ಬ್ರೇಕಿಂಗ್ ನ್ಯೂಸ್
14-05-25 09:23 pm Mangaluru staff ಕ್ರೈಂ
ಮಂಗಳೂರು, ಮೇ 14: ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮತ್ತೆ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮೇ 1ರಂದು ಬಜ್ಪೆ ಬಳಿಯ ಕಿನ್ನಿಪದವು ಎಂಬಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಶಾಮೀಲಾಗಿ ಆನಂತರ ತಲೆಮರೆಸಿಕೊಂಡಿದ್ದ ಮೂವರನ್ನು ಪೊಲೀಸರು ಬಂಧನ ಮಾಡಿದ್ದಾರೆ. ಸುರತ್ಕಲ್ ಕಳವಾರು ನಿವಾಸಿ ಅಜರುದ್ದೀನ್ @ ಅಜರ್ @ ಅಜ್ಜು(29), ಕಾಪು ಬಳಿಯ ಬೆಳಪು ನಿವಾಸಿ ಅಬ್ದುಲ್ ಖಾದರ್ @ ನೌಫಲ್(24), ಫರಂಗಿಪೇಟೆ ಬಳಿಯ ಕುಂಪನಮಜಲು ನಿವಾಸಿ ನೌಷದ್ @ ವಾಮಂಜೂರು ನೌಷದ್ @ ಚೊಟ್ಟೆ ನೌಷದ್(39) ಬಂಧಿತರು.
ಆರೋಪಿಗಳ ಪೈಕಿ ಅಜರುದ್ದೀನ್ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ರಾಣೆಗಳಲ್ಲಿ ಮೂರು ಕಳವು ಪ್ರಕರಣ ದಾಖಲಾಗಿರುತ್ತದೆ. ಈತನೇ ಪ್ರಮುಖ ಆರೋಪಿಗಳಿಗೆ ಸುಹಾಸ್ ಶೆಟ್ಟಿಯ ಚಲನವಲನದ ಬಗ್ಗೆ ಮಾಹಿತಿ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಅಬ್ದುಲ್ ಖಾದರ್ ಆರೋಪಿಗಳು ಕೊಲೆ ಕೃತ್ಯದ ಬಳಿಕ ಕಾರಿನಲ್ಲಿ ಪರಾರಿಯಾಗುವ ವೇಳೆ ಆರೋಪಿಗಳಿಗೆ ಸಹಕರಿಸಿದ್ದ. ಇನ್ನೋರ್ವ ಆರೋಪಿ ನೌಷದ್ ಉಳಿದ ಆರೋಪಿಗಳ ಜೊತೆ ಸಂಚು ರೂಪಿಸಿ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ. ಈ ಹಿಂದೆ ಸುರತ್ಕಲ್, ಬಜ್ಪೆ, ಮೂಡಬಿದ್ರಿ, ಮಂಗಳೂರು ಉತ್ತರ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆಗೆ ಸಂಚು ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿರುತ್ತದೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅಜರುದ್ದೀನ್ ಜೈಲು ಸೇರಿದ್ದಾನೆ. ಅಬ್ದುಲ್ ಖಾದರ್ ಮತ್ತು ನೌಷದ್ ಅವರನ್ನು ಹೆಚ್ಚಿನ ತನಿಖೆಗಾಗಿ ಏಳು ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಕೊಲೆ ಪ್ರಕರಣದಲ್ಲಿ ಎರಡೇ ದಿನದಲ್ಲಿ ಎಂಟು ಮಂದಿಯನ್ನು ಬಂಧಿಸಲಾಗಿತ್ತು. ಘಟನೆ ಸಂಬಂಧಿಸಿ ಇತರ ಆರೋಪಿಗಳನ್ನು ಬಂಧಿಸಲು ಎನ್ಐಎ ತನಿಖೆ ಮಾಡಿಸಬೇಕೆಂದು ಬಿಜೆಪಿ ನಾಯಕರು ಒತ್ತಾಯಿಸಿದ್ದರು.
Mangalore Suhas Shetty murder case, three more arrested by CCB police.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm