ಬ್ರೇಕಿಂಗ್ ನ್ಯೂಸ್
10-06-25 12:44 pm Bangalore Correspondent ಕ್ರೈಂ
ಬೆಂಗಳೂರು, ಜೂ 10 : ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಮೂಲಕ ವಂಚಿಸಿದ್ದ ಇಬ್ಬರು ಆರೋಪಿಗಳನ್ನ ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾರಾಯಣ್ ಸಿಂಗ್ ಚೌಧರಿ ಹಾಗೂ ಈಶ್ವರ್ ಸಿಂಗ್ ಬಂಧಿತ ಆರೋಪಿಗಳು. ಮಂಜುನಾಥ್ ನೀಡಿದ ದೂರಿನನ್ವಯ ತನಿಖೆ ಕೈಗೊಂಡಿದ್ದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.
ಇಂಜಿನಿಯರ್ ಆಗಿದ್ದ ಮಂಜುನಾಥ್ 31 ವರ್ಷಗಳ ಕಾಲ ನೈಜೀರಿಯಾದಲ್ಲಿ ಕೆಲಸ ನಿರ್ವಹಿಸಿ, ನಿವೃತ್ತಿಯ ಬಳಿಕ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಬ್ಯಾಂಕ್ನ ಪ್ರತಿನಿಧಿಗಳ ಸೋಗಿನಲ್ಲಿ ಮಾರ್ಚ್ ತಿಂಗಳಿನಲ್ಲಿ ಮಂಜುನಾಥ್ ಅವರಿಗೆ ಕರೆ ಮಾಡಿದ್ದ ಆರೋಪಿಗಳು, "ಕ್ರೆಡಿಟ್ ಕಾರ್ಡ್ ಲಿಮಿಟ್ ಓವರ್ ಡ್ಯೂ ಆಗಿದೆ" ಎಂದು ವಿವರಗಳನ್ನು ಪಡೆದುಕೊಂಡಿದ್ದರು. ಬಳಿಕ ನಿಮ್ಮ ಖಾತೆಯ ಮೂಲಕ ಅಕ್ರಮವಾಗಿ ಹಣ ವರ್ಗಾವಣೆಯಾಗಿದೆ, ಆದ್ದರಿಂದ ಇಡಿ, ಸಿಬಿಐನಲ್ಲಿ ಪ್ರಕರಣ ದಾಖಲಾಗಿದೆ ಎಂದಿದ್ದರು. ನಂತರ ನಕಲಿ ವಾರೆಂಟ್ನ ಫೋಟೋ ಕಳಿಸಿ "ನಿಮ್ಮನ್ನ ಬಂಧಿಸುತ್ತಿದ್ದು, ತಿಹಾರ್ ಜೈಲಿನಲ್ಲಿರಿಸಲಿದ್ದೇವೆ" ಎಂದು ಬೆದರಿಸಿದ್ದರು. ಹೀಗೆ.. ಮೂರು ತಿಂಗಳ ಕಾಲ ಬೆದರಿಸುತ್ತ ವಿವಿಧ ಹಂತಗಳಲ್ಲಿ 4.79 ಕೋಟಿ ರೂಪಾಯಿ ಸುಲಿಗೆಗೈದಿದ್ದ ಆರೋಪಿಗಳು, ಆಸ್ತಿ ಪತ್ರಗಳ ಕಾಪಿಗಳನ್ನು ಸಹ ಪಡೆದುಕೊಂಡಿದ್ದರು. ವಂಚಕರ ಕಿರುಕುಳ ಅತಿಯಾದಾಗ ಅದನ್ನು ತಾಳಲಾರದ ದಂಪತಿ ಆಗ್ನೇಯ ವಿಭಾಗದ ಸಿಇಎನ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ವೃದ್ಧ ದಂಪತಿಯ ಖಾತೆಯಿಂದ ಹಣ ವರ್ಗಾವಣೆ ಮಾಡಿಕೊಂಡಿದ್ದ ನಾರಾಯಣ್ ಸಿಂಗ್ ಚೌಧರಿ ಹಾಗೂ ಈಶ್ವರ್ ಸಿಂಗ್ ಅವರನ್ನು ಬಂಧಿಸಿದ್ದಾರೆ. ವಂಚಿಸಿದ ಹಣವನ್ನ ಆರೋಪಿಗಳು ಶ್ರೀಲಂಕಾದಲ್ಲಿ ಕ್ಯಾಸಿನೋ ಆಡಲು ಬಳಸಿರುವುದು ಸಹ ಗೊತ್ತಾಗಿದೆ. ಸದ್ಯ ಆರೋಪಿತರ ವಿಚಾರಣೆ ನಡೆಸಲಾಗುತ್ತಿದ್ದು, ವಂಚಿಸಿದ ಹಣವನ್ನು ಜಪ್ತಿ ಮಾಡಲಾಗುತ್ತಿದೆ ಎಂದು ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತೀಮಾ ತಿಳಿಸಿದ್ದಾರೆ.
In a shocking case of cyber fraud, an elderly couple in Bengaluru was duped of ₹4.79 crore by fraudsters posing as bank and law enforcement officials. The accused, Narayan Singh Choudhary and Ishwar Singh, have been arrested by the Central Crime Branch (CEN) Police of Bengaluru’s Southeast Division.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 05:34 pm
HK News Staffer
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm