ಬ್ರೇಕಿಂಗ್ ನ್ಯೂಸ್
23-04-25 01:03 pm Mangalore Correspondent ಕ್ರೈಂ
ಮಂಗಳೂರು, ಎ.23 : ಉಳ್ಳಾಲದ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮೂರನೇ ಆರೋಪಿಯನ್ನು ಪೊಲೀಸರು ವಿನಾಕಾರಣ ಫಿಕ್ಸ್ ಮಾಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ಸಿಸಿಟಿವಿ ದಾಖಲೆಗಳನ್ನು ಸಂಗ್ರಹಿಸಬೇಕೆಂದು ಹೈಕೋರ್ಟಿನಲ್ಲಿ ರಿಟ್ ಹಾಕಲಾಗಿದೆ. ವಕೀಲರಾದ ವಿಕ್ರಮ್ ರಾಜ್ ಮತ್ತು ಅಶ್ವಿನ್ ಕುಟಿನ್ಹಾರವರು ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಿದ ಹೈಕೋರ್ಟ್, ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸಿ ನ್ಯಾಯಾಯಲಕ್ಕೆ ನೀಡುವಂತೆ ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ಆದೇಶ ಹೊರಡಿಸಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ಯುವತಿಯನ್ನು ಎಪ್ರಿಲ್ 16ರಂದು ರಾತ್ರಿ ಉಳ್ಳಾಲದಲ್ಲಿ ಗ್ಯಾಂಗ್ ರೇಪ್ ನಡೆಸಿದ್ದಾಗಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಮೂರನೇ ಆರೋಪಿಯಾಗಿ ಬಂಧಿಸಲ್ಪಟ್ಟಿದ್ದ ಮನೀಶ್ ಅಂದು ಮಂಗಳೂರು ಬಿಟ್ಟು ಉಳ್ಳಾಲಕ್ಕೆ ಹೋಗಿರಲಿಲ್ಲ. ಅಲ್ಲದೆ, ಈ ಕೃತ್ಯದಲ್ಲಿ ಪಾಲ್ಗೊಂಡಿಲ್ಲ ಎಂದು ಹೇಳಿದ್ದರೂ ಪೊಲೀಸರು ಫಿಕ್ಸ್ ಮಾಡಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಮಂಗಳೂರಿನ ಕೋರ್ಟಿಗೂ ಆರೋಪಿ ಪರವಾಗಿ ಅರ್ಜಿ ಸಲ್ಲಿಕೆಯಾಗಿತ್ತು.
ಅರ್ಜಿಗೆ ಪ್ರತಿಯಾಗಿ ಮಂಗಳವಾರ ಮಂಗಳೂರಿನ ಕೋರ್ಟಿಗೆ ಸರಕಾರಿ ವಕೀಲರು ಪೊಲೀಸರ ಪರವಾಗಿ ಆಕ್ಷೇಪ ಅರ್ಜಿ ಸಲ್ಲಿಸಿದ್ದು, ಅದರಲ್ಲಿ ಪರೋಕ್ಷವಾಗಿ ಮೂರನೇ ಆರೋಪಿ ಮನೀಶ್ ಕೃತ್ಯದಲ್ಲಿ ಪಾಲ್ಗೊಂಡಿಲ್ಲ ಎನ್ನುವ ವರದಿ ನೀಡಿದ್ದಾರೆ. ಆಮೂಲಕ ಪೊಲೀಸರು ವಿನಾಕಾರಣ ಬಂಧನ ಮಾಡಿದ್ದಾರೆಯೇ ಎಂಬ ಗಂಭೀರ ಅನುಮಾನ ಮೂಡುವಂತೆ ಮಾಡಿದೆ. ಪೊಲೀಸರ ಪರವಾಗಿ ಸರಕಾರಿ ಅಭಿಯೋಜಕರು ನೀಡಿರುವ ವರದಿಯಲ್ಲಿ, ಮೂರನೇ ಆರೋಪಿ ಮನೀಶ್ ಉಳಿದಿಬ್ಬರು ಆರೋಪಿಗಳ ಜೊತೆ ಸೇರಿ ಸಂತ್ರಸ್ತೆಗೆ ಬಿಯರ್ ಕುಡಿಸಿದ್ದು, ಆಕೆಯನ್ನು ಮುಟ್ಟಲು ಯತ್ನಿಸಿದಾಗ ಬೊಬ್ಬೆ ಹಾಕಿದ್ದಳೆಂದು ಅಲ್ಲಿಂದ ಓಡಿ ಹೋಗಿದ್ದನೆಂದು ನಮೂದಿಸಿದ್ದಾರೆ.
ಸದ್ರಿ ದೂರಿನಲ್ಲಿ ಈ ವಿಷಯ ಇಲ್ಲದಿದ್ದರೂ, ಪೊಲೀಸರು ಮೂರನೇ ಆರೋಪಿ ಪರವಾಗಿ ಈ ಮಾಹಿತಿ ನೀಡಿದ್ದಾರೆ. ಅಲ್ಲದೆ, ಅತ್ಯಾಚಾರ ಪ್ರಕರಣದಲ್ಲಿ ಆತ ಪಾಲ್ಗೊಂಡಿಲ್ಲ ಎನ್ನುವುದನ್ನು ತಿಳಿಸಿದ್ದಾರೆ. ಆಮೂಲಕ ಮನೀಶ್ ಕೃತ್ಯದಲ್ಲಿ ಪಾಲ್ಗೊಂಡಿಲ್ಲ ಎನ್ನುವುದನ್ನು ಒಪ್ಪಿರುವಂತೆ ಕಂಡುಬಂದಿದೆ ಎಂದು ಆರೋಪಿ ಪರ ವಕೀಲ ವಿಕ್ರಮ್ ರಾಜ್ ತಿಳಿಸಿದ್ದಾರೆ.
The High Court has directed local police to obtain and examine CCTV footage related to the incident of Ullal gang rape in Mangalore. This order comes amidst revelations from the police investigation that there is currently no evidence supporting the existence of a third accused in the case.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am