ಬ್ರೇಕಿಂಗ್ ನ್ಯೂಸ್
15-05-25 11:06 pm HK News Desk ಕ್ರೈಂ
ದಾವಣಗೆರೆ, ಮೇ 14 : ಗೋಲ್ಡ್ ಲೋನ್ ಆಫೀಸರ್ ಒಬ್ಬ ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ಗೇ ಕನ್ನ ಹಾಕಿ, ಕೆಜಿಗಟ್ಟಲೆ ಚಿನ್ನಾಭರಣಗಳನ್ನು ಕದ್ದು ಬೇರೊಂದು ಬ್ಯಾಂಕ್ನಲ್ಲಿ ಅಡವಿಟ್ಟಿರುವಂತಹ ಘಟನೆ ಬೆಳಕಿಗೆ ಬಂದಿದೆ.
ದಾವಣಗೆರೆಯ ದೇವರಾಜ್ ಅರಸ್ ಬಡಾವಣೆಯ ವಾಸಿಯಾಗಿರುವ ಸಂಜಯ್ ಟಿಪಿ ಎಂಬಾತ ನಿಟ್ಟುವಳ್ಳಿಯಲ್ಲಿರುವ ಸಿಎಸ್ಬಿ ಬ್ಯಾಂಕ್ನಲ್ಲಿ ಗೋಲ್ಡ್ ಲೋನ್ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದ.
ಕೆಲಸ ಮಾಡುತ್ತಿದ್ದ ಬ್ಯಾಂಕ್ನಿಂದ ಒಟ್ಟು 2.61 ಕೋಟಿ ಮೌಲ್ಯದ 3 ಕೆಜಿ 643 ಗ್ರಾಂ ಚಿನ್ನಾಭರಣವನ್ನು ಕದ್ದು, ಬೇರೊಂದು ಬ್ಯಾಂಕ್ನಲ್ಲಿ ಅಡವಿಟ್ಟಿದ್ದ.
ಒಂದು ದಿನ ಬ್ಯಾಂಕ್ ಆಡಿಟ್ ಮಾಡುವಾಗ ಬಂಗಾರ ಕಡಿಮೆ ಇರುವುದು ಬೆಳಕಿಗೆ ಬಂದಿದೆ. ತಕ್ಷಣ ಮ್ಯಾನೇಜರ್ ಈ ಬಗ್ಗೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಬ್ಯಾಂಕಿನಲ್ಲಿ ಗೋಲ್ಡ್ ಲೋನ್ ಆಫೀಸರ್ ಆಗಿ ಕೆಲಸ ಮಾಡುತಿದ್ದ ಸಂಜಯ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
ಕಳವು ಮಾಡಿದ ಚಿನ್ನಾಭರಣಗಳನ್ನು ದಾವಣಗೆರೆ ನಗರದ ಫೆಡರಲ್ ಬ್ಯಾಂಕ್, ಫೆಡ್ ಬ್ಯಾಂಕ್ ಹಾಗೂ ಪಿ.ಬಿ.ರಸ್ತೆಯಲ್ಲಿರುವ ಮಣಪ್ಪುರಂ ಗೋಲ್ಡ್ ಲೋನ್ ಪೈನಾನ್ಸ್ ಶಾಖೆಯಲ್ಲಿ ತಂದೆ, ತಾಯಿ ಹಾಗೂ ಸ್ನೇಹಿತರ ಹೆಸರಿನಲ್ಲಿ ಅಡ ಇಟ್ಟು ಸಾಲ ಪಡೆದಿರುವುದಾಗಿ ಒಪ್ಪಿಕೊಂಡಿದ್ದಾನೆ. ಆತ ಅಡವಿಟ್ಟಿದ್ದ ಒಟ್ಟು 2.61 ಕೋಟಿ ಮೌಲ್ಯದ 3 ಕೆಜಿ 643 ಗ್ರಾಂ ಬಂಗಾರದ ಆಭರಣಗಳನ್ನು ಕೆಟಿಜೆ ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ವರದಿಗಳ ಪ್ರಕಾರ ಸಂಜಯ್ ಆನ್ ಲೈನ್ ಬೆಟ್ಟಿಂಗ್ ಚಾಳಿಗೆ ಬಿದಿದ್ದ. ಪದೇ ಪದೇ ಗೋವಾಕ್ಕೆ ಹೋಗಿ ಕ್ಯಾಸಿನೋಗಳಲ್ಲಿ ಗೇಮ್ ಆಡುತ್ತಿದ್ದ. ತಾನು ಐಷಾರಾಮಿ ಜೀವನ ನಡೆಸಬೇಕೆಂದು ಕನಸು ಕಂಡಿದ್ದ. ಆತ ಕಳ್ಳತನ ಮಾಡಿದ ಹಣವನ್ನೆಲ್ಲಾ ಆನ್ ಲೈನ್ ಬೆಟ್ಟಿಂಗ್ನಲ್ಲೇ ಕಳೆದಿದ್ದಾನೆ ಎಂದು ತಿಳಿದು ಬಂದಿದೆ.
Addicted to Online Gaming, SBI Staff Steals Gold from Bank and Pledges it Elsewhere; 2.61 Crore Worth gold Seized, Accused Nabbed. The arrested has been identified as Devraj.
10-07-25 09:53 pm
Bangalore Correspondent
ED Raid Congress MLA Subba Reddy: ಮಲೇಶ್ಯಾ, ಬ್...
10-07-25 12:45 pm
ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ ; ಅರ್ಧ ನ...
09-07-25 10:45 pm
Chamarajanagar Heart Attack, Student; 'ಹೃದಯ"ಕ...
09-07-25 04:12 pm
ಬೆಂಗಳೂರಿನಲ್ಲಿ ಐದು ಕಡೆ ಎನ್ಐಎ ದಾಳಿ ; ಭಯೋತ್ಪಾದಕ...
09-07-25 01:53 pm
11-07-25 12:08 pm
HK News Desk
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
Bangle Seller, Changur Baba Arrest, Uttar Pra...
10-07-25 03:24 pm
Amit Shah; ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್...
10-07-25 01:00 pm
ಗೋಮಾಂಸ ತಿನ್ನಿಸಿ ಮತಾಂತರಕ್ಕೆ ಯತ್ನ ; ಫೇಸ್ಬುಕ್ಕಲ್...
07-07-25 08:45 pm
10-07-25 07:23 pm
Mangalore Correspondent
Mangalore, Traffic Constable, Lokayukta, Tasl...
10-07-25 04:01 pm
ಮಂಗಳೂರಿನ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ನವ...
09-07-25 10:25 pm
Mangalore Home Minister Parameshwara, Peace M...
09-07-25 10:17 pm
Peace Meeting, Mangalore, Brijesh Chowta, Ash...
09-07-25 09:01 pm
10-07-25 08:09 pm
HK News Desk
Kerala Couple, Chit Fund Scam; ಚಿಟ್ ಫಂಡ್ ಹೆಸರ...
10-07-25 01:05 pm
Double Murder Hassan, crime: ಆಸ್ತಿ ವಿಚಾರಕ್ಕೆ...
10-07-25 12:04 pm
Drugs News, Mangalore: ಮಂಗಳೂರಿಗೆ ಡ್ರಗ್ಸ್ ಪೂರೈ...
09-07-25 10:56 pm
Kerala Chit Fund, Fraud, Mangalore: 20 ವರ್ಷಗಳ...
08-07-25 10:01 pm