ಬ್ರೇಕಿಂಗ್ ನ್ಯೂಸ್
19-05-25 03:35 pm HK News Desk ಕ್ರೈಂ
ಬೆಳಗಾವಿ, ಮೇ 19 : ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಅತ್ತೆ, ಮಾವ ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದ ಘಟನೆ ಅಥಣಿ ತಾಲೂಕಿನ ಬಳ್ಳಿಗೇರಿ - ಮಲಾಬಾದ್ ರಸ್ತೆಯಲ್ಲಿ ನಡೆದಿದೆ.
ರೇಣುಕಾ ಸಂಜಯ ಹೊನಕಾಂಡೆ (32) ಕೊಲೆಯಾದವರು. ಮಾವ ಕಾಮಣ್ಣ ಹೊನಕಾಂಡೆ ಹಾಗೂ ಅತ್ತೆ ಜಯಶ್ರೀ ವಿರುದ್ಧ ಅಥಣಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ


ಅತ್ತೆ ಮತ್ತು ಮಾವ ಸೇರಿ ಸಂಚು ರೂಪಿಸಿ ರೇಣುಕಾಳನ್ನ ಬೈಕ್ನಲ್ಲಿ ಕರೆದೊಯ್ದು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಸಂದೇಹ ಬರದಂತೆ ಬೈಕ್ ಬಳಿ ಶವ ಮಲಗಿಸಿ ಬೈಕ್ನಿಂದ ಬಿದ್ದು ಮೃತಪಟ್ಟಿದ್ದಾರೆ ಎಂದು ಬಿಂಬಿಸಲು ಯತ್ನಿಸಿದ್ದಾರೆ ಎಂದು ದೂರು ದಾಖಲಾಗಿದೆ.
ಮೇ 17 ರಂದು ರಾತ್ರಿ ಎಂಟು ಗಂಟೆ ಸುಮಾರಿಗೆ ಮಲಬಾದಿ ಗ್ರಾಮದ ಹತ್ತಿರ ಆರೋಪಿತರಾದ ಕಾಮಣ್ಣ ಮತ್ತು ಜಯಶ್ರೀ ತಮ್ಮ ಮೋಟಾರ್ ಸೈಕಲ್ ಮೇಲೆ ಸೊಸೆ ರೇಣುಕಾಳನ್ನ ಕೂರಿಸಿಕೊಂಡು ಹೋಗಿ, ರಸ್ತೆ ಮೇಲೆ ಕೆಳಕ್ಕೆ ಕೆಡವಿದ್ದಾರೆ. ನಂತರ ಅವಳ ತಲೆಗೆ ಕಲ್ಲಿನಿಂದ ಜಜ್ಜಿ, ಕುತ್ತಿಗೆಗೆ ಸೀರೆಯಿಂದ ಬಿಗಿದು, ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ರಾಕ್ಷಸರು.
ಇದಾದ ನಂತರ ಆರೋಪಿತ ಹಂತಕರು ದ್ವಿಚಕ್ರ ವಾಹನಕ್ಕೆ ಸೀರೆ ತಗುಲಿ ಬಿದ್ದು ಗಾಯಗೊಂಡು ಸೊಸೆ ಮೃತಪಟ್ಟಿದ್ದಾಳೆ ಎಂದು ಬಿಂಬಿಸೋಕೆ ಮುಂದಾಗಿದ್ದರು. ನಂತರ ಅವಳನ್ನು ಕೊಲೆ ಮಾಡಿದ ಸ್ಥಳದಿಂದ ಸುಮಾರು 120 ಅಡಿ ದೂರದವರೆಗೆ ಬೈಕ್ನಿಂದ ಎಳೆದುಕೊಂಡು ಹೋಗಿ, ಅವಳು ಬೈಕ್ ಮೇಲಿನಿಂದ ಬಿದ್ದು ಸತ್ತುಹೋಗಿರುತ್ತಾಳೆ ಎಂದು ಅಪಘಾತದ ದೃಶ್ಯವನ್ನು ಸೃಷ್ಟಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಈ ಮೂವರನ್ನ ತಮ್ಮ ಶೈಲಿಯಲ್ಲಿ ವಿಚಾರಿಸಬೇಕಾದರೆ ಸತ್ಯ ಸತ್ಯತೆಯನ್ನ ಬಾಯಿ ಬಿಟ್ಟಿದ್ದಾರೆ.
Shocking Belagavi Crime, Mother in law Kills Daughter in law for Not Having Children, Tries to Fake Accident.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am