ಬ್ರೇಕಿಂಗ್ ನ್ಯೂಸ್
22-04-25 03:26 pm Bangalore Correspondent ಕ್ರೈಂ
ಬೆಂಗಳೂರು, ಎ.22 : ನಿವೃತ್ತ ಡಿಜಿಪಿ ಓಂಪ್ರಕಾಶ್ ಕೊಲೆ ಪ್ರಕರಣದಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಮಧ್ಯಾಹ್ನ ಡೈನಿಂಗ್ ಟೇಬಲ್ನಲ್ಲಿ ಕುಳಿತು ಊಟ ಮಾಡುತ್ತಿರುವಾಗಲೇ ಪತ್ನಿ ಭೀಕರವಾಗಿ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆಗೈದಿದ್ದಾಳೆ ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ.
ಕೊಲೆಯಾದ ಭಾನುವಾರ ಮಧ್ಯಾಹ್ನ ಓಂ ಪ್ರಕಾಶ್ ಮನೆಗೆ ಊಟಕ್ಕೆ ಮೀನೂಟ ಪಾರ್ಸೆಲ್ ತರಿಸಿದ್ದರು. ಡೈನಿಂಗ್ ಟೇಬಲ್ನಲ್ಲಿ ಕುಳಿತು ಊಟ ಮಾಡುವಾಗ ದಂಪತಿ ನಡುವೆ ಜಗಳ ಶುರುವಾಗಿದೆ. ಈ ವೇಳೆ ಪತ್ನಿ ಪಲ್ಲವಿ ಏಕಾಏಕಿ ಚಾಕುವಿನಿಂದ ಓಂ ಪ್ರಕಾಶ್ ಮುಖಕ್ಕೆ ಇರಿದಿದ್ದು ಬಳಿಕ ಕುತ್ತಿಗೆ, ತಲೆ ಸೇರಿ ಹತ್ತಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಿದ್ದಾರೆ. ಘಟನಾ ಸ್ಥಳದಲ್ಲಿ ತಟ್ಟೆಯಲ್ಲಿ ಒಂದು ಪೂರ್ಣ ಮೀನು, ನೆಲದಲ್ಲಿ ಅರ್ಧ ಮೀನು ಬಿದ್ದಿರುವುದು ಪೊಲೀಸರ ಪರಿಶೀಲನೆ ವೇಳೆ ಕಂಡುಬಂದಿದೆ.




ಓಂಪ್ರಕಾಶ್ ಕೊಲೆಯ ಸಂದರ್ಭ ಮನೆಯಲ್ಲಿ ಪತ್ನಿ ಪಲ್ಲವಿ ಹಾಗೂ ಪುತ್ರಿ ಕೃತಿ ಮಾತ್ರ ಇದ್ದರು. ಕೊಲೆ ಬಳಿಕ ಪಲ್ಲವಿ ಸ್ನೇಹಿತೆಗೆ ವಿಡಿಯೋ ಕರೆ ಮಾಡಿ ದೈತ್ಯನನ್ನು ಕೊಂದಿದ್ದೇನೆ ಎಂದಿದ್ದಾರೆ. ಕೊಲೆ ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪಲ್ಲವಿ ಮತ್ತು ಆಕೆ ಪುತ್ರಿ ಕೃತಿಯನ್ನು ವಶಕ್ಕೆ ಪಡೆದು ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಈ ವೇಳೆ ಕೃತಿ ಪೊಲೀಸರ ಜೀಪು ಹತ್ತಲು ನಿರಾಕರಿಸಿ ಕೆಲ ಕಾಲ ಹೈಡ್ರಾಮಾ ಸೃಷ್ಟಿದ್ದಳು.
ಸೋಮವಾರ ಬೆಳಗ್ಗೆ ಪಲ್ಲವಿ ಮತ್ತು ಆಕೆಯ ಪುತ್ರಿ ಕೃತಿಯ ಬೆರಳಚ್ಚು ಸಂಗ್ರಹಿಸುವಲ್ಲಿ ಪೊಲೀಸರು ಹರಸಾಹಸ ಪಟ್ಟಿದ್ದಾರೆ. ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರ ತಂಡ ತಾಯಿ-ಮಗಳ ಬೆರಳಚ್ಚು ಸಂಗ್ರಹಿಸಲು ಮುಂದಾದಾಗ ಆರಂಭದಲ್ಲಿ ಇಬ್ಬರೂ ಸಹಕರಿಸಿಲ್ಲ. ಅದರಲ್ಲೂ ಕೃತಿ ಮತ್ತೆ ತನ್ನ ಹೈಡ್ರಾಮಾ ಮುಂದುವರೆಸಿದ್ದಾಳೆ. ನನ್ನ ಬೆರಳಚ್ಚು ತೆಗೆದುಕೊಳ್ಳಲು ಬಿಡುವುದಿಲ್ಲ ಎಂದು ಚೀರಾಡಿದ್ದಾಳೆ. ಆದರೂ ಬಿಡದ ಪೊಲೀಸರು ಹಾಗೂ ಎಫ್ಎಸ್ಎಲ್ ತಜ್ಞರು ತಾಯಿ-ಮಗಳ ಬೆರಳಚ್ಚು ಸಂಗ್ರಹಿಸಿದ್ದಾರೆ. ಘಟನಾ ಸ್ಥಳದಲ್ಲಿ ಸಿಕ್ಕ ಚಾಕು ಹಾಗೂ ಮೃತದೇಹದ ಮೇಲಿನ ಬೆರಳಚ್ಚು ಹೋಲಿಕೆ ಮಾಡಲಿದ್ದಾರೆ.
IPS Officer Om Prakash has reportedly been murdered by his own daughter and wife in a calculated plot that has left the law enforcement community in disbelief. Authorities have revealed that the daughter, currently residing in Karwar, allegedly orchestrated the plan to eliminate her father. It is suspected that she communicated with her mother, coordinating their actions from a distance.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am