ಬ್ರೇಕಿಂಗ್ ನ್ಯೂಸ್
29-04-25 09:59 pm Mangalore Correspondent ಕ್ರೈಂ
ಮಂಗಳೂರು, ಎ.29 : ಮಂಗಳೂರಿನ ಕುಡುಪು ಬಳಿಯಲ್ಲಿ ನಡೆದ ವಲಸೆ ಕಾರ್ಮಿಕನ ಹತ್ಯೆ ಬಗ್ಗೆ ಸಂಪೂರ್ಣ ತನಿಖೆ ಆಗಬೇಕು. ಘಟನೆಯ 48 ಗಂಟೆಗಳ ಬಳಿಕ ಹಿರಿಯ ಪೊಲೀಸ್ ಅಧಿಕಾರಿಗಳು ಅಪೂರ್ಣ ಮಾಹಿತಿ ನೀಡಿದ್ದಾರೆ. 48 ಗಂಟೆಗಳ ಬಳಿಕ ಬಂಧನ ಪ್ರಕ್ರಿಯೆ ನಡೆಸಿದ್ದು ಪ್ರಕರಣದಲ್ಲಿ ಪೊಲೀಸರ ವೈಫಲ್ಯ ಎತ್ತಿ ತೋರಿಸುತ್ತದೆ ಎಂದು ಆಡಳಿತ ಕಾಂಗ್ರೆಸ್ ಪಕ್ಷದ ನಾಯಕರೇ ಆಕ್ಷೇಪ ಎತ್ತಿದ್ದಾರೆ.
ಘಟನೆ ಹಿನ್ನಲೆಯಲ್ಲಿ ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ. ಈ ರೀತಿಯ ಕೃತ್ಯ ಆದರೂ ಯಾಕೆ ಪೊಲೀಸ್ ಇಲಾಖೆಗೆ ಗೊತ್ತಾಗಿಲ್ಲ. ಘಟನೆ ಬಗ್ಗೆ ನಿರ್ಲಕ್ಷ ವಹಿಸಿರುವ ಸ್ಥಳೀಯ ಠಾಣೆಯ ಪೊಲೀಸ್ ಅಧಿಕಾರಿಯನ್ನು ಕೂಡಲೇ ಅಮಾನತು ಪಡಿಸಬೇಕು ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್ ಒತ್ತಾಯಿಸಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಹುಲ್ ಹಮೀದ್, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತರ ಪ್ರದೇಶ ಮಾದರಿಯ ಅಮಾನವೀಯ ಗುಂಪು ಹತ್ಯೆ ಆಗಿರೋದು ಇದೇ ಮೊದಲು. 20-30 ಮಂದಿ ಸೇರಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾರೆ. ಕ್ರಿಕೆಟ್ ಆಟದ ಸಂದರ್ಭ ವಲಸೆ ಕಾರ್ಮಿಕ ಅಲ್ಲಿ ಬಂದಿದ್ದು ಮಾತಿಗೆ ಮಾತು ಬೆಳೆದು ಆತನ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಲಾಗಿದೆ.
ವಲಸೆ ಕಾರ್ಮಿಕನ ಮೃತದೇಹದ ಮೇಲೆ ಹಲವಾರು ಗಾಯದ ಗುರುತುಗಳಿದ್ದವು. ಆದರೆ ಪೊಲೀಸರಿಗೆ ದೇಹದ ಗಾಯದ ಗುರುತು ಸಂಶಯಕ್ಕೆ ಎಡೆ ಮಾಡಲಿಲ್ಲ ಎನ್ನುವುದು ಪ್ರಶ್ನಾರ್ಥಕ. ಇದಲ್ಲದೆ, ಪ್ರಕರಣದಲ್ಲಿ ಸ್ಥಳೀಯ ಕಾರ್ಪೊರೇಟರ್ ಒಬ್ಬರ ಪತಿಯೂ ಶಾಮೀಲಾಗಿದ್ದಾರೆ. ಹೀಗಾಗಿ ಬಿಜೆಪಿ ಮುಖಂಡರು, ಸ್ಥಳೀಯ ಶಾಸಕರು ಆರೋಪಿಗಳನ್ನು ರಕ್ಷಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಘಟನೆಯ ಬಗ್ಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಪೊಲೀಸರು ಸಂಗ್ರಹಿಸಬೇಕು. ಘಟನೆಯ ಪಾತ್ರಧಾರಿಗಳು ಮತ್ತು ಸೂತ್ರಧಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಟಿಯಲ್ಲಿ ಲಾರೆನ್ಸ್ ಡಿಸೋಜ, ಸುಹೈಲ್ ಕಂದಕ್, ಆಲ್ವಿನ್ ಪ್ರಕಾಶ್, ಮುಹಮ್ಮದ್ ಬಪ್ಪಲಿಗೆ, ವಹಾಬ್ ಕುದ್ರೋಳಿ, ಹಬೀಬ್ ಕಣ್ಣೂರ್, ಬಶೀರ್ ಕಣ್ಣೂರ್, ಜಾರ್ಜ್ ಟಿ.ವಿ ಉಪಸ್ಥಿತರಿದ್ದರು.
A gruesome act of mob violence has sent shockwaves through the region, raising serious questions about the effectiveness of both the intelligence network and the local police force. In what is now being called the “Mudupi Mob Murder Case,” a group of individuals brutally lynched a man (or more, depending on the case details) in broad daylight, while authorities seemingly remained oblivious to the mounting tensions that led to the tragedy.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm