ಬ್ರೇಕಿಂಗ್ ನ್ಯೂಸ್
29-05-25 12:44 pm HK News Desk ಕ್ರೈಂ
ಕಾರವಾರ, ಮೇ 29 : ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕಿ ಕುಳಿತಿದ್ದ ಗರುಡಾ ಗ್ಯಾಂಗ್ನ ಮೂವರನ್ನು ಚಾಕು, ಕಾರದಪುಡಿ ಸೇರಿದಂತೆ ಇನ್ನಿತರ ವಸ್ತುಗಳ ಸಹಿತ ಹೆಡೆಮುರಿಕಟ್ಟುವಲ್ಲಿ ಭಟ್ಕಳ ಪೊಲೀಸರು ಯಶಸ್ವಿಯಾಗಿದ್ದಾರೆ. ತಪ್ಪಿಸಿಕೊಂಡಿರುವ ಇನ್ನಿಬ್ಬರ ಪತ್ತೆಗಾಗಿ ಬಲೆ ಬೀಸಲಾಗಿದೆ.
ಮಂಗಳೂರು ಚೊಕ್ಕಬೆಟ್ಟು ರಸ್ತೆಯ ಜಲೀಲ್ ಹುಸೈನ್, ಭಟ್ಕಳದ ಹೆಬಳೆಯ ಗಾಂಧಿನಗರದ ವೃತ್ತಿಯಲ್ಲಿ ಚಾಲಕನಾದ ನಾಸೀರ್ ಹಕೀಮ್ ಎಂಬವರನ್ನು ಬಂಧಿಸಲಾಗಿದೆ. ಇವರಲ್ಲಿ, ಜಲೀಲ್ ಮೇಲೆ ಈಗಾಗಲೇ 11 ಪ್ರಕರಣಗಳು ಹಾಗೂ ನಾಸೀರ್ ವಿರುದ್ಧ 02 ಕೇಸ್ ದಾಖಲಾಗಿವೆ. ಮತ್ತೋರ್ವ ಆರೋಪಿ ಬಾಲಕನಾಗಿದ್ದು, ಈತನ ಮೇಲೆ ಒಂದು ಪ್ರಕರಣವಿದೆ. ಉಳಿದಂತೆ ಕಾರಿನಲ್ಲಿದ್ದ ಇತರ ಇಬ್ಬರು ಪೊಲೀಸರನ್ನು ಕಂಡು ಓಡಿ ಹೋಗಿದ್ದಾರೆ. ಅವರನ್ನ ಮಗ್ಗಂ ಕಾಲೋನಿಯ ಜೀಶಾನ್ ಹಾಗೂ ಬಟ್ಟಾಗಾಂವ ನಿವಾಸಿ ನಬೀಲ್ ಎಂದು ಗುರುತಿಸಲಾಗಿದೆ. ಪರಾರಿಯಾದವರ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಭಟ್ಕಳದ ಬಿಲಾಲಖಂಡ ಗ್ರಾಮದ ಸಾಗರ ರಸ್ತೆಯ ರಾಜ್ಯ ಹೆದ್ದಾರಿಯಲ್ಲಿ ಬುಧವಾರ ಬೆಳಗಿನ ಜಾವ 03 ಗಂಟೆ ಸುಮಾರಿಗೆ ಈ ಐವರು ಆರೋಪಿತರು ದರೋಡೆ ಮಾಡಲು ಸಂಚು ರೂಪಿಸಿದ್ದರು. ಇನ್ನೊವಾದಲ್ಲಿ ಬಂದಿದ್ದ ಇವರು ಹೊಂಚು ಹಾಕಿಕೊಂಡು ಗುಳ್ಳಿ ರಸ್ತೆ ಕ್ರಾಸ್ ಹತ್ತಿರ ಕತ್ತಲೆಯಲ್ಲಿ ಕಾರಿನಲ್ಲಿಯೇ ಕುಳಿತಿದ್ದರು. ಆಗ ಅದೇ ಮಾರ್ಗದಲ್ಲಿ ಬಂದ ಭಟ್ಕಳ ಗ್ರಾಮೀಣ ಠಾಣೆ ಪಿಎಸ್ಐ ರನ್ನಗೌಡ ಪಾಟೀಲ್ ಹಾಗೂ ಸಿಬ್ಬಂದಿ ಆರೋಪಿತರನ್ನು ನೋಡಿ ಅನುಮಾನಗೊಂಡು ವಿಚಾರಿಸಲು ಮುಂದಾದಾಗ, ತಪ್ಪಿಸಿಕೊಳ್ಳಲು ಕಾರನ್ನು ಹಿಮ್ಮುಖವಾಗಿ ಚಲಾಯಿಸಿದ್ದರು. ಆದರೆ ಕಾರು ನಿಯಂತ್ರಣ ತಪ್ಪಿ ಗಟಾರಿನಲ್ಲಿ ಬಿದ್ದಿದೆ. ಆಗ ಗರುಡಾ ಗ್ಯಾಂಗ್ನ ಮೂವರು ಸಿಕ್ಕಿಬಿದ್ದಿದ್ದಾರೆ. ಇನ್ನುಳಿದ ಇಬ್ಬರು ಆರೋಪಿತರು ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಿನಲ್ಲಿದ್ದ ಚಾಕು, ಕಾರದ ಪುಡಿ, ಮಂಕಿಕ್ಯಾಪ್, ಬೆಲ್ಟ್, ತಾಡಪತ್ರೆ ಸೇರಿ ಇತರ ವಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಲಂ 310(4), 310(5), ಬಿಎನ್ಎಸ್-2023 ಅಡಿ ಪ್ರಕರಣ ದಾಖಲಾಗಿದೆ.
Garuda Gang from Mangalore Caught Lurking on Highway for Robbery, Armed with Knives and Chili Powder, Nabbed in the Dark by Alert Karwar Police.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm