ಬ್ರೇಕಿಂಗ್ ನ್ಯೂಸ್
20-06-25 02:04 pm Mangalore Correspondent ಕ್ರೈಂ
ಉಡುಪಿ, ಜೂನ್ 20 : ಪತ್ನಿ ಇಡೀ ದಿನ ಮೊಬೈಲ್ ನೋಡುತ್ತಾಳೆ ಎಂದು ಸಿಟ್ಟಿಗೆದ್ದ ಪತಿರಾಯ, ಅದೇ ವಿಷಯದಲ್ಲಿ ಜಗಳಕ್ಕಿಳಿದು ಕತ್ತಿಯಿಂದ ಕಡಿದು ಪತ್ನಿಯನ್ನೇ ಕೊಲೆಗೈದ ಘಟನೆ ಬ್ರಹ್ಮಾವರ ತಾಲೂಕು ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ನಡೆದಿದೆ.
ಮೃತರನ್ನು ಹೊಸಮಠ ನಿವಾಸಿ ರೇಖಾ(27) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ, ಆಕೆಯ ಪತಿ ಕೊಳಂಬೆ ಗ್ರಾಮದ ನಿವಾಸಿ ಗಣೇಶ ಪೂಜಾರಿ(42) ಎಂಬಾತನನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಗಣೇಶ್ ಪೂಜಾರಿ ವಿಪರೀತ ಮದ್ಯವ್ಯಸನದ ಚಟ ಹೊಂದಿದ್ದ. ಪತ್ನಿ ಹೆಚ್ಚಾಗಿ ಮೊಬೈಲ್ ಉಪಯೋಗಿಸುತ್ತಾಳೆಂದು ಸಿಟ್ಟಿನಿಂದ ವಿಪರೀತ ಕುಡಿದು ಗುರುವಾರ ರಾತ್ರಿ ಮನೆಯಲ್ಲಿ ಜಗಳಕ್ಕಿಳಿದಿದ್ದು ಆಕೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾನೆ.
ವೃತ್ತಿಯಲ್ಲಿ ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದ ಗಣೇಶ್ ಪೂಜಾರಿ ಹಾಗೂ ರೇಖಾಗೆ 8 ವರ್ಷಗಳ ಹಿಂದೆ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದಾರೆ. ರೇಖಾ ಪೆಟ್ರೋಲ್ ಬಂಕ್ ಒಂದರಲ್ಲಿ ಕೆಲಸಕ್ಕಿದ್ದಳು. ಈ ಮಧ್ಯೆ ಗಣೇಶ್, ಆಕೆಯ ಮೊಬೈಲ್ ಗೀಳಿನ ವಿಚಾರದಲ್ಲಿ ಆಗಾಗ್ಗೆ ಗಲಾಟೆ ಮಾಡುತ್ತಿದ್ದ. ನಿನ್ನೆ ರಾತ್ರಿ 11.30ರ ವೇಳೆಗೆ ಮನೆಗೆ ಬಂದು ಕ್ಷುಲ್ಲಕ ಕಾರಣಕ್ಕೆ ಪತ್ನಿಯೊಂದಿಗೆ ಜಗಳ ಮಾಡಿದ್ದು ಕತ್ತಿಯಿಂದ ಕಡಿದಿದ್ದಾನೆ. ಗಂಭೀರ ಗಾಯಗೊಂಡ ರೇಖಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಮನೆಯಿಂದ ಓಡಿ ಹೋಗಿದ್ದ ಆರೋಪಿ ಗಣೇಶ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking and tragic incident, a man brutally murdered his wife over a dispute about her frequent use of a mobile phone. The incident occurred on Thursday night in Hosamatha village, near Hiliyala in Brahmavar Taluk. The deceased has been identified as Rekha (27), a resident of Hosamatha and an employee at a petrol bunk. The accused, her husband Ganesh Poojary (42) from Kolambe village, has been taken into custody by the Shankaranarayana police.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm