ಬ್ರೇಕಿಂಗ್ ನ್ಯೂಸ್
22-12-20 11:00 am Headline Karnataka News Network ಕ್ರೈಂ
ಕಾಸರಗೋಡು, ಡಿ.22 : ಕೇರಳ ಸರಹದ್ದಿನ ಮಂಜೇಶ್ವರ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮಂಗಳೂರಿನ ಮೀನುಗಾರರ ತಂಡ, ಇಬ್ಬರು ಪೊಲೀಸರನ್ನು ಅಪಹರಿಸಿ ಬಳಿಕ ಮಂಗಳೂರು ಬಂದರಿನಲ್ಲಿ ಇಳಿಸಿದ ಘಟನೆ ನಡೆದಿದೆ.
ಕುಂಬಳೆ ಶಿರಿಯಾದಲ್ಲಿರುವ ಕರಾವಳಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕೆ.ವಿ. ರಾಜೀವ್ ಕುಮಾರ್ ನೇತೃತ್ವದ ತಂಡ ಸೋಮವಾರ ತಪಾಸಣೆ ನಡೆಸುತ್ತಿದ್ದ ಸಂದರ್ಭ ಮಂಜೇಶ್ವರ ಸಮುದ್ರದಲ್ಲಿ ಕರ್ನಾಟಕ ನೋಂದಣಿಯ ಬೋಟ್ ಕಂಡುಬಂದಿತ್ತು. ಈ ವೇಳೆ ದಾಖಲೆಗಳನ್ನು ಪರಿಶೀಲಿಸಿದಾಗ ಸಂಶಯ ಉಂಟಾಗಿದ್ದು ಪೊಲೀಸರು ಬೋಟ್ನ್ನು ವಶಕ್ಕೆ ಪಡೆದಿದ್ದರು.
ಬೋಟ್ನಲ್ಲಿ 12 ಮಂದಿ ಇದ್ದರೆನ್ನಲಾಗಿದೆ. ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಬೋಟ್ನ್ನು ಮಂಜೇಶ್ವರ ಬಂದರಿಗೆ ತಲುಪಿಸಲು ಸೂಚಿಸಿದ ಎಸ್ಸೈ, ಈ ಬೋಟ್ಗೆ ರಘು ಮತ್ತು ಸುಧೀಶ್ ಎಂಬ ಪೊಲೀಸ್ ಸಿಬ್ಬಂದಿಯನ್ನು ಹತ್ತಿಸಿದರು. ಬಳಿಕ ಸಬ್ ಇನ್ಸ್ಪೆಕ್ಟರ್ ರಾಜೀವ್ ಕುಮಾರ್ ಹಾಗೂ ಇತರ ಪೊಲೀಸರು ಅಲ್ಲಿಂದ ಮಂಜೇಶ್ವರ ಬಂದರಿಗೆ ಆಗಮಿಸಿದರು.
ಅವರು ಬಂದರು ತಲುಪಿ ಗಂಟೆಗಳೇ ಕಳೆದರೂ ವಶಕ್ಕೆ ಪಡೆದ ಬೋಟ್ ಬರಲೇ ಇಲ್ಲ. ಈ ಹಿನ್ನೆಲೆಯಲ್ಲಿ ಬೋಟ್ ನಲ್ಲಿದ್ದ ಪೊಲೀಸರನ್ನು ಸಂಪರ್ಕಿಸಿದಾಗ ಬೋಟ್ ಮಂಜೇಶ್ವರ ಬಂದರಿಗೆ ಬಾರದೆ, ವಿರುದ್ಧ ದಿಕ್ಕಿಗೆ ವೇಗವಾಗಿ ತೆರಳುತ್ತಿರುವ ಮಾಹಿತಿ ಲಭಿಸಿತು. ಕೂಡಲೇ ಕಾಸರಗೋಡಿನ ಹಿರಿಯ ಪೊಲೀಸ್ ಅಧಿಕಾರಿಗಳು ಮಂಗಳೂರು ಪೊಲೀಸರನ್ನು ಸಂಪರ್ಕಿಸಿದರು. ಅಷ್ಟರಲ್ಲಿ ಬೋಟ್ ಮಂಗಳೂರು ಬಂದರು ತಲುಪಿದ್ದು, ಇಬ್ಬರು ಪೊಲೀಸರು ಸುರಕ್ಷಿತರಾಗಿದ್ದಾರೆ ಎಂದು ತಿಳಿದು ಬಂದಿತು ಎಂದು ಪೊಲೀಸರು ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.
ಕರ್ನಾಟಕ ನೋಂದಣಿಯ ಬೋಟ್ನಲ್ಲಿ ಅಗತ್ಯ ದಾಖಲೆ ಇಲ್ಲದಿದ್ದ ಕಾರಣ ಅದನ್ನು ವಶಕ್ಕೆ ಪಡೆಯಲಾಗಿತ್ತು ಎಂದು ಕುಂಬಳೆ ಕರಾವಳಿ ಪೊಲೀಸರು ತಿಳಿಸಿದ್ದಾರೆ. ಈ ನಡುವೆ ಪೊಲೀಸರನ್ನು ಹೊತ್ತೊಯ್ದ ಆರೋಪದಲ್ಲಿ ಬೋಟ್ನಲ್ಲಿದ್ದವರ ಮೇಲೆ ಕೇಸು ದಾಖಲಾಗಿದೆ ಎಂದು ತಿಳಿದುಬಂದಿದೆ.
Cops who came to verify boat documents are said to be kidnapped by fishermen's and then later left them in Mangalore Fishing Harbour. The Police personals were of Kumble Police Station.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm