ಬ್ರೇಕಿಂಗ್ ನ್ಯೂಸ್
22-12-20 06:25 pm Headline Karnataka News Network ಕ್ರೈಂ
ಹೊಸದಿಲ್ಲಿ, ಡಿ.22: ಕೆನಡಾದಲ್ಲಿ ಆಶ್ರಯ ಪಡೆಯಲು 2016ರಲ್ಲಿ ಪಾಕಿಸ್ತಾನದಿಂದ ಪಾರಾಗಿದ್ದ ಬಲೂಚ್ ಕಾರ್ಯಕರ್ತೆ ಕರಿಮಾ ಬಲೂಚ್ ಹಾರ್ಬರ್ ಫ್ರಂಟ್ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸ್ಥಳೀಯ ಮೂಲಗಳ ಪ್ರಕಾರ, ಟೊರೊಂಟೊದ ಲೇಕ್ಶೋರ್ ಬಳಿಯ ದ್ವೀಪವೊಂದರಲ್ಲಿ ಆಕೆಯ ಮೃತದೇಹ ಮುಳುಗಿರುವ ಸ್ಥಿತಿಯಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕರಿಮಾ ಅವರ ಪತಿ ಹಾಗೂ ಸಹೋದರರು ಮೃತದೇಹದ ಗುರುತನ್ನು ಪತ್ತೆ ಹಚ್ಚಿದ್ದು, ಮೃತದೇಹ ಈಗಲೂ ಪೊಲೀಸರ ಬಳಿ ಇದೆ.
ಟೊರೊಂಟೊ ಪೊಲೀಸ್ ಹಾಗೂ ಕೆನಡಾದ ಭದ್ರತಾ ಸಂಸ್ಥೆ ಸಿಎಸ್ಎಸ್ ಕರಿಮಾ ಸಾವಿನಲ್ಲಿ ಪಾಕಿಸ್ತಾನದ ಕೈವಾಡದ ಸಾಧ್ಯತೆಯ ಬಗ್ಗೆ ತನಿಖೆ ನಡೆಸಬೇಕು ಎಂದು ಟೊರೊಂಟಾದ ತಾರೆಕ್ ಫತ್ಹಾ ‘ಇಂಡಿಯಾ ಟುಡೇ’ ಗೆ ತಿಳಿಸಿದ್ದಾರೆ.

ತನ್ನ ಜೀವಕ್ಕೆ ಅಪಾಯವಿದ್ದ ಕಾರಣ 2016ರಲ್ಲಿ ಕರಿಮಾ ತನ್ನ ಕೆಲವು ಸ್ನೇಹಿತರು ಹಾಗೂ ಬಲೂಚ್ ಕಾರ್ಯಕರ್ತರ ಸಹಾಯದಿಂದ ಬಲೂಚಿಸ್ತಾನದಿಂದ ತಪ್ಪಿಸಿಕೊಂಡಿದ್ದರು. ಪಾಕಿಸ್ತಾನ ಮಾಜಿ ಸೇನಾಧಿಕಾರಿಗಳು ಕೆನಡಾದಲ್ಲಿ ನೆಲೆಸಿದ್ದನ್ನು ಕರಿಮಾ ತೀವ್ರವಾಗಿ ಟೀಕಿಸುತ್ತಿದ್ದರು. ಪಾಕಿಸ್ತಾನ ವಶದಿಂದ ಬಲೂಚಿಸ್ತಾನವನ್ನು ಸ್ವತಂತ್ರಗೊಳಿಸಬೇಕೆಂದು ಪ್ರತಿಪಾದಿಸುತ್ತಿದ್ದವರಲ್ಲಿ ಕರಿಮಾ ಕೂಡ ಒಬ್ಬರಾಗಿದ್ದರು.
2016ರಲ್ಲಿ ಭಾರತದ ಪ್ರಧಾನಿ ಮೋದಿಯವರಿಗಾಗಿ ರಕ್ಷಾ ಬಂಧನ ಸಂದೇಶವನ್ನು ರೆಕಾರ್ಡ್ ಮಾಡಿದ್ದರು. 2016ರಲ್ಲಿ ಬ್ರಿಟನ್ ನ ಪ್ರಮುಖ ಪ್ರಸಾರ ಸಂಸ್ಥೆ ಬಿಬಿಸಿ ಆಯ್ಕೆ ಮಾಡಿರುವ 100 ಅತ್ಯಂತ ಪ್ರಭಾವಶಾಲಿ ಮಹಿಳೆಯರಲ್ಲಿ ಕರಿಮಾ ಕೂಡ ಒಬ್ಬರಾಗಿದ್ದರು.
ಕರಿಮಾ ಬಲೂಚ್ ನಿಧನಕ್ಕೆ ಬಲೂಚ್ ರಾಷ್ಟ್ರೀಯ ಚಳುವಳಿಯು 40 ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.
Human rights activist and former chairperson of Baloch Students Organisation – Azad, Karima Baloch was reportedly found dead in Toronto, Canada Sunday.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
01-08-26 02:48 pm
HK News Staffer
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 02:50 pm
HK News Staffer
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm