ಬ್ರೇಕಿಂಗ್ ನ್ಯೂಸ್
15-04-25 06:17 pm HK News Desk ಕ್ರೈಂ
ಕೊಯಂಬತ್ತೂರು, ಎ.15: ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ತಮಿಳುನಾಡಿನ ಪ್ರಸಿದ್ಧ ಕ್ರಿಸ್ತಿಯನ್ ಗಾಯಕ ಪಾಸ್ಟರ್ ಜಾನ್ ಜೇಬರಾಜ್ (37) ಕಡೆಗೂ ಕೇರಳದ ಮುನ್ನಾರ್ ನಲ್ಲಿ ಅರೆಸ್ಟ್ ಆಗಿದ್ದಾನೆ. ಕೊಯಂಬತ್ತೂರಿನ ಮಹಿಳಾ ಠಾಣೆ ಪೊಲೀಸರು ತಲೆಮರೆಸಿಕೊಂಡು ಅವಿತಿದ್ದ ಜೇಬರಾಜ್ ನನ್ನು ಬಂಧಿಸಿ ಕೋರ್ಟಿಗೆ ಹಾಜರುಪಡಿಸಿದ್ದು, ಜೈಲಿಗೆ ತಳ್ಳಿದ್ದಾರೆ.
2024ರ ಮೇ ತಿಂಗಳಲ್ಲಿ ಜೇಬರಾಜ್ ತನ್ನ ಮನೆಯಲ್ಲಿ ಆಯೋಜಿಸಿದ್ದ ಪಾರ್ಟಿ ಸಂದರ್ಭದಲ್ಲಿ 17 ಮತ್ತು 14 ವರ್ಷದ ಇಬ್ಬರು ಅಪ್ರಾಪ್ತ ಹೆಣ್ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ದೂರು ದಾಖಲಾಗಿತ್ತು. ದೂರು ದಾಖಲಾದ ಬಳಿಕ ತಲೆತಪ್ಪಿಸಿಕೊಂಡು ಓಡಾಡುತ್ತಿದ್ದ ಜೇಬರಾಜ್ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕಿದ್ದರು. ಇದೀಗ ಕೇರಳದ ಪ್ರಸಿದ್ಧ ಪ್ರವಾಸಿ ತಾಣ ಮುನ್ನಾರ್ ನಲ್ಲಿ ಅವಿತುಕೊಂಡಿದ್ದ ಜೇಬರಾಜ್ ನನ್ನು ಬಂಧನ ಮಾಡಿದ್ದಾರೆ. ಆರೋಪಿಯನ್ನು ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಪೋಕ್ಸೋ ಕೇಸು ದಾಖಲಾದ ಬಳಿಕ ಕೊಯಂಬತ್ತೂರು ಪೊಲೀಸ್ ಕಮಿಷನರ್ ಸರವಣ ಸುಂದರ್ ಅವರು ಆರೋಪಿ ಜೇಬರಾಜ್ ದೇಶ ಬಿಟ್ಟು ಹೋಗದಂತೆ ಎಲರ್ಟ್ ಮಾಡುವುದಕ್ಕಾಗಿ ಲುಕೌಟ್ ನೋಟೀಸ್ ಜಾರಿ ಮಾಡಿದ್ದು, ಎಲ್ಲ ಏರ್ಪೋರ್ಟ್ ಮತ್ತು ಬಂದರುಗಳಿಗೂ ಮಾಹಿತಿ ರವಾನೆಯಾಗಿತ್ತು.
ಜಾನ್ ಜೇಬರಾಜ್ ಕೊಯಂಬತ್ತೂರಿನ ಕಿಂಗ್ಸ್ ಜನರೇಶನ್ ಚರ್ಚ್ ನಲ್ಲಿ ಪಾಸ್ಟರ್ ಆಗಿದ್ದ. ಅಲ್ಲದೆ, ಕ್ರಿಸ್ತಿಯನ್ನರ ಪ್ರಾರ್ಥನೆ ಹಾಡುಗಳನ್ನ ಹಾಡುವುದರ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಲಕ್ಷಗಟ್ಟಲೆ ಅಭಿಮಾನಿಗಳನ್ನ ಪಡೆದುಕೊಂಡಿದ್ದ. ಇತ್ತೀಚೆಗೆ ಕಿರುಕುಳಕ್ಕೀಡಾದ ಇಬ್ಬರು ಹೆಣ್ಮಕ್ಕಳ ಪೈಕಿ ಒಬ್ಬಾಕೆ ತನ್ನ ಸಂಬಂಧಿಕರಿಗೆ ವಿಷಯ ತಿಳಿಸಿದ್ದು, ಅದರಂತೆ ಪೋಕ್ಸೋ ಕಾಯ್ದೆಯಡಿ ಜಾನ್ ಜೇಬರಾಜ್ ವಿರುದ್ಧ ಕೇಸು ದಾಖಲಾಗಿತ್ತು.
ಇನ್ನು ಇತ್ತೀಚಿಗಷ್ಟೇ ತನ್ನ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿ ಹೆಂಡತಿ ಡಿವೋರ್ಸ್ ಪಡೆದು ಜಾನ್ ನಿಂದ ದೂರ ಸೆರೆದಿದ್ದರು. ಡಿವೋರ್ಸ್ ಬೆನ್ನಲ್ಲೇ ಹೆಂಡತಿ ಹಾಗೂ ಮಾವನ ವಿರುದ್ಧ ಜಾನ್ ಸಾಕಷ್ಟು ಆರೋಪಗಳನ್ನ ಮಾಡಿರುವ ಆಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಜಾನ್ ಜೇಬರಾಜ್ ಬಂಧನದ ಹಿಂದೆ ಮಾವನ ಕೈವಾಡ ಇರುವ ಶಂಕೆಯನ್ನ ಚರ್ಚಿನ ಸದಸ್ಯರು ವ್ಯಕ್ತಪಡಿಸಿದ್ದಾರೆ
A 37-year-old pastor from Tamil Nadu was arrested on charges of sexually assaulting two girls on Saturday in Kerala and brought back to the state, an officer said on Sunday.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm