ಬ್ರೇಕಿಂಗ್ ನ್ಯೂಸ್
18-04-25 10:59 pm Mangalore Correspondent ಕ್ರೈಂ
ಉಳ್ಳಾಲ, ಎ.18 : ಕುತ್ತಾರಿನಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಬಂಧಿತ ಮೂವರು ಆರೋಪಿಗಳನ್ನ ಉಳ್ಳಾಲ ಪೊಲೀಸರು ಶುಕ್ರವಾರ ಸರಕಾರಿ ರಜಾದಿನದ ಕಾರಣ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿ ಪಡೆದಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ಕೂಚ್ ಬೆಹರ್ ಜಿಲ್ಲೆಯ ಹತ್ತೊಂಭತ್ತು ವರುಷದ ಯುವತಿಯೋರ್ವಳಿಗೆ ಕೆಲಸ ಕೊಡಿಸುವ ಅಮಿಷವೊಡ್ಡಿ ,ಆಕೆಗೆ ಮದ್ಯ ಕುಡಿಸಿ ಕುತ್ತಾರು ರಾಣಿಪುರ ರಿಷಿವನ ಕಾನ್ವೆಂಟ್ ಬಳಿಯ ನದಿ ತೀರದಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಆರೋಪದಡಿ ಮೂವರು ಆರೋಪಿಗಳನ್ನ ಬಂಧಿಸಲಾಗಿತ್ತು.
ಆರೋಪಿಗಳಾದ ಆಟೋ ರಿಕ್ಷಾ ಚಾಲಕ ಮೂಲ್ಕಿ ಕಾರ್ನಾಡು ಲಿಂಗಪ್ಪಯ್ಯಕಾಡು ನಿವಾಸಿ ಪ್ರಭುರಾಜ್ (38), ಪೈಂಟರ್ ಕಮ್ ಎಲೆಕ್ಟ್ರೀಷಿಯನ್ ಕೆಲಸದ ಕುಂಪಲ ಚಿತ್ರಾಂಜಲಿ ನಗರ ನಿವಾಸಿ ಮಿಥುನ್ (37), ಡೆಲಿವರಿ ಬಾಯ್ ಆಗಿರುವ ಪಡೀಲ್ ಕೊಡಕ್ಕಲ್ ನಿವಾಸಿ ಮನೀಶ್ (30) ಎಂಬವರನ್ನು ಶುಕ್ರವಾರ ಉಳ್ಳಾಲ ಪೊಲೀಸರು ಕಸ್ಟಡಿಗೆ ತೆಗೆದಿದ್ದಾರೆ.
ಉಳ್ಳಾಲ ಪೊಲೀಸರು ಕಸ್ಟಡಿಯಲ್ಲಿರುವ ಆರೋಪಿಗಳನ್ನ ವೈದ್ಯಕೀಯ ಪರೀಕ್ಷೆಗೊಳಪಡಿಸಿ, ಹೆಚ್ಚಿನ ವಿಚಾರಣೆ ನಡೆಸಿ ಶನಿವಾರ ಸ್ಥಳ ಮಹಜರು ನಡೆಸುವ ಸಾಧ್ಯತೆಗಳಿವೆ. ಸಂತ್ರಸ್ತ ಪಶ್ಚಿಮ ಬಂಗಾಳ ಮೂಲದ ಯುವತಿಗೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ವೈದ್ಯಕೀಯ ವರದಿ ಬಂದ ನಂತರವೇ ಅತ್ಯಾಚಾರ ಕೃತ್ಯ ಸಾಬೀತಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿ ಕುಂಪಲ ನಿವಾಸಿ ಮಿಥುನ್ ವಿರುದ್ಧ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣವೊಂದಿದ್ದರೆ, ಹೆಣ್ಣು ಪೀಡನೆ ಸಂಬಂಧಿತ ಪ್ರಕರಣಗಳಲ್ಲಿ ಹಲವು ಬಾರಿ ಉಳ್ಳಾಲ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದನೆನ್ನಲಾಗಿದೆ.
ಗೂಗಲ್ ಪೇಯಿಂದ ಸಿಕ್ಕಿಬಿದ್ದ ಆರೋಪಿಗಳು
ಕೇರಳದ ಫ್ಲೈವುಡ್ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದ ಸಂತ್ರಸ್ತ ಯುವತಿ ತನ್ನ ಪ್ರಿಯಕರನೊಂದಿಗೆ ಗಲಾಟೆ ಮಾಡಿ ಬುಧವಾರ ಕೆಲಸ ಅರಸಿ ಮಂಗಳೂರಿಗೆ ರೈಲಿನಲ್ಲಿ ಬಂದಿದ್ದಳು. ರೈಲ್ವೇ ನಿಲ್ದಾಣದಲ್ಲಿ ಸಂತ್ರಸ್ತೆಯ ಸ್ನೇಹ ಸಂಪಾದಿಸಿದ ಆರೋಪಿ ರಿಕ್ಷಾ ಚಾಲಕ ಪ್ರಭುರಾಜ್ ಆಕೆಯ ಮೊಬೈಲ್ ರಿಪೇರಿ ಮಾಡಿಸಿದ್ದ. ಯುವತಿ ಈ ವೇಳೆ ಪಶ್ಚಿಮ ಬಂಗಾಳದಲ್ಲಿರುವ ತನ್ನ ಸಹೋದರಿಗೆ ಕರೆ ಮಾಡಿದ್ದಳು. ಯುವತಿಯ ಮೊಬೈಲಲ್ಲಿ ಗೂಗಲ್ ಪೇ ಆ್ಯಪ್ ಇಲ್ಲದ ಕಾರಣ ಪಶ್ಚಿಮ ಬಂಗಾಳದ ಸಹೋದರಿಯು ಆರೋಪಿ ರಿಕ್ಷಾ ಚಾಲಕನ ಗೂಗಲ್ ಪೇ ಖಾತೆಗೆ 2000 ರೂಪಾಯಿ ಕಳಿಸಿ, ತನ್ನ ಸೋದರಿಯನ್ನ ಪಶ್ಚಿಮ ಬಂಗಾಳದ ರೈಲು ಹತ್ತಿಸುವಂತೆ ಕೋರಿದ್ದರು. ಆದರೆ ಪ್ರಭುರಾಜ್ ಯುವತಿಗೆ ರೊಟ್ಟಿ ಕಂಪನಿಯೊಂದರಲ್ಲಿ ಕೆಲಸ ಕೊಡಿಸುವ ಆಮಿಷ ಒಡ್ಡಿ ತನ್ನ ಸ್ನೇಹಿತರ ಜೊತೆ ಸೇರಿ ಯುವತಿಯನ್ನ ದುರ್ಬಳಕೆ ಮಾಡಿದ್ದ. ಗೂಗಲ್ ಪೇ ನಂಬರಿನ ಜಾಡು ಹಿಡಿದ ಪೊಲೀಸರು ಮೂವರು ಆರೋಪಿಗಳನ್ನು ಸುಲಭದಲ್ಲಿ ಹೆಡೆಮುರಿ ಕಟ್ಟಿದ್ದಾರೆ.
The Mangalore police successfully apprehended the suspects involved in the recent gang rape incident in Ullal. The Mangaluru City police on Thursday, April 17, arrested three persons who are suspected to have gang raped a 20-year-old woman hailing from West Bengal.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am