ಬ್ರೇಕಿಂಗ್ ನ್ಯೂಸ್
17-05-25 05:00 pm Bangalore Correspondent ಕ್ರೈಂ
ಬೆಂಗಳೂರು, ಮೇ 17 : ಸಿಗರೇಟ್ ತಂದು ಕೊಡದಿರುವ ಕೋಪಕ್ಕೆ R15 ಬೈಕ್ಗೆ ಕಾರಿನಿಂದ ಗುದ್ದಿದ ಪರಿಣಾಮ ಓರ್ವ ಸಾಫ್ಟ್ ವೇರ್ ಉದ್ಯೋಗಿ ಜೀವ ಕಳೆದುಕೊಂಡ ಘಟನೆ ನಗರದ ಕೋಣನಕುಂಟೆ ಕ್ರಾಸ್ನ ಕನಕಪುರ ರಸ್ತೆ ತಿರುವಿನ ಬಳಿ ನಡೆದಿದೆ.
ಸಂಜಯ್ ಉಸಿರು ಚೆಲ್ಲಿದ ಸಾಫ್ಟ್ವೇರ್ ಇಂಜಿನಿಯರ್. ಆರೋಪಿ ಕಾರು ಚಾಲಕ ಪ್ರತೀಕ್ನನ್ನು ಸುಬ್ರಹ್ಮಣ್ಯಪುರ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಂಜಯ್ ಹಾಗೂ ಚೇತನ್ ಎನ್ನುವ ಇಬ್ಬರು ಸಾಫ್ಟ್ವೇರ್ ಇಂಜಿನಿಯರ್ ಗಳು. ವರ್ಕ್ ಫ್ರಮ್ ಹೋಂ ಕೆಲಸ ಮಾಡಿ ಟೀ ಕುಡಿಯಲು ಮೇ 10 ರಂದು ಬೆಳಗಿನ ಜಾವ 4 ಗಂಟೆಗೆ ಕೋಣನಕುಂಟೆ ಕ್ರಾಸ್ನಲ್ಲಿ ತಳ್ಳು ಗಾಡಿ ಬಳಿಗೆ ಬಂದಿದ್ದರು.
ಈ ವೇಳೆ ಬರ್ತ್ಡೇ ಪಾರ್ಟಿ ಮುಗಿಸಿಕೊಂಡು ಆರ್ಆರ್ ನಗರ ಮನೆ ಕಡೆಗೆ ಕೊಲೆಗಾರ ಪ್ರತೀಕ್ ದಂಪತಿ ಕಾರಿನಲ್ಲಿ ತೆರಳುತ್ತಿದ್ದರು. ಆಗ ಕೋಣನಕುಂಟೆ ಕ್ರಾಸ್ ಬಳಿ ಕಾರು ನಿಲ್ಲಿಸಿ, ಕೆಳಗೆ ಇಳಿಯದೇ ಸಿಗರೇಟ್ ತಂದು ಕೊಡುವಂತೆ ಟೀ ಕುಡಿಯುತ್ತಿದ್ದ ಸಂಜಯ್ ಅಂಡ್ ಚೇತನ್ಗೆ ಹೇಳ್ತಾರೆ. ಆದ್ರೆ ಇದಕ್ಕೆ ಇಬ್ಬರು ವಿರೋಧ ವ್ಯಕ್ತಪಡಿಸುತ್ತಾರೆ. ನೀವೇ ಬೇಕಿದ್ರೆ ಬಂದು ಸಿಗರೇಟ್ ತೆಗೆದುಕೊಳ್ಳಿ ಅಂತ ತಮ್ಮ ಪಾಡಿಗೆ ತಾವು ಟೀ ಕುಡಿಯುತ್ತಿದ್ದರು.
ಈ ವೇಳೆ ಟೀ ಅಂಗಡಿ ಬಳಿಯೇ ಪ್ರತೀಕ್ ದಂಪತಿ ಹಾಗೂ ಸಾಫ್ಟ್ವೇರ್ ಉದ್ಯೋಗಿಗಳ ಮಧ್ಯೆ ಗಲಾಟೆ ನಡೆದಿದೆ. ಸ್ಥಳದಲ್ಲಿದ್ದ ಜನರು ಈ ಗಲಾಟೆಯನ್ನು ತಿಳಿಗೊಳಿಸಿ ಕಳುಹಿಸಿದ್ದರು. ಸಾಫ್ಟ್ವೇರ್ ಉದ್ಯೋಗಿಗಳು ಇಬ್ಬರು ತಮ್ಮ R15 ಬೈಕ್ ಹತ್ತಿಕೊಂಡು ಮನೆಗೆ ಹೊರಟಿದ್ರು . ಆದರೆ ಕೋಣನಕುಂಟೆ ಕ್ರಾಸ್ನ ಕನಕಪುರ ರಸ್ತೆ ತಿರುವಿನ ಬಳಿ ಬೈಕ್ ಯೂಟರ್ನ್ ತೆಗೆದುಕೊಳ್ಳುವ ಸಮಯದಲ್ಲಿ ಬೈಕ್ಗೆ ಕಾರಿನಿಂದ ಭೀಕರವಾಗಿ ಪ್ರತೀಕ್ ಡಿಕ್ಕಿ ಹೊಡೆದಿದ್ದಾನೆ.
ಆರೋಪಿ ಪ್ರತೀಕ್ ಕಾರಿನಿಂದ ಗುದ್ದಿದ ರಭಸಕ್ಕೆ ಸಂಜಯ್ ಬೈಕ್ ಅಂಗಡಿ ಶೆಟರ್ಗೆ ಬಡಿದು ಬಿದ್ದಿದೆ. ಈ ವೇಳೆ ಇಬ್ಬರು ಪ್ರಜ್ಞಾ ಹೀನರಾಗಿ ಕೆಳಗೆ ಬಿದ್ದಿದ್ದರು. ತಕ್ಷಣ ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಸಂಜಯ್ ಸ್ಥಿತಿ ಚಿಂತಾಜನಕ ಆಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ 2 ದಿನದ ಹಿಂದೆ ಕೊನೆಯುಸಿರೆಳೆದಿದ್ದಾನೆ. ಈ ಬಗ್ಗೆ ತನಿಖೆ ನಡೆಸಿದ್ದ ಸುಬ್ರಹ್ಮಣ್ಯಪುರ ಠಾಣೆ ಪೊಲೀರು ಆರೋಪಿ ಪ್ರತೀಕ್ನನ್ನು ಬಂಧಿಸಿದ್ದಾರೆ.
Car runs over #Bengaluru techie, killing him, after he refuses to buy cigarettes for driver
— The Times Of India (@timesofindia) May 17, 2025
Read: https://t.co/5tz9lSAODS pic.twitter.com/1rpJY9GfeO
A 29-year-old software engineer was killed, and his friend injured in a violent hit-and-run incident in Bengaluru, reportedly triggered by a dispute over a cigarette.
10-07-25 09:53 pm
Bangalore Correspondent
ED Raid Congress MLA Subba Reddy: ಮಲೇಶ್ಯಾ, ಬ್...
10-07-25 12:45 pm
ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ ; ಅರ್ಧ ನ...
09-07-25 10:45 pm
Chamarajanagar Heart Attack, Student; 'ಹೃದಯ"ಕ...
09-07-25 04:12 pm
ಬೆಂಗಳೂರಿನಲ್ಲಿ ಐದು ಕಡೆ ಎನ್ಐಎ ದಾಳಿ ; ಭಯೋತ್ಪಾದಕ...
09-07-25 01:53 pm
11-07-25 12:08 pm
HK News Desk
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
Bangle Seller, Changur Baba Arrest, Uttar Pra...
10-07-25 03:24 pm
Amit Shah; ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್...
10-07-25 01:00 pm
ಗೋಮಾಂಸ ತಿನ್ನಿಸಿ ಮತಾಂತರಕ್ಕೆ ಯತ್ನ ; ಫೇಸ್ಬುಕ್ಕಲ್...
07-07-25 08:45 pm
10-07-25 07:23 pm
Mangalore Correspondent
Mangalore, Traffic Constable, Lokayukta, Tasl...
10-07-25 04:01 pm
ಮಂಗಳೂರಿನ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ನವ...
09-07-25 10:25 pm
Mangalore Home Minister Parameshwara, Peace M...
09-07-25 10:17 pm
Peace Meeting, Mangalore, Brijesh Chowta, Ash...
09-07-25 09:01 pm
10-07-25 08:09 pm
HK News Desk
Kerala Couple, Chit Fund Scam; ಚಿಟ್ ಫಂಡ್ ಹೆಸರ...
10-07-25 01:05 pm
Double Murder Hassan, crime: ಆಸ್ತಿ ವಿಚಾರಕ್ಕೆ...
10-07-25 12:04 pm
Drugs News, Mangalore: ಮಂಗಳೂರಿಗೆ ಡ್ರಗ್ಸ್ ಪೂರೈ...
09-07-25 10:56 pm
Kerala Chit Fund, Fraud, Mangalore: 20 ವರ್ಷಗಳ...
08-07-25 10:01 pm