ಬ್ರೇಕಿಂಗ್ ನ್ಯೂಸ್
26-06-25 10:49 pm Mangalore Correspondent ಕ್ರೈಂ
ಮಂಗಳೂರು, ಜೂನ್ 26 : ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ, ದುಪ್ಪಟ್ಟು ಮಾಡಿಸುತ್ತೇನೆಂದು ಹೇಳಿ ಕುಟುಂಬಸ್ಥರಿಂದಲೇ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ ಬಳಿಕ ದಿಢೀರ್ ನಾಪತ್ತೆಯಾಗಿದ್ದ ಕೃಷ್ಣಪ್ರಸಾದ್ ಶೆಟ್ಟಿ ಎಂಬಾತನನ್ನು ಒಂದೂವರೆ ವರ್ಷದ ಬಳಿಕ ಮಂಗಳೂರಿನ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
ಕೃಷ್ಣಪ್ರಸಾದ್ ಶೆಟ್ಟಿ ಮೂಲತಃ ಕುಂದಾಪುರ ತಾಲೂಕಿನ ಸಿದ್ದಾಪುರದ ಬಂಟಕೋಡು ಎಂಬಲ್ಲಿನ ನಿವಾಸಿಯಾಗಿದ್ದು, 2016ರಲ್ಲಿ ಮಂಗಳೂರಿನ ಯುವತಿಯನ್ನು ಮದುವೆಯಾಗಿದ್ದ. ಆನಂತರ, ಯುವತಿ ಕುಟುಂಬಸ್ಥರನ್ನು ನಂಬಿಸಿ ಹಣ ಪಡೆದಿದ್ದು, ಷೇರು ಮಾರುಕಟ್ಟೆಯಲ್ಲಿ ದಿನವಹಿ ವಹಿವಾಟು ನಡೆಸಿದರೆ ಗರಿಷ್ಠ ಲಾಭ ಸಿಗುತ್ತದೆ ಎಂದು ನಂಬಿಸಿದ್ದ. ಆತನ ಮಾತನ್ನು ನಂಬಿ ಹಲವಾರು ಮಂದಿ ಹಣ ಹೂಡಿಕೆ ಮಾಡಿದ್ದರು. ಈ ರೀತಿ ಹೂಡಿಕೆ ಮಾಡಿದವರು ಹೆಚ್ಚಿನವರು ಸಂಬಂಧಿಕರೇ ಆಗಿದ್ದರು. ಇದಲ್ಲದೆ, ಪತ್ನಿಯ ಒಡವೆ, ಆಸ್ತಿಯ ಹಣವನ್ನೂ ಪಡೆದು ಹೂಡಿಕೆ ಮಾಡಿಸಿದ್ದ.
ಎಲ್ಲರ ಹಣ ಪಡೆದು ತನ್ನದೇ ಹೆಸರಿನಲ್ಲಿ ಷೇರು ಮಾರುಕಟ್ಟೆಯ ಯುಎಫ್ಓ ಟ್ರೇಡಿಂಗ್ ನಲ್ಲಿ ಹೂಡಿಕೆ ಮಾಡಿದ್ದಾನೆ ಎನ್ನಲಾಗಿದ್ದು, ಅದರಲ್ಲಿ ಭಾರೀ ನಷ್ಟಕ್ಕೀಡಾಗಿದ್ದ. ಸಂಬಂಧಿಕರು ಅನೇಕರು ಹಣ ನೀಡಿದ್ದು ಅವರು ಮರಳಿ ಕೇಳತೊಡಗಿದ್ದಾಗ 2023ರ ನವೆಂಬರ್ ತಿಂಗಳಲ್ಲಿ ದಿಢೀರ್ ಕಾಣೆಯಾಗಿದ್ದ. ಪತ್ನಿ ಜೊತೆಗೆ ಮಂಗಳೂರಿನ ಬಂಟ್ಸ್ ಹಾಸ್ಟೆಲಿಗೆ ಕಾರಿನಲ್ಲಿ ಬಂದು, ಆಕೆಯನ್ನು ಕಾರಿನಲ್ಲಿ ಕೂರಿಸಿ ಆಕ್ಸಿಸ್ ಬ್ಯಾಂಕಿಗೆಂದು ತೆರಳಿ ಅಲ್ಲಿಂದಲೇ ನಾಪತ್ತೆಯಾಗಿದ್ದ. ಆನಂತರ, ಎಲ್ಲಿ ಹೋಗಿದ್ದಾನೆಂದು ತಿಳಿಯದೇ ಸಂಬಂಧಿಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಬಂದರು ಠಾಣೆಯಲ್ಲಿ ದಾಖಲಾಗಿದ್ದ ಮೋಸದ ಪ್ರಕರಣ ಬಳಿಕ ಸಿಇಎನ್ ಠಾಣೆಗೆ ವರ್ಗಾವಣೆಗೊಂಡಿತ್ತು. ಕಳೆದ ಜೂನ್ 3ರಂದು ಕುಂದಾಪುರದ ತನ್ನ ಮನೆಗೆ ಬಂದಿದ್ದಾನೆಂದು ತಿಳಿದ ಮಂಗಳೂರು ಪೊಲೀಸರು ತೆರಳಿ ವಶಕ್ಕೆ ಪಡೆದಿದ್ದಾರೆ ಎನ್ನುವುದು ತಡವಾಗಿ ತಿಳಿದುಬಂದಿದೆ.
ಸದ್ಯಕ್ಕೆ ಆರೋಪಿ ಕೃಷ್ಣಪ್ರಸಾದ್ ಮಂಗಳೂರು ಜೈಲಿನಲ್ಲಿದ್ದು, ಜೆರೋದಾ ಸೇರಿದಂತೆ ವಿವಿಧ ಷೇರು ಮಾರುಕಟ್ಟೆ ಟ್ರೇಡಿಂಗ್ ನಲ್ಲಿ ಹೂಡಿಕೆ ಮಾಡಿರುವ ಬಗ್ಗೆ ಮಾಹಿತಿ ಕೇಳಿ ಪೊಲೀಸರು ಕಂಪನಿಗಳಿಗೆ ಪತ್ರ ರವಾನಿಸಿದ್ದಾರೆ. ಒಂದೂವರೆ ವರ್ಷದಲ್ಲಿ ದೆಹಲಿ, ಬೆಂಗಳೂರು ಸೇರಿ ವಿವಿಧ ಕಡೆಗಳಲ್ಲಿ ನೆಲೆಸಿದ್ದ ಕೃಷ್ಣಪ್ರಸಾದ್, ಅಲ್ಲಿಯೂ ಷೇರು ಮಾರುಕಟ್ಟೆ ವಹಿವಾಟು ನಡೆಸಿದ್ದ ಎನ್ನುವ ಮಾಹಿತಿಯಿದೆ. ಕೆಲವು ಸಂಬಂಧಿಕರು ತಮ್ಮ ಸ್ನೇಹಿತರಿಂದಲೇ ಹಣ ಪಡೆದು ದುಪ್ಪಟ್ಟು ಲಾಭದ ಆಸೆಯಿಂದ ಷೇರು ಮಾರುಕಟ್ಟೆಗೆ ಹೂಡಿಕೆ ಮಾಡಿಸಿದ್ದರು. ಅಂದಾಜು 6 ಕೋಟಿಗೂ ಹೆಚ್ಚು ಹಣ ನೀರಿನಲ್ಲಿಟ್ಟ ಹೋಮದಂತೆ ಖಾಲಿಯಾಗಿದೆ ಎಂದು ಹೇಳುತ್ತಿದ್ದು, ಹಣ ಕಳಕೊಂಡವರು ಹಿಡಿಶಾಪ ಹಾಕುತ್ತಿದ್ದಾರೆ.
Mangaluru police have arrested a man accused of duping his own relatives of several crores by promising high returns through stock market investments. The accused, who had been missing for over one and a half years, was finally nabbed by the CEN (Cyber, Economic, and Narcotics) police. The arrested man, Krishnaprasad Shetty, hails from Bantakodu, Siddapura in Kundapur taluk.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am