ಬ್ರೇಕಿಂಗ್ ನ್ಯೂಸ್
09-08-20 05:27 pm Udupi Reporter ಕ್ರೈಂ
ಉಡುಪಿ, ಆಗಸ್ಟ್ 9: ದೇಶದಲ್ಲಿ ಕೇಂದ್ರ ಸರಕಾರವೇನೋ ತ್ರಿವಳಿ ತಲಾಖ್ ಗೆ ನಿಷೇಧ ಹೇರಿದೆ. ಮುಸ್ಲಿಂ ಮಹಿಳೆಯರು ಇದರಿಂದ ಸಂತಸಗೊಂಡಿದ್ದೂ ಆಗಿದೆ. ಆದರೆ, ತ್ರಿವಳಿ ತಲಾಖ್ ನೀಡೋರು ಕಡಿಮೆಯಾಗಿದ್ದಾರೆ ಅಂದರೆ ಅದು ಭ್ರಮೆ ಮಾತ್ರ. ಹುಟ್ಟುಗುಣ ಸುಟ್ಟರೂ ಬಿಡದು ಎನ್ನುವಂತೆ ಕೆಲವರು ವರ್ತಿಸುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆ, ಇಲ್ಲೊಬ್ಬ ಫೇಸ್ಬುಕ್ಕಲ್ಲೇ ತಲಾಖ್, ತಲಾಖ್ ಎಂದು ಕಂಬಿ ಎಣಿಸಿದ್ದು..
ಉಡುಪಿ ಜಿಲ್ಲೆಯ ಶಿರ್ವ ನಿವಾಸಿ ಶೇಕ್ ಮೊಹಮ್ಮದ್ ಸಲೀಂ (38) ಎಂಬಾತ ತನ್ನ ಪತ್ನಿಗೆ ಫೇಸ್ಬುಕ್ ತಲಾಖ್ ನೀಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಶಿರ್ವ ಜಾಮಿಯಾ ಮಸೀದಿ ಸಮೀಪದ ನಿವಾಸಿಯಾಗಿರುವ ಮೊಹಮ್ಮದ್ ಸಲೀಂ, 2010ರ ಸೆ.23ರಂದು ವಿವಾಹವಾಗಿದ್ದ. ಅಷ್ಟೇ ಅಲ್ಲ, ಮದುವೆಯಾಗಿ ಪತ್ನಿಯ ಜೊತೆಗೇ ಸೌದಿಗೂ ತೆರಳಿದ್ದ. ದಾಂಪತ್ಯಕ್ಕೆ ಸಾಕ್ಷಿಯಾಗಿ ಪುತ್ರಿಯೂ ಜನಿಸಿದ್ದಳು. ಆದರೆ, ಈ ನಡುವೆ ಸಲೀಂಗೆ ಏನು ಗರ ಬಡಿಯಿತೋ ಗೊತ್ತಿಲ್ಲ. ಸೌದಿ ಅರೇಬಿಯಾದ ದಮ್ಮಾಮ್ನಲ್ಲಿ ಪತ್ನಿ , ಮಗಳನ್ನು ಬಿಟ್ಟು 2019 ಅಕ್ಟೋಬರ್ 3ರಂದು ಎಸ್ಕೇಪ್ ಆಗಿ ಮುಂಬೈಗೆ ಬಂದಿದ್ದ. ಅಷ್ಟೇ ಅಲ್ಲ, ಮುಂಬೈಗೆ ಬರುವಾಗಲೇ ಇನ್ನೊಬ್ಬಳನ್ನು ಕಟ್ಟಿಕೊಂಡೇ ಆಗಮಿಸಿದ್ದ.

ಪತ್ನಿ ಹಾಗೂ ಮಗಳಿಗೆ ಗೊತ್ತೇ ಆಗದ ರೀತಿ ಮತ್ತೊಬ್ಬ ಮಹಿಳೆಯೊಂದಿಗೆ ಮುಂಬೈನಲ್ಲಿ ನೆಲೆಸಿದ್ದ. ಅಷ್ಟೇ ಅಲ್ಲ, ಹಳೆಯ ಪತ್ನಿಗೆ ತನ್ನ ಫೇಸ್ಬುಕ್ ಖಾತೆಯ ಮೆಸೆಂಜರ್ ಮೂಲಕ ತ್ರಿವಳಿ ತಲಾಖಿನ ವಾಯ್ಸ್ ಮೆಸೇಜ್ ಕಳಿಸಿದ್ದಾನೆ. ಗಂಡನ ಕಿತಾಪತಿ ಕಂಡು ಆಘಾತಗೊಂಡ ಪತ್ನಿ ಸ್ವಪ್ನಾಝ್, ಭಾರತದಲ್ಲಿ ತ್ರಿವಳಿ ತಲಾಖ್ ನಿಷೇಧ ಇರುವುದನ್ನು ಮನಗಂಡು ಸೇಡು ತೀರಿಸಲು ನಿರ್ಧರಿಸಿದ್ದಾಳೆ.
ಪತಿಯ ವಂಚನೆಯಿಂದ ದಿಕ್ಕೇ ತೋಚದಂತಾಗಿದ್ದ ಪತ್ನಿ ಸ್ವಪ್ನಾಝ್ ಧೈರ್ಯ ಮಾಡಿ, ಸೌದಿಯಿಂದಲೇ ಶಿರ್ವ ಠಾಣೆಗೆ ದೂರು ನೀಡಿದ್ದಾಳೆ. ದೂರನ್ನು ಗಂಭೀರವಾಗಿ ಪರಿಗಣಿಸಿದ ಶಿರ್ವ ಪೊಲೀಸರು, ಮೊಹಮ್ಮದ್ ಸಲೀಂ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಆಗಸ್ಟ್ 7 ರಂದು ಶಿರ್ವಕ್ಕೆ ಬಂದಿದ್ದ ಮೊಹಮ್ಮದ್ ಸಲೀಂನನ್ನು ಪೊಲೀಸರ ಅರೆಸ್ಟ್ ಮಾಡಿದ್ದು ಕಂಬಿ ಹಿಂದೆ ನಿಲ್ಲಿಸಿದ್ದಾರೆ. ತಲಾಖ್ ತಲಾಖ್ ಎಂದು ಮುಸ್ಲಿಂ ಮಹಿಳೆಯರನ್ನು ಶೋಷಣೆ ಮಾಡುವ ಧೋರಣೆ ಇನ್ನು ನಡೆಯಲ್ಲ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ. ಪತ್ನಿ ಸಫ್ನಾಝ್ ಸೌದಿಯಲ್ಲಿದ್ದೇ ಈ ಕೆಲಸ ಮಾಡಿದ್ದು ನಿಜಕ್ಕೂ ಗಟ್ಟಿಗಿತ್ತಿಯ ಕೆಲಸವೇ ಸರಿ..
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 01:55 pm
Mangalore Correspondent
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm