ಬ್ರೇಕಿಂಗ್ ನ್ಯೂಸ್
03-05-25 02:16 pm Mangalore Correspondent ಕ್ರೈಂ
ಮಂಗಳೂರು, ಮೇ 3 : ರೌಡಿಶೀಟರ್ ಮತ್ತು ಹಿಂದು ಸಂಘಟನೆ ಕಾರ್ಯಕರ್ತನಾಗಿದ್ದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಅಲ್ಲದೆ, ಎರಡು ವರ್ಷಗಳ ಹಿಂದೆ ಕೊಲೆಯಾದ ಫಾಜಿಲ್ ನ ಸಹೋದರ ಈ ಕೃತ್ಯಕ್ಕೆ ಹಣಕಾಸು ನೆರವು ನೀಡಿರುವುದನ್ನು ಪತ್ತೆ ಮಾಡಿದ್ದಾರೆ.
ಬಜಪೆ ಶಾಂತಿಗುಡ್ಡೆಯ ಅಬ್ದುಲ್ ಸಫ್ವಾನ್ (29), ನಿಯಾಜ್ (25), ಮಹಮ್ಮದ್ ಮುಸಮ್ಮಿರ್ (32), ಸುರತ್ಕಲ್ ಬಾಳ ನಿವಾಸಿಗಳಾದ ಕಲಂದರ್ ಶಾಫಿ ( 29), ಆದಿಲ್ ಮೆಹರೂಫ್ (27), ಕಳಸ ಮಾವಿನಕೆರೆಯ ನಾಗರಾಜ್, ಜೋಕಟ್ಟೆ ನಿವಾಸಿ ಮಹಮ್ಮದ್ ರಿಜ್ವಾನ್ (28), ಕಳಸ ರುದ್ರಪಾದೆ ನಿವಾಸಿ ರಂಜಿತ್ (19) ಬಂಧಿತರು.



ಆರೋಪಿಗಳ ಪೈಕಿ ಅಬ್ದುಲ್ ಸಫ್ವಾನ್ ಮೇಲೆ ಈ ಹಿಂದೆ ಸುಹಾಸ್ ಶೆಟ್ಟಿ ಮತ್ತು ಸಹಚರರು ಒಂದು ವರ್ಷದ ಹಿಂದೆ ಹಲ್ಲೆ ನಡೆಸಿದ್ದರು. ಇದಲ್ಲದೆ, ಸಫ್ವಾನ್ ನ್ನು ಕೊಲೆ ಮಾಡುವುದಾಗಿ ಸುಹಾಸ್ ಆನಂತರವೂ ಬೆದರಿಕೆ ಹಾಕಿದ್ದ. ಇದೇ ವಿಚಾರದಲ್ಲಿ ಸಫ್ವಾನ್ ಗೆ ಸುಹಾಸ್ ಮೇಲೆ ವೈಯಕ್ತಿಕ ದ್ವೇಷ ಇತ್ತು. ಇದೇ ವೇಳೆ, ಫಾಜಿಲ್ ಸೋದರ ಆದಿಲ್ ಮೆಹರೂಫ್ ತಾನು ಸುಹಾಸ್ ಶೆಟ್ಟಿ ಮುಗಿಸಲು ಹಣಕಾಸು ನೆರವು ನೀಡುವುದಾಗಿ ಸಹಕಾರ ನೀಡಿದ್ದ. ಪೊಲೀಸ್ ತನಿಖೆಯಲ್ಲಿ ಆದಿಲ್ ಆರೋಪಿಗಳಿಗೆ ಐದು ಲಕ್ಷ ನೀಡಿದ್ದಾನೆ ಎನ್ನುವುದು ಪತ್ತೆಯಾಗಿದೆ.


ಫಾಜಲ್ ಕೊಲೆಗೆ ಪ್ರತೀಕಾರ ಮತ್ತು ತನ್ನ ವೈಯಕ್ತಿಕ ದ್ವೇಷದಿಂದ ಅಬ್ದುಲ್ ಸಫ್ವಾನ್ ತನ್ನ ಸಂಗಡಿಗರ ಜೊತೆ ಸೇರಿ ಕೃತ್ಯ ಎಸಗಿದ್ದಾನೆ. ಇದಕ್ಕೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದ ನಾಗರಾಜ್ ಮತ್ತು ರಂಜಿತ್ ಸಹಕಾರ ನೀಡಿದ್ದಾರೆ. ಸದ್ಯಕ್ಕೆ ಕೃತ್ಯ ಎಸಗಿದ ಮತ್ತು ಸುಪಾರಿ ನೀಡಿದ ಒಟ್ಟು ಎಂಟು ಮಂದಿಯನ್ನು ಮಂಗಳೂರು ಸಿಸಿಬಿ ಎಸಿಪಿ ಮತ್ತು ಉತ್ತರ ವಿಭಾಗದ ಎಸಿಪಿ ನೇತೃತ್ವದ ಪೊಲೀಸರು ಬಂಧನ ಮಾಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಮತ್ತು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆರೋಪಿಗಳ ಬಂಧನದ ಬಗ್ಗೆ ಮಾಹಿತಿ ನೀಡಿದ್ದಾರೆ.
Mangalore 8 arrested in murder of Hindu activist Suhas Shetty including fazil brother. The arrested have been identified as Abdul Safwan, Niyaz, Mohammed Muzammil, Khalandar Shafi, Adil Mehroof , Nagaraj, Ranjith and Rizwan.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am