ಬ್ರೇಕಿಂಗ್ ನ್ಯೂಸ್
22-12-20 11:00 am Headline Karnataka News Network ಕ್ರೈಂ
ಕಾಸರಗೋಡು, ಡಿ.22 : ಕೇರಳ ಸರಹದ್ದಿನ ಮಂಜೇಶ್ವರ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮಂಗಳೂರಿನ ಮೀನುಗಾರರ ತಂಡ, ಇಬ್ಬರು ಪೊಲೀಸರನ್ನು ಅಪಹರಿಸಿ ಬಳಿಕ ಮಂಗಳೂರು ಬಂದರಿನಲ್ಲಿ ಇಳಿಸಿದ ಘಟನೆ ನಡೆದಿದೆ.
ಕುಂಬಳೆ ಶಿರಿಯಾದಲ್ಲಿರುವ ಕರಾವಳಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕೆ.ವಿ. ರಾಜೀವ್ ಕುಮಾರ್ ನೇತೃತ್ವದ ತಂಡ ಸೋಮವಾರ ತಪಾಸಣೆ ನಡೆಸುತ್ತಿದ್ದ ಸಂದರ್ಭ ಮಂಜೇಶ್ವರ ಸಮುದ್ರದಲ್ಲಿ ಕರ್ನಾಟಕ ನೋಂದಣಿಯ ಬೋಟ್ ಕಂಡುಬಂದಿತ್ತು. ಈ ವೇಳೆ ದಾಖಲೆಗಳನ್ನು ಪರಿಶೀಲಿಸಿದಾಗ ಸಂಶಯ ಉಂಟಾಗಿದ್ದು ಪೊಲೀಸರು ಬೋಟ್ನ್ನು ವಶಕ್ಕೆ ಪಡೆದಿದ್ದರು.
ಬೋಟ್ನಲ್ಲಿ 12 ಮಂದಿ ಇದ್ದರೆನ್ನಲಾಗಿದೆ. ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಬೋಟ್ನ್ನು ಮಂಜೇಶ್ವರ ಬಂದರಿಗೆ ತಲುಪಿಸಲು ಸೂಚಿಸಿದ ಎಸ್ಸೈ, ಈ ಬೋಟ್ಗೆ ರಘು ಮತ್ತು ಸುಧೀಶ್ ಎಂಬ ಪೊಲೀಸ್ ಸಿಬ್ಬಂದಿಯನ್ನು ಹತ್ತಿಸಿದರು. ಬಳಿಕ ಸಬ್ ಇನ್ಸ್ಪೆಕ್ಟರ್ ರಾಜೀವ್ ಕುಮಾರ್ ಹಾಗೂ ಇತರ ಪೊಲೀಸರು ಅಲ್ಲಿಂದ ಮಂಜೇಶ್ವರ ಬಂದರಿಗೆ ಆಗಮಿಸಿದರು.

ಅವರು ಬಂದರು ತಲುಪಿ ಗಂಟೆಗಳೇ ಕಳೆದರೂ ವಶಕ್ಕೆ ಪಡೆದ ಬೋಟ್ ಬರಲೇ ಇಲ್ಲ. ಈ ಹಿನ್ನೆಲೆಯಲ್ಲಿ ಬೋಟ್ ನಲ್ಲಿದ್ದ ಪೊಲೀಸರನ್ನು ಸಂಪರ್ಕಿಸಿದಾಗ ಬೋಟ್ ಮಂಜೇಶ್ವರ ಬಂದರಿಗೆ ಬಾರದೆ, ವಿರುದ್ಧ ದಿಕ್ಕಿಗೆ ವೇಗವಾಗಿ ತೆರಳುತ್ತಿರುವ ಮಾಹಿತಿ ಲಭಿಸಿತು. ಕೂಡಲೇ ಕಾಸರಗೋಡಿನ ಹಿರಿಯ ಪೊಲೀಸ್ ಅಧಿಕಾರಿಗಳು ಮಂಗಳೂರು ಪೊಲೀಸರನ್ನು ಸಂಪರ್ಕಿಸಿದರು. ಅಷ್ಟರಲ್ಲಿ ಬೋಟ್ ಮಂಗಳೂರು ಬಂದರು ತಲುಪಿದ್ದು, ಇಬ್ಬರು ಪೊಲೀಸರು ಸುರಕ್ಷಿತರಾಗಿದ್ದಾರೆ ಎಂದು ತಿಳಿದು ಬಂದಿತು ಎಂದು ಪೊಲೀಸರು ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.
ಕರ್ನಾಟಕ ನೋಂದಣಿಯ ಬೋಟ್ನಲ್ಲಿ ಅಗತ್ಯ ದಾಖಲೆ ಇಲ್ಲದಿದ್ದ ಕಾರಣ ಅದನ್ನು ವಶಕ್ಕೆ ಪಡೆಯಲಾಗಿತ್ತು ಎಂದು ಕುಂಬಳೆ ಕರಾವಳಿ ಪೊಲೀಸರು ತಿಳಿಸಿದ್ದಾರೆ. ಈ ನಡುವೆ ಪೊಲೀಸರನ್ನು ಹೊತ್ತೊಯ್ದ ಆರೋಪದಲ್ಲಿ ಬೋಟ್ನಲ್ಲಿದ್ದವರ ಮೇಲೆ ಕೇಸು ದಾಖಲಾಗಿದೆ ಎಂದು ತಿಳಿದುಬಂದಿದೆ.
Cops who came to verify boat documents are said to be kidnapped by fishermen's and then later left them in Mangalore Fishing Harbour. The Police personals were of Kumble Police Station.
18-03-26 11:00 pm
supritha Jain
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
ಯುಗಾದಿ ಹಬ್ಬಕ್ಕೆ ಬಸ್ ದರ ಏರಿಕೆ ; ಜೀವಂತ ವ್ಯಕ್ತಿಯ...
18-03-26 03:41 pm
18-03-26 07:11 pm
HK News Staffer
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
18-03-26 10:42 pm
HK News Staffer
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
ಭೂ ವ್ಯವಹಾರದ ವೈಷಮ್ಯ ; ಮೋಸ ಮಾಡಿದ ಸಿಟ್ಟಿನಲ್ಲಿ ಇನ...
17-03-26 10:54 pm
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
18-03-26 11:01 pm
HK News Desk
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm