ಬ್ರೇಕಿಂಗ್ ನ್ಯೂಸ್
11-06-25 02:03 pm Mangalore Correspondent ಕ್ರೈಂ
ಬಂಟ್ವಾಳ, ಜೂನ್ 11 : ಅಡಿಕೆ ಖರೀದಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಯೊಬ್ಬ ಬಂಟ್ವಾಳ ಆಸುಪಾಸಿನ 50ಕ್ಕು ಹೆಚ್ಚು ರೈತರಿಂದ ಅಡಿಕೆ ಖರೀದಿಸಿ ಹಣ ಕೊಡದೆ ಕೋಟ್ಯಾಂತರ ರೂಪಾಯಿ ಮೋಸ ಮಾಡಿ ಪರಾರಿಯಾಗಿದ್ದು ಈ ಬಗ್ಗೆ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ಪೇಟೆಯ ಬಡ್ಡಕಟ್ಟೆಯಲ್ಲಿ ಎ.ಬಿ. ಸುಪಾರಿ ಎಂಬ ಅಂಗಡಿ ಹೊಂದಿರುವ ನಾವೂರು ಗ್ರಾಮದ ಮೈಂದಾಳ ನಿವಾಸಿ ನೌಫಲ್ ಮಹಮ್ಮದ್ ಪರಾರಿಯಾದ ಆರೋಪಿ. 50ಕ್ಕೂ ಅಧಿಕ ಅಡಿಕೆ ಬೆಳೆಗಾರರಿಗೆ ಮೋಸ ಮಾಡಿದ್ದು, ರೈತರು ಬಂಟ್ವಾಳ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. ಪ್ರವೀಣ್ ಡಿ ಸೋಜಾ (45) ಎಂಬವರು ದೂರು ದಾಖಲಿಸಿದ್ದು ಕಳೆದ ಮಾರ್ಚ್ 8 ರಂದು ನೌಫಲ್ ಮಹಮ್ಮದ್ ಅವರ ಎ.ಬಿ ಸುಪಾರಿ ಅಂಗಡಿಗೆ ವಾಹನದಲ್ಲಿ ಹೋಗಿ ಸುಮಾರು 6.5 ಕ್ವಿಂಟಾಲ್ ಅಡಿಕೆಯನ್ನು ಮಾರಾಟ ಮಾಡಿದ್ದು ಅದರ ಮೌಲ್ಯ 3.50 ಲಕ್ಷ ಹಣವನ್ನು ಕೊಟ್ಟಿರಲಿಲ್ಲ. ಹಿಂದಿನಿಂದಲೂ ಅಡಿಕೆ ಕೊಡುತ್ತಿದ್ದುದರಿಂದ ಆಮೇಲೆ ಹಣ ಕೊಡುವುದಾಗಿ ವ್ಯಾಪಾರಿ ಹೇಳಿದ್ದ.
ಪ್ರವೀಣ್ ಡಿಸೋಜಾ ಆನಂತರ ಹಣವನ್ನು ನೀಡುವಂತೆ ಕೇಳತೊಡಗಿದ್ದರು. ಜೂನ್ 9ರಂದು ರಾತ್ರಿ ಆರೋಪಿ ನೌಫಾಲ್ ತಾನು ನಷ್ಟದಲ್ಲಿದ್ದು, ಬಾಕಿ ಹಣವನ್ನು ಸ್ವಲ್ಪ ಸ್ವಲ್ಪವಾಗಿ ನೀಡುವುದಾಗಿ ಮೆಸೇಜ್ ಮಾಡಿದ್ದ. ಇದರಿಂದ ಗಾಬರಿಗೊಂಡ ಪ್ರವೀಣ್, ಮರು ದಿನವೇ ಬೆಳಗ್ಗೆ ಅಂಗಡಿಗೆ ಹೋಗಿ ನೋಡಿದಾಗ ಬೀಗ ಹಾಕಿದ್ದು, ಮನೆಗೂ ಬೀಗ ಹಾಕಿತ್ತು. ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು. ಇದೇ ವೇಳೆ, ವ್ಯಾಪಾರಿ ನೌಫಾಲ್ ಜೊತೆಗೆ ಅಡಿಕೆ ವ್ಯಾಪಾರ ಮಾಡಿ, ಹಣ ಪಡೆಯಲು ಬಾಕಿಯಿದ್ದ ಇತರ 24 ಜನರು ಅಂಗಡಿ ಮುಂದೆ ಸೇರಿದ್ದರು.
ಆರೋಪಿ ನೌಫಾಲ್ ತನ್ನೊಂದಿಗೆ ಅಡಿಕೆ ಮತ್ತು ಕರಿಮೆಣಸು ವ್ಯಾಪಾರ ಮಾಡಿಕೊಂಡಿದ್ದವರಿಗೆ ಒಟ್ಟು ರೂ. 94,77,810 /- ನ್ನು ನೀಡದೆ ನಂಬಿಕೆ ದ್ರೋಹ ಮತ್ತು ವಂಚನೆ ಮಾಡುವ ಉದ್ದೇಶದಿಂದ ತಲೆಮರೆಸಿಕೊಂಡಿದ್ದಾನೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರವೀಣ್ ಡಿಸೋಜ ದೂರಿನಂತೆ, ಅಕ್ರ: 64/2025 ಕಲಂ: 316(2) 318(4) ಬಿಎನ್ಎಸ್ -2023 ರಂತೆ ಪ್ರಕರಣ ದಾಖಲಾಗಿದೆ.
ನೌಫಾಲ್ ಮಹಮ್ಮದ್ ಹಲವಾರು ವರ್ಷಗಳಿಂದ ಅಡಿಕೆ ವ್ಯಾಪಾರ ಮಾಡಿಕೊಂಡಿದ್ದು ಆಸುಪಾಸಿನ ಕೃಷಿಕರ ವಿಶ್ವಾಸ ಗಳಿಸಿದ್ದ. ಹಣ ಬಾಕಿ ಇರಿಸಿದ್ದರೆ, ಚೀಟಿಯಲ್ಲಿ ಬರೆದು ಕೊಡುತ್ತಿದ್ದ. ಕೇವಲ ವಿಶ್ವಾಸದಿಂದಲೇ ಅಡಿಕೆ ವ್ಯವಹಾರ ನಡೆಯುತ್ತಿತ್ತು. ವ್ಯಾಪಾರಿಯೇ ಸಾಕಷ್ಟು ಕೃಷಿಕರ ಮನೆಗೆ ತೆರಳಿ ಅಡಿಕೆಯನ್ನು ತನ್ನ ವಾಹನದಲ್ಲಿ ತುಂಬಿಸಿ ತರುತ್ತಿದ್ದ. ಆದರೆ ಕೆಲವು ಸಮಯಗಳಿಂದ ಹೀಗೆ ತಂದಿದ್ದ ಅಡಿಕೆಗೆ ಪ್ರತಿಯಾಗಿ ಹಣವನ್ನು ನೀಡದೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಕೆಲವರಿಗೆ 30 ಲಕ್ಷಕ್ಕೂ ಹೆಚ್ಚಿನ ಮತ್ತು ಇನ್ನು ಕೆಲವರಿಗೆ 50 ಸಾವಿರ ರೂ.ಗಳಷ್ಟು ವಂಚಿಸಿದ್ದಾನೆ ಎಂದು ತಿಳಿದುಬಂದಿದೆ.
Mangalore Arecanut Trader Cheats Over 50 Farmers of Crores, Shop Locked, Accused Absconds After Massive Fraud in Bantwal.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm