ಬ್ರೇಕಿಂಗ್ ನ್ಯೂಸ್
19-05-25 03:35 pm HK News Desk ಕ್ರೈಂ
ಬೆಳಗಾವಿ, ಮೇ 19 : ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಅತ್ತೆ, ಮಾವ ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದ ಘಟನೆ ಅಥಣಿ ತಾಲೂಕಿನ ಬಳ್ಳಿಗೇರಿ - ಮಲಾಬಾದ್ ರಸ್ತೆಯಲ್ಲಿ ನಡೆದಿದೆ.
ರೇಣುಕಾ ಸಂಜಯ ಹೊನಕಾಂಡೆ (32) ಕೊಲೆಯಾದವರು. ಮಾವ ಕಾಮಣ್ಣ ಹೊನಕಾಂಡೆ ಹಾಗೂ ಅತ್ತೆ ಜಯಶ್ರೀ ವಿರುದ್ಧ ಅಥಣಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ


ಅತ್ತೆ ಮತ್ತು ಮಾವ ಸೇರಿ ಸಂಚು ರೂಪಿಸಿ ರೇಣುಕಾಳನ್ನ ಬೈಕ್ನಲ್ಲಿ ಕರೆದೊಯ್ದು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಸಂದೇಹ ಬರದಂತೆ ಬೈಕ್ ಬಳಿ ಶವ ಮಲಗಿಸಿ ಬೈಕ್ನಿಂದ ಬಿದ್ದು ಮೃತಪಟ್ಟಿದ್ದಾರೆ ಎಂದು ಬಿಂಬಿಸಲು ಯತ್ನಿಸಿದ್ದಾರೆ ಎಂದು ದೂರು ದಾಖಲಾಗಿದೆ.
ಮೇ 17 ರಂದು ರಾತ್ರಿ ಎಂಟು ಗಂಟೆ ಸುಮಾರಿಗೆ ಮಲಬಾದಿ ಗ್ರಾಮದ ಹತ್ತಿರ ಆರೋಪಿತರಾದ ಕಾಮಣ್ಣ ಮತ್ತು ಜಯಶ್ರೀ ತಮ್ಮ ಮೋಟಾರ್ ಸೈಕಲ್ ಮೇಲೆ ಸೊಸೆ ರೇಣುಕಾಳನ್ನ ಕೂರಿಸಿಕೊಂಡು ಹೋಗಿ, ರಸ್ತೆ ಮೇಲೆ ಕೆಳಕ್ಕೆ ಕೆಡವಿದ್ದಾರೆ. ನಂತರ ಅವಳ ತಲೆಗೆ ಕಲ್ಲಿನಿಂದ ಜಜ್ಜಿ, ಕುತ್ತಿಗೆಗೆ ಸೀರೆಯಿಂದ ಬಿಗಿದು, ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ರಾಕ್ಷಸರು.
ಇದಾದ ನಂತರ ಆರೋಪಿತ ಹಂತಕರು ದ್ವಿಚಕ್ರ ವಾಹನಕ್ಕೆ ಸೀರೆ ತಗುಲಿ ಬಿದ್ದು ಗಾಯಗೊಂಡು ಸೊಸೆ ಮೃತಪಟ್ಟಿದ್ದಾಳೆ ಎಂದು ಬಿಂಬಿಸೋಕೆ ಮುಂದಾಗಿದ್ದರು. ನಂತರ ಅವಳನ್ನು ಕೊಲೆ ಮಾಡಿದ ಸ್ಥಳದಿಂದ ಸುಮಾರು 120 ಅಡಿ ದೂರದವರೆಗೆ ಬೈಕ್ನಿಂದ ಎಳೆದುಕೊಂಡು ಹೋಗಿ, ಅವಳು ಬೈಕ್ ಮೇಲಿನಿಂದ ಬಿದ್ದು ಸತ್ತುಹೋಗಿರುತ್ತಾಳೆ ಎಂದು ಅಪಘಾತದ ದೃಶ್ಯವನ್ನು ಸೃಷ್ಟಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಈ ಮೂವರನ್ನ ತಮ್ಮ ಶೈಲಿಯಲ್ಲಿ ವಿಚಾರಿಸಬೇಕಾದರೆ ಸತ್ಯ ಸತ್ಯತೆಯನ್ನ ಬಾಯಿ ಬಿಟ್ಟಿದ್ದಾರೆ.
Shocking Belagavi Crime, Mother in law Kills Daughter in law for Not Having Children, Tries to Fake Accident.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am