ಬ್ರೇಕಿಂಗ್ ನ್ಯೂಸ್
08-05-25 05:32 pm HK News Desk ಕ್ರೈಂ
ನವದೆಹಲಿ, ಮೇ 8: ಜೈಶ್ ಇ ಮಹಮ್ಮದ್ ಮುಖ್ಯಸ್ಥ ಮೋಸ್ಟ್ ವಾಂಟೆಡ್ ಉಗ್ರ ಮೌಲಾನಾ ಮಸೂದ್ ಅಜರ್ನ ಸೋದರ, ಮುಫ್ತಿ ಅಬ್ದುಲ್ ರೌಫ್ ಅಸ್ಗರ್ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯಲ್ಲಿ ಬಲಿಯಾಗಿದ್ದಾನೆ.
1999ರಲ್ಲಿ ಭಾರತದಿಂದ ಕಂದಹಾರ್ ತೆರಳುತ್ತಿದ್ದ IC-814 ಪ್ರಯಾಣಿಕ ವಿಮಾನದ ಹೈಜಾಕ್ ಪ್ರಕರಣದಲ್ಲಿ ಅಬ್ದುಲ್ ರೌಫ್ ಅಸ್ಗರ್ ಮಾಸ್ಟರ್ ಮೈಂಡ್ ಆಗಿದ್ದ. ಮುಜಫರಬಾದ್ ನಲ್ಲಿರುವ ಜೈಶ್ ನೆಲೆಯ ಮೇಲೆ ಬಾಂಬ್ ದಾಳಿ ನಡೆಸಿದಾಗ ಮಸೂದ್ ಅಜರ್ ಪತ್ನಿ, ಸೋದರ ಸೇರಿದಂತೆ ಹತ್ತು ಮಂದಿ ಸಾವಿಗೀಡಾಗಿದ್ದರು.
ತೀವ್ರ ಗಾಯಗೊಂಡಿದ್ದ ಅಸ್ಗರ್ ಈಗ ಪ್ರಾಣ ಬಿಟ್ಟಿದ್ದಾನೆ. ಮುಫ್ತಿ ಅಬ್ದುಲ್ ರೌಫ್ ಅಸ್ಗರ್ನನ್ನು ಅಬ್ದುಲ್ ರೌಫ್ ಅಜರ್ ಅಂತಲೂ ಕರೆಯುತ್ತಿದ್ದರು. ಜೈಷ್-ಇ- ಮೊಹಮ್ಮದ್ ಸಂಘಟನೆಯ ಕಮಾಂಡರ್ ಹಾಗೂ ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಂಡ್ ಉಗ್ರನೂ ಆಗಿದ್ದ.
ಭಾರತದ ದಾಳಿ ಬಗ್ಗೆ ಸ್ಥಳೀಯ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದ ಮಸೂದ್ ಅಜರ್, ನನ್ನ ಕುಟುಂಬದ 10 ಮಂದಿಯ ಜೀವ ಹೋಗಿದೆ ಎಂದು ತಿಳಿಸಿದ್ದ. ಇದೇ ಮೌಲಾನಾ ಮಸೂದ್ ಅಜರ್ನನ್ನು ಐಸಿ-814 ಕಂದಹಾರ್ ವಿಮಾನ ಅಪಹರಣ ಸಂದರ್ಭದಲ್ಲಿ ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಬಳಿಕ ಪಾಕ್ಗೆ ಹೋಗಿ ಭಾರತದ ವಿರುದ್ಧ ಜೈಷ್-ಇ-ಮೊಹಮ್ಮದ್ ಸಂಘಟನೆ ಕಟ್ಟಿದ್ದ.
ಇದೇ ಜೈಷ್ ಮೊಹಮ್ಮದ್ ಸಂಘಟನೆಯೇ 2001ರಲ್ಲಿ ಭಾರತದ ಪಾರ್ಲಿಮೆಂಟ್ ಮೇಲೆ ದಾಳಿ ನಡೆಸಿತ್ತು. ಮಸೂದ್ ಅಜರ್ ಅನುಪಸ್ಥಿತಿಯಲ್ಲಿ ಜೈಷ್ ಇ ಮೊಹಮ್ಮದ್ ಸಂಘಟನೆ ಮುನ್ನೆಡೆಸಿದ್ದ ರೌಫ್ ಅಜರ್ ನನ್ನು ಹೊಡೆದುರುಳಿಸುವಲ್ಲಿ ಭಾರತದ ಸೇನೆ ಯಶಸ್ವಿಯಾಗಿದೆ.
Abdul Rauf Azhar, a globally designated terrorist and the mastermind of the IC-814 Air India flight hijacking, was killed in Indian Armed Forces missile strikes on terror launch pads in Pakistan's Punjab and PoK under 'Operation Sindoor' on Wednesday sources said
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm