಿವಾಸಿ ಆಗಿರುವುದರಿಂದ ಮಾಲೂರಿನ ಕೂರ್ನಹೊಸಹಳ್ಳಿ ಗ್ರಾಮಕ್ಕೆ ಬಂದು ಮಂಜುನಾಥ್ ಎಂಬವರ ಫೋನ್ ಬಳಸಿ ಕರೆ ಮಾಡಿದ್ದಾರೆ. ಬಳಿಕ ಮಂಜುನಾಥ್ ಮನೆಯಲ್ಲಿ ಬಾಲಕನನ್ನು ಇರಿಸಿದ್ದಾರೆ. ಮೊಬೈಲ್ ಟ್ರೇಸ್ ಮಾಡುತ್ತಿದ್ದ ಮಂಗಳೂರು ಪೊಲೀಸರು ಎಲರ್ಟ್ ಆಗಿದ್ದು ಕೋಲಾರ ಎಸ್ಪಿ ಕಾರ್ತಿಕ್ ರೆಡ್ಡಿ ನೆರವಿನಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ರಾತ್ರೋರಾತ್ರಿ ಮಾಡಿದ ಕಾರ್ಯಾಚರಣೆಯಲ್ಲಿ ಅಪಹರಣಕಾರರಿಗೆ ಸಹಕರಿಸಿದ ಮಂಜುನಾಥ್ ಸೇರಿ ನಾಲ್ವರು ಸಿಕ್ಕಿಬಿದ್ದಿದ್ದಾರೆ.
ಗುರುವಾರ ಸಂಜೆ ಬೆಳ್ತಂಗಡಿ ತಾಲೂಕಿನ ಉಜಿರೆಯ ರಥಬೀದಿ ಬಳಿಯ ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ ಎಂಟು ವರ್ಷದ ಬಾಲಕ ಅನುಭವ್ ನನ್ನು ಇಂಡಿಕಾ ಕಾರಿನಲ್ಲಿ ಬಂದಿದ್ದ ಅಪಹರಣಕಾರರು ಕಿಡ್ನಾಪ್ ಮಾಡಿದ್ದರು. ಚಾರ್ಮಾಡಿ ಮೂಲಕ ಪರಾರಿಯಾಗಿದ್ದ ತಂಡ, ಹಾಸನದ ತಣ್ಣೀರುಹಳ್ಳದ ಮೂಲಕ ಬೆಂಗಳೂರು ಹೋಗಿದ್ದು ಗೊತ್ತಾಗಿತ್ತು. ಹೀಗಾಗಿ ನಾಲ್ಕು ಪೊಲೀಸ್ ತಂಡಗಳನ್ನು ರಚಿಸಿದ್ದ ದ.ಕ. ಎಸ್ಪಿ ಲಕ್ಷ್ಮೀ ಪ್ರಸಾದ್, ಕಾರ್ಯಾಚರಣೆಗೆ ಇಳಿಸಿದ್ದರು. ಈ ನಡುವೆ, ಬಾಲಕನ ಮನೆಯವರಿಗೆ ಕರೆ ಮಾಡಿದ್ದ ತಂಡ 17 ಕೋಟಿಗೆ ಡಿಮ್ಯಾಂಡ್ ಇಟ್ಟಿತ್ತು.
Video:
The Police have arrested four kidnappers in connection to Kidnap of Eight-year-old boy who was kidnapped from Ujre, Mangalore. The Kidnappers were arrested by Mangalore police in Kolar.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm