ಬ್ರೇಕಿಂಗ್ ನ್ಯೂಸ್
03-05-25 02:16 pm Mangalore Correspondent ಕ್ರೈಂ
ಮಂಗಳೂರು, ಮೇ 3 : ರೌಡಿಶೀಟರ್ ಮತ್ತು ಹಿಂದು ಸಂಘಟನೆ ಕಾರ್ಯಕರ್ತನಾಗಿದ್ದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಅಲ್ಲದೆ, ಎರಡು ವರ್ಷಗಳ ಹಿಂದೆ ಕೊಲೆಯಾದ ಫಾಜಿಲ್ ನ ಸಹೋದರ ಈ ಕೃತ್ಯಕ್ಕೆ ಹಣಕಾಸು ನೆರವು ನೀಡಿರುವುದನ್ನು ಪತ್ತೆ ಮಾಡಿದ್ದಾರೆ.
ಬಜಪೆ ಶಾಂತಿಗುಡ್ಡೆಯ ಅಬ್ದುಲ್ ಸಫ್ವಾನ್ (29), ನಿಯಾಜ್ (25), ಮಹಮ್ಮದ್ ಮುಸಮ್ಮಿರ್ (32), ಸುರತ್ಕಲ್ ಬಾಳ ನಿವಾಸಿಗಳಾದ ಕಲಂದರ್ ಶಾಫಿ ( 29), ಆದಿಲ್ ಮೆಹರೂಫ್ (27), ಕಳಸ ಮಾವಿನಕೆರೆಯ ನಾಗರಾಜ್, ಜೋಕಟ್ಟೆ ನಿವಾಸಿ ಮಹಮ್ಮದ್ ರಿಜ್ವಾನ್ (28), ಕಳಸ ರುದ್ರಪಾದೆ ನಿವಾಸಿ ರಂಜಿತ್ (19) ಬಂಧಿತರು.



ಆರೋಪಿಗಳ ಪೈಕಿ ಅಬ್ದುಲ್ ಸಫ್ವಾನ್ ಮೇಲೆ ಈ ಹಿಂದೆ ಸುಹಾಸ್ ಶೆಟ್ಟಿ ಮತ್ತು ಸಹಚರರು ಒಂದು ವರ್ಷದ ಹಿಂದೆ ಹಲ್ಲೆ ನಡೆಸಿದ್ದರು. ಇದಲ್ಲದೆ, ಸಫ್ವಾನ್ ನ್ನು ಕೊಲೆ ಮಾಡುವುದಾಗಿ ಸುಹಾಸ್ ಆನಂತರವೂ ಬೆದರಿಕೆ ಹಾಕಿದ್ದ. ಇದೇ ವಿಚಾರದಲ್ಲಿ ಸಫ್ವಾನ್ ಗೆ ಸುಹಾಸ್ ಮೇಲೆ ವೈಯಕ್ತಿಕ ದ್ವೇಷ ಇತ್ತು. ಇದೇ ವೇಳೆ, ಫಾಜಿಲ್ ಸೋದರ ಆದಿಲ್ ಮೆಹರೂಫ್ ತಾನು ಸುಹಾಸ್ ಶೆಟ್ಟಿ ಮುಗಿಸಲು ಹಣಕಾಸು ನೆರವು ನೀಡುವುದಾಗಿ ಸಹಕಾರ ನೀಡಿದ್ದ. ಪೊಲೀಸ್ ತನಿಖೆಯಲ್ಲಿ ಆದಿಲ್ ಆರೋಪಿಗಳಿಗೆ ಐದು ಲಕ್ಷ ನೀಡಿದ್ದಾನೆ ಎನ್ನುವುದು ಪತ್ತೆಯಾಗಿದೆ.


ಫಾಜಲ್ ಕೊಲೆಗೆ ಪ್ರತೀಕಾರ ಮತ್ತು ತನ್ನ ವೈಯಕ್ತಿಕ ದ್ವೇಷದಿಂದ ಅಬ್ದುಲ್ ಸಫ್ವಾನ್ ತನ್ನ ಸಂಗಡಿಗರ ಜೊತೆ ಸೇರಿ ಕೃತ್ಯ ಎಸಗಿದ್ದಾನೆ. ಇದಕ್ಕೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದ ನಾಗರಾಜ್ ಮತ್ತು ರಂಜಿತ್ ಸಹಕಾರ ನೀಡಿದ್ದಾರೆ. ಸದ್ಯಕ್ಕೆ ಕೃತ್ಯ ಎಸಗಿದ ಮತ್ತು ಸುಪಾರಿ ನೀಡಿದ ಒಟ್ಟು ಎಂಟು ಮಂದಿಯನ್ನು ಮಂಗಳೂರು ಸಿಸಿಬಿ ಎಸಿಪಿ ಮತ್ತು ಉತ್ತರ ವಿಭಾಗದ ಎಸಿಪಿ ನೇತೃತ್ವದ ಪೊಲೀಸರು ಬಂಧನ ಮಾಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಮತ್ತು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆರೋಪಿಗಳ ಬಂಧನದ ಬಗ್ಗೆ ಮಾಹಿತಿ ನೀಡಿದ್ದಾರೆ.
Mangalore 8 arrested in murder of Hindu activist Suhas Shetty including fazil brother. The arrested have been identified as Abdul Safwan, Niyaz, Mohammed Muzammil, Khalandar Shafi, Adil Mehroof , Nagaraj, Ranjith and Rizwan.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm