ಬ್ರೇಕಿಂಗ್ ನ್ಯೂಸ್
09-04-25 11:17 pm HK News Desk ಕ್ರೈಂ
ಜೈಪುರ, ಎ.9 : ಸಾಮೂಹಿಕ ವಿವಾಹದ ನೆಪದಲ್ಲಿ ಬಡ ಯುವತಿಯರನ್ನು ಮಾರಾಟ ಮಾಡುತ್ತಿದ್ದ ಖತರ್ನಾಕ್ ಎನ್ ಜಿಒ ತಂಡವನ್ನು ರಾಜಸ್ಥಾನ ಪೊಲೀಸರು ಖೆಡ್ಡಾಕ್ಕೆ ಕೆಡವಿದ್ದಾರೆ.
ರಾಜಸ್ತಾನ ರಾಜಧಾನಿ ಜೈಪುರ ಸಮೀಪದಲ್ಲಿ ಸಾಮೂಹಿಕ ವಿವಾಹದ ಹೆಸರಲ್ಲಿ ಬಡ ಕುಟುಂಬದ ಯುವತಿಯರನ್ನು ಪುರುಷರಿಗೆ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಇದರೊಂದಿಗೆ ಬಹುದೊಡ್ಡ ಮಾನವ ಕಳ್ಳ ಸಾಗಣೆ ಜಾಲ ಬಯಲಿಗೆ ಬಂದಿದೆ. ಸಾಮೂಹಿಕ ವಿವಾಹ ಆಯೋಜನೆ ಮಾಡುತ್ತಿದ್ದ ಎನ್ ಜಿಒ ಸಂಘಟನೆಯೊಂದು ಯುವತಿಯರನ್ನು 2.5 ಲಕ್ಷದಿಂದ 5 ಲಕ್ಷ ರೂ.ಗಳಿಗೆ ಮಾರಾಟ ಮಾಡುತ್ತಿತ್ತು ಎಂಬ ಆರೋಪಗಳಿವೆ.
ಬಡ ಕುಟುಂಬಗಳ ಮಹಿಳೆಯರಿಗಾಗಿ ಎನ್ ಜಿಓ ಸಾಮೂಹಿಕ ವಿವಾಹಗಳನ್ನು ಆಯೋಜಿಸುತ್ತಿತ್ತು. ಬಡ ಕುಟುಂಬಗಳಿಂದ ಹುಡುಗಿಯರನ್ನು ಕಳ್ಳಸಾಗಣೆ ಮಾಡುವ ಏಜೆಂಟ್ಗಳಿಂದ 'ಖರೀದಿಸಿ' ವಧುವನ್ನು ಹುಡುಕುತ್ತಿರುವ ಯುವಕರಿಗೆ ಮಾರಾಟ ಮಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜೈಪುರದಿಂದ ಸುಮಾರು 30 ಕಿ.ಮೀ ದೂರದ ಬಸ್ಸಿಯ ಸುಜನ್ಪುರ ಗ್ರಾಮದಲ್ಲಿ ಗಾಯತ್ರಿ ಸರ್ವ ಸಮಾಜ ಪ್ರತಿಷ್ಠಾನ ಎಂಬ ಎನ್ ಜಿಓ ಹೆಸರಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದರು. ಈ ಸಂಸ್ಥೆ ಸಾಮೂಹಿಕ ವಿವಾಹಗಳನ್ನು ಆಯೋಜಿಸುವುದಾಗಿ ಹೇಳಿಕೊಂಡಿತ್ತು. ಗಾಯತ್ರಿ ಎಂಬ ಮಹಿಳೆ ಇದರ ಮುಖ್ಯಸ್ಥಳಾಗಿದ್ದು, ಮದುವೆಯಾಗಲು ಬಯಸುತ್ತಿದ್ದ ಯುವಕರಿಗೆ ಹುಡುಗಿಯರ ಫೋಟೋ ತೋರಿಸಿ ಅವರಿಂದ ಹಣ ಪಡೆದು ಯುವತಿಯರನ್ನು ಮಾರಾಟ ಮಾಡುತ್ತಿದ್ದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗ್ಯಾಂಗ್ನ ಸದಸ್ಯರು ಬಿಹಾರ, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಉತ್ತರ ಪ್ರದೇಶದ ಬಡ ಕುಟುಂಬಗಳ ಹುಡುಗಿಯರನ್ನು ಎನ್ಜಿಒ ನಿರ್ದೇಶಕಿ ಗಾಯತ್ರಿಗೆ ಒಪ್ಪಿಸುತ್ತಿದ್ದರು. ಬಳಿಕ ಆಕೆ ತನ್ನ ಸಂಸ್ಥೆಗೆ ಮದುವೆಯಾಗಲು ಬರುವ ಗಂಡು ಮಕ್ಕಳಿಗೆ ಯುವತಿಯರ ಫೋಟೋ ತೋರಿಸಿ ಸೌಂದರ್ಯದ ಆಧಾರದ ಮೇಲೆ 2.5 ಲಕ್ಷ ರೂ.ನಿಂದ 5 ಲಕ್ಷ ರೂ. ವರೆಗೆ ಬೆಲೆ ನಿರ್ಧರಿಸುತ್ತಿದ್ದಳು. ಅಪ್ರಾಪ್ತ ವಯಸ್ಕರಿಗೆ 18 ವರ್ಷಕ್ಕಿಂತ ಮೇಲ್ಪಟ್ಟವರು ಎಂದು ತೋರಿಸಲು ನಕಲಿ ಆಧಾರ್ ಕಾರ್ಡ್ಗಳನ್ನು ವ್ಯವಸ್ಥೆ ಮಾಡುತ್ತಿದ್ದಳು. ಈ ರೀತಿ ಸುಮಾರು 1,500 ವಿವಾಹಗಳನ್ನು ಮಾಡಿಸಿದ್ದಾಳೆಂದು ಆಕೆಯ ವಿರುದ್ಧ ಹತ್ತು ಪ್ರಕರಣ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
A shocking human trafficking operation posing as a charitable NGO conducting mass weddings has been uncovered near Jaipur, Rajasthan.The NGO in question, operating under the name Gayatri Sarva Samaj Foundation, allegedly trafficked girls from economically weak families under the pretense of helping them get married.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm