ಬ್ರೇಕಿಂಗ್ ನ್ಯೂಸ್
09-08-20 06:52 pm Headline Karnataka News Network ಕ್ರೈಂ
ಹೈದರಾಬಾದ್, ಆಗಸ್ಟ್ 10: ಹಣ ಎಂದರೆ ಹೆಣವೂ ಬಾಯಿ ಬಿಡುತ್ತೆ ಅಂತಾರೆ. ಇನ್ನು ಸಂಬಂಧಗಳ ಬಗ್ಗೆ ಬೇರೆ ಹೇಳ ಬೇಕಾಗಿಲ್ಲ. ಹಣದ ಮುಂದೆ ಯಾವ ಸಂಬಂಧಕ್ಕೂ ಇಂದು ಬೆಲೆ ಇಲ್ಲದಂತಾಗಿದೆ. 3 ಕೋಟಿ ರೂಪಾಯಿ ಮೌಲ್ಯದ ಆಸ್ತಿಗೆ ತಂದೆಯನ್ನೇ ಮಕ್ಕಳು ಬೀದಿಗೆ ತಳ್ಳಿದ ಹೃದಯ ವಿದ್ರಾವಕ ಘಟನೆ ಸಿದ್ದಿಪೇಟ್ ಎಂಬಲ್ಲಿ ನಲ್ಲಿ ಬೆಳಕಿಗೆ ಬಂದಿದೆ.
ಜೀವಿತಾವಧಿಯಲ್ಲಿ ಅಂದಾಜು 3 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಸಂಪಾದಿಸಿದ ತಂದೆಯನ್ನು ಬೀದಿಗೆ ತಳ್ಳಿ ಅವರ ಹೆಸರಿನಲ್ಲಿದ್ದ 3 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಹಂಚಿಕೊಂಡ ಘಟನೆ ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯ ಮಧಿರಾ ಎಂಬಲ್ಲಿ ನಡೆದಿದೆ.
ಕೊನೆಗೆ ಅಣ್ಣತಮ್ಮಂದಿರು ವಯಸ್ಸಾದ ಅಪ್ಪನ ಜವಾಬ್ದಾರಿ ಹೊರಲು ನಿರಾಕರಿಸಿ ಬೀದಿಗೆ ತಳ್ಳಿದ್ದಾರೆ. ಬೀದಿಗೆ ಬಿದ್ದ ವೃದ್ಧರಿಗೆ ಗ್ರಾಮದ ಜನರು ಊಟ ಕೊಡಲು ಮುಂದಾದರೆ, ಕೊಡದಂತೆ ಅವರನ್ನೂ ಬೆದರಿಸಿದ್ದ ಅವರ ಗತಿ ಏನಾಯಿತು ನೋಡಿ.

ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯ ಮಧಿರಾ ಗ್ರಾಮದ ಪೋತು ಸುಧಾಕರ್ (45), ಪೋತು ಜನಾರ್ದನ (48) ಮತ್ತು ಪೋತು ರವೀಂದರ್ (52) ಈ ಅಮಾನವೀಯ ಕೃತ್ಯ ಎಸಗಿದ್ದಾರೆ.
ಇದೀಗ ತೀವ್ರ ಅನಾರೋಗ್ಯಕ್ಕೆ ತುತ್ತಾಗಿರುವ ಈ ಮೂವರ ತಂದೆ ಪೋತು ಮಲ್ಲಯ್ಯ (79) ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೋತು ಮಲ್ಲಯ್ಯ ಅವರು ತಮ್ಮ ಜೀವಿತಾವಧಿಯಲ್ಲಿ ಅಂದಾಜು 3 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮಾಡಿದ್ದರು. ಅಲ್ಲದೆ, 6 ಎಕರೆ ಭೂಮಿಯನ್ನು ಪತ್ನಿಯ ಹೆಸರಿಗೆ ನೋಂದಾಯಿಸಿಕೊಟ್ಟಿದ್ದರು. ಸಾಕಷ್ಟು ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ಮಾಡಿಸಿದ್ದರು. ಈ ಎಲ್ಲ ಆಸ್ತಿ ಮತ್ತು ಚಿನ್ನಾಭರಣ, ಬೆಳ್ಳಿ ವಸ್ತುಗಳನ್ನು ಅವರ ಮೂವರೂ ಮಕ್ಕಳು ಸಮನಾಗಿ ಹಂಚಿಕೊಂಡಿದ್ದರು. ಆದರೆ, ಭೂಮಿ ತಾಯಿಯ ಹೆಸರಿನಲ್ಲಿ ಇದ್ದುದರಿಂದ ಅವರಿಗೆ ಏನೂ ಮಾಡಲಾಗಿರಲಿಲ್ಲ.
ಆಸ್ತಿ ಎಲ್ಲವೂ ತಮ್ಮ ಹೆಸರಿಗೆ ನೋಂದಾಣಿಯಾಗುತ್ತಲೇ ಬಾಲ ಬಿಚ್ಚಿದ ‘ವರ’ಪುತ್ರರು, ತಮ್ಮ ತಂದೆಯ ಜವಾಬ್ದಾರಿಯನ್ನು ಹೊತ್ತುಕೊಳ್ಳಲು ಒಬ್ಬೊಬ್ಬರಾಗಿ ನಿರಾಕರಿಸುತ್ತಾ ಮನೆಯಿಂದ ಹೊರಹಾಕಿದರು.
ಕೊನೆಗೆ ಗ್ರಾಮದಲ್ಲಿ ಬೀದಿ, ಬೀದಿ ಅಲೆಯುತ್ತಾ, ಬೀದಿ ಬದಿಯ ಜಗಲಿಯ ಮೇಲೆ ಮಲಗಿಕೊಳ್ಳುತ್ತಿದ್ದ ವೃದ್ಧ ಮಲ್ಲಯ್ಯ ಅವರಿಗೆ ಗ್ರಾಮಸ್ಥರು ಊಟ ಕೊಟ್ಟು ಸಮಾಧಾನಪಡಿಸುತ್ತಿದ್ದರು. ಆದರೆ, ತಮ್ಮ ತಂದೆಗೆ ಊಟ ಕೊಟ್ಟವರೊಂದಿಗೆ ಜಗಳಕ್ಕಿಳಿಯುತ್ತಿದ್ದ ಈ ಕುಲ ಪುತ್ರರು ಊಟ ಕೊಡದಂತೆ ತಾಕೀತು ಮಾಡುತ್ತಿದ್ದರು.

ಮಲ್ಲಯ್ಯ ಅವರ ಪರಿಸ್ಥಿತಿಯ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಇದನ್ನು ಆಧರಿಸಿ ಪೊಲೀಸರು ಮೂವರು ಪುತ್ರರನ್ನು ಬಂಧಿಸಿ, ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕ್ಷೇಮಾಭಿವೃದ್ಧಿ ಕಾಯ್ದೆ, 2007ರ 24ನೇ ವಿಧಿ ಮತ್ತು ಐಪಿಸಿ 420ರ ಪ್ರಕಾರ ಆರೋಪ ಹೊರಿಸಿ ಬಂಧಿತರನ್ನು ಹುಜುರಾಬಾದ್ ಜೈಲಿನಲ್ಲಿ ಇರಿಸಲಾಗಿದೆ .
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm