ಬ್ರೇಕಿಂಗ್ ನ್ಯೂಸ್
20-12-20 01:20 pm Mantesh, Hubli Reporter ಕ್ರೈಂ
ಹುಬ್ಬಳ್ಳಿ, ಡಿ.20: ಎಸಿಪಿ ದರ್ಜೆಯ ಅಧಿಕಾರಿಯೊಬ್ಬರು ತಮ್ಮ ಠಾಣೆಯ ಪೊಲೀಸ್ ಪೇದೆಗೆ ಕಪಾಳ ಮೋಕ್ಷ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿ - ಧಾರವಾಡ ಸಂಚಾರಿ ವಿಭಾಗದ ಎಸಿಪಿ ಹೊಸಮನಿ, ಪೊಲೀಸ್ ಪೇದೆ ಗುರುನಾಥ ಜಗಾಪೂರ ಎಂಬವರಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಎರಡು ದಿನಗಳ ಹಿಂದೆ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಠಾಣೆಯೊಳಗೆ ನಡೆದಿರುವ ಕೃತ್ಯದ ಸಿಸಿಟಿವಿ ದೃಶ್ಯ ಜಾಲತಾಣದಲ್ಲಿ ವೈರಲ್ ಆಗಿದೆ. ಠಾಣೆಯ ಪೊಲೀಸರೇ ಈ ವಿಡಿಯೋ ತೆಗೆದು ವೈರಲ್ ಮಾಡಿದ್ದಾರೆ ಎನ್ನಲಾಗುತ್ತಿದೆ.

ಅಕ್ರಮ ಮರಳು ವ್ಯವಹಾರದ ವಿಚಾರದಲ್ಲಿ ಅಸಮಾಧಾನಗೊಂಡ ಎಸಿಪಿ ಸಾಹೇಬ್ರು ಪೇದೆ ಮೇಲೆ ಕೈಮಾಡಿದ್ದಾರೆ ಎನ್ನಲಾಗಿದೆ. ಹುಬ್ಬಳ್ಳಿಗೆ ಹೊಸ ಪೊಲೀಸ್ ಆಯುಕ್ತರಾಗಿ ಲಾಬೂರಾಮ್ ಬಂದ ಮೇಲೆ ಬಹುತೇಕ ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಬಿದ್ದಿತ್ತು. ಹೀಗಾಗಿ ಆಯಕಟ್ಟಿನ ಜಾಗಗಳಿಗೆ ಸಂದಾಯ ಆಗುತ್ತಿದ್ದ ಮಾಮೂಲಿಗಳು ಬರುತ್ತಿರಲಿಲ್ಲ ಎನ್ನಲಾಗಿದೆ. ಇದೇ ವಿಚಾರದಲ್ಲಿ ಎಸಿಪಿ ಸಾಹೇಬ್ರು ಪೇದೆಯನ್ನು ಠಾಣೆಗೆ ಕರೆಸಿಕೊಂಡು ಕಪಾಳಕ್ಕೆ ಬಾರಿಸಿದ್ದಾರೆ ಎನ್ನಲಾಗಿದೆ.
ಆದರೆ, ಪೊಲೀಸ್ ಅಧಿಕಾರಿ ಯಾವುದೋ ಆಕ್ರೋಶವನ್ನು ಮುಗ್ದ ಪೊಲೀಸ್ ಪೇದೆಯ ಮೇಲೆ ತೀರಿಸಿಕೊಂಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಠಾಣೆಯಲ್ಲೇ ಪೇದೆಗೆ ಕಪಾಳ ಮೋಕ್ಷ ಮಾಡಿರುವ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಎಸಿಪಿ ಪೊಲೀಸ್ ಇಲಾಖೆಯ ಮಾನ ಹರಾಜು ಹಾಕಿದ್ದಾರೆ ಎಂದು ಜನರು ಟೀಕಿಸುತ್ತಿದ್ದಾರೆ. ಅಲ್ಲದೆ, ಹಿರಿಯಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸುತ್ತಿದ್ದಾರೆ.
Live Video:
A video of Hubli Acp Hosmani slapping a police constable in the police station has gone viral on social media revealing the ugly face of the top cop.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm