ಬ್ರೇಕಿಂಗ್ ನ್ಯೂಸ್
28-04-25 11:24 am Mangalore Correspondent ಕ್ರೈಂ
ಉಳ್ಳಾಲ,ಎ.28 : ಬೈಕ್ನಲ್ಲಿ ತೆರಳುತ್ತಿದ್ದ ಅಡಿಕೆ ವ್ಯಾಪಾರಿಗೆ ಗುಂಡೇಟು ಬಿದ್ದಿರುವ ಘಟನೆ ಕರ್ನಾಟಕ- ಕೇರಳ ಗಡಿಭಾಗ ಬಾಕ್ರಬೈಲ್ ತಿರುವಿನಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಬಾಕ್ರಬೈಲ್ ನಡೀಬೈಲು ನಿವಾಸಿ ಸವಾದ್ (22) ಎಂಬ ಯುವಕ ಶೂಟೌಟ್ ಒಳಗಾದವರು.
ನಿನ್ನೆ ರಾತ್ರಿ ಬೈ ಕ್ ನಲ್ಲಿ ಮನೆ ಕಡೆಗೆ ತೆರಳುತ್ತಿದ್ದ ಸಂದರ್ಭ ಬಾಕ್ರಬೈಲ್ ತಿರುವಿನ ಸೂರ್ಯೇಶ್ವರ ದ್ವಾರದ ಬಳಿ ಶೂಟೌಟ್ ನಡೆದಿದೆ. ಕಾಲಿಗೆ ಗಂಭೀರ ಗಾಯಗೊಂಡ ಸವಾದ್ ನನ್ನು ತಕ್ಷಣ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಚೇತರಿಸಿಕೊಂಡಿದ್ದಾರೆ. ಪ್ರಾಣಿ ಬೇಟೆಗೆ ಬಂದವರು ತಪ್ಪಿ ಗುಂಡು ಹಾರಿಸಿರುವ ಸಾಧ್ಯತೆ ಇರುವುದಾಗಿ ಮಂಜೇಶ್ವರ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರ್ಷಾದ್ ವರ್ಕಾಡಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.


ಇನ್ನೊಂದು ಮೂಲದ ಪ್ರಕಾರ ಗಾಂಜಾ ವ್ಯಸನಿಗಳು ಅಥವಾ ವ್ಯಾಪಾರಿಗಳು ಕೃತ್ಯ ಎಸಗಿರುವ ಸಾಧ್ಯತೆ ವ್ಯಕ್ತವಾಗಿದೆ. ಬೈಕ್ನಲ್ಲಿ ತೆರಳುವ ಸಂದರ್ಭ ನಿರ್ಜನ ಗುಡ್ಡದಲ್ಲಿ ವಾಹನದ ಹೆಡ್ಲೈಟ್ ಕಾಣಿಸಿದ್ದು., ಅದನ್ನು ಗಮನಿಸಿ ಸವಾದ್ ಬೈಕ್ ನಿಲ್ಲಿಸಿದ ಕಾರಣಕ್ಕೆ ಶೂಟೌಟ್ ನಡೆದಿದೆ ಅನ್ನುವ ಮಾತುಗಳು ಕೇಳಿಬಂದಿದೆ. ಘಟನೆ ನಡೆದ ಬಾಕ್ರಬೈಲ್ ಪ್ರದೇಶ ಕೇರಳಕ್ಕೆ ಸೇರಿದ್ದು ಮಂಜೇಶ್ವರ ಠಾಣಾ ಪೋಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದು ತನಿಖೆ ನಡೆಸುತ್ತಿದ್ದಾರೆ. ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್, ಜಿಲ್ಲಾ ಪಂಚಾಯತ್ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಮತ್ತಿತರರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
In a shocking incident near Bakrebail, Mangalore, an arecanut trader named Savad sustained a bullet injury to his leg while traveling on a bike. Savad was immediately rushed to a hospital in Deralakatte, where he is currently receiving treatment. His condition is reported to be stable.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 09:29 pm
HK News Staffer
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm