ಬ್ರೇಕಿಂಗ್ ನ್ಯೂಸ್
22-12-20 11:00 am Headline Karnataka News Network ಕ್ರೈಂ
ಕಾಸರಗೋಡು, ಡಿ.22 : ಕೇರಳ ಸರಹದ್ದಿನ ಮಂಜೇಶ್ವರ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮಂಗಳೂರಿನ ಮೀನುಗಾರರ ತಂಡ, ಇಬ್ಬರು ಪೊಲೀಸರನ್ನು ಅಪಹರಿಸಿ ಬಳಿಕ ಮಂಗಳೂರು ಬಂದರಿನಲ್ಲಿ ಇಳಿಸಿದ ಘಟನೆ ನಡೆದಿದೆ.
ಕುಂಬಳೆ ಶಿರಿಯಾದಲ್ಲಿರುವ ಕರಾವಳಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕೆ.ವಿ. ರಾಜೀವ್ ಕುಮಾರ್ ನೇತೃತ್ವದ ತಂಡ ಸೋಮವಾರ ತಪಾಸಣೆ ನಡೆಸುತ್ತಿದ್ದ ಸಂದರ್ಭ ಮಂಜೇಶ್ವರ ಸಮುದ್ರದಲ್ಲಿ ಕರ್ನಾಟಕ ನೋಂದಣಿಯ ಬೋಟ್ ಕಂಡುಬಂದಿತ್ತು. ಈ ವೇಳೆ ದಾಖಲೆಗಳನ್ನು ಪರಿಶೀಲಿಸಿದಾಗ ಸಂಶಯ ಉಂಟಾಗಿದ್ದು ಪೊಲೀಸರು ಬೋಟ್ನ್ನು ವಶಕ್ಕೆ ಪಡೆದಿದ್ದರು.
ಬೋಟ್ನಲ್ಲಿ 12 ಮಂದಿ ಇದ್ದರೆನ್ನಲಾಗಿದೆ. ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಬೋಟ್ನ್ನು ಮಂಜೇಶ್ವರ ಬಂದರಿಗೆ ತಲುಪಿಸಲು ಸೂಚಿಸಿದ ಎಸ್ಸೈ, ಈ ಬೋಟ್ಗೆ ರಘು ಮತ್ತು ಸುಧೀಶ್ ಎಂಬ ಪೊಲೀಸ್ ಸಿಬ್ಬಂದಿಯನ್ನು ಹತ್ತಿಸಿದರು. ಬಳಿಕ ಸಬ್ ಇನ್ಸ್ಪೆಕ್ಟರ್ ರಾಜೀವ್ ಕುಮಾರ್ ಹಾಗೂ ಇತರ ಪೊಲೀಸರು ಅಲ್ಲಿಂದ ಮಂಜೇಶ್ವರ ಬಂದರಿಗೆ ಆಗಮಿಸಿದರು.

ಅವರು ಬಂದರು ತಲುಪಿ ಗಂಟೆಗಳೇ ಕಳೆದರೂ ವಶಕ್ಕೆ ಪಡೆದ ಬೋಟ್ ಬರಲೇ ಇಲ್ಲ. ಈ ಹಿನ್ನೆಲೆಯಲ್ಲಿ ಬೋಟ್ ನಲ್ಲಿದ್ದ ಪೊಲೀಸರನ್ನು ಸಂಪರ್ಕಿಸಿದಾಗ ಬೋಟ್ ಮಂಜೇಶ್ವರ ಬಂದರಿಗೆ ಬಾರದೆ, ವಿರುದ್ಧ ದಿಕ್ಕಿಗೆ ವೇಗವಾಗಿ ತೆರಳುತ್ತಿರುವ ಮಾಹಿತಿ ಲಭಿಸಿತು. ಕೂಡಲೇ ಕಾಸರಗೋಡಿನ ಹಿರಿಯ ಪೊಲೀಸ್ ಅಧಿಕಾರಿಗಳು ಮಂಗಳೂರು ಪೊಲೀಸರನ್ನು ಸಂಪರ್ಕಿಸಿದರು. ಅಷ್ಟರಲ್ಲಿ ಬೋಟ್ ಮಂಗಳೂರು ಬಂದರು ತಲುಪಿದ್ದು, ಇಬ್ಬರು ಪೊಲೀಸರು ಸುರಕ್ಷಿತರಾಗಿದ್ದಾರೆ ಎಂದು ತಿಳಿದು ಬಂದಿತು ಎಂದು ಪೊಲೀಸರು ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.
ಕರ್ನಾಟಕ ನೋಂದಣಿಯ ಬೋಟ್ನಲ್ಲಿ ಅಗತ್ಯ ದಾಖಲೆ ಇಲ್ಲದಿದ್ದ ಕಾರಣ ಅದನ್ನು ವಶಕ್ಕೆ ಪಡೆಯಲಾಗಿತ್ತು ಎಂದು ಕುಂಬಳೆ ಕರಾವಳಿ ಪೊಲೀಸರು ತಿಳಿಸಿದ್ದಾರೆ. ಈ ನಡುವೆ ಪೊಲೀಸರನ್ನು ಹೊತ್ತೊಯ್ದ ಆರೋಪದಲ್ಲಿ ಬೋಟ್ನಲ್ಲಿದ್ದವರ ಮೇಲೆ ಕೇಸು ದಾಖಲಾಗಿದೆ ಎಂದು ತಿಳಿದುಬಂದಿದೆ.
Cops who came to verify boat documents are said to be kidnapped by fishermen's and then later left them in Mangalore Fishing Harbour. The Police personals were of Kumble Police Station.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm