ಬ್ರೇಕಿಂಗ್ ನ್ಯೂಸ್
22-12-20 06:25 pm Headline Karnataka News Network ಕ್ರೈಂ
ಹೊಸದಿಲ್ಲಿ, ಡಿ.22: ಕೆನಡಾದಲ್ಲಿ ಆಶ್ರಯ ಪಡೆಯಲು 2016ರಲ್ಲಿ ಪಾಕಿಸ್ತಾನದಿಂದ ಪಾರಾಗಿದ್ದ ಬಲೂಚ್ ಕಾರ್ಯಕರ್ತೆ ಕರಿಮಾ ಬಲೂಚ್ ಹಾರ್ಬರ್ ಫ್ರಂಟ್ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸ್ಥಳೀಯ ಮೂಲಗಳ ಪ್ರಕಾರ, ಟೊರೊಂಟೊದ ಲೇಕ್ಶೋರ್ ಬಳಿಯ ದ್ವೀಪವೊಂದರಲ್ಲಿ ಆಕೆಯ ಮೃತದೇಹ ಮುಳುಗಿರುವ ಸ್ಥಿತಿಯಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕರಿಮಾ ಅವರ ಪತಿ ಹಾಗೂ ಸಹೋದರರು ಮೃತದೇಹದ ಗುರುತನ್ನು ಪತ್ತೆ ಹಚ್ಚಿದ್ದು, ಮೃತದೇಹ ಈಗಲೂ ಪೊಲೀಸರ ಬಳಿ ಇದೆ.
ಟೊರೊಂಟೊ ಪೊಲೀಸ್ ಹಾಗೂ ಕೆನಡಾದ ಭದ್ರತಾ ಸಂಸ್ಥೆ ಸಿಎಸ್ಎಸ್ ಕರಿಮಾ ಸಾವಿನಲ್ಲಿ ಪಾಕಿಸ್ತಾನದ ಕೈವಾಡದ ಸಾಧ್ಯತೆಯ ಬಗ್ಗೆ ತನಿಖೆ ನಡೆಸಬೇಕು ಎಂದು ಟೊರೊಂಟಾದ ತಾರೆಕ್ ಫತ್ಹಾ ‘ಇಂಡಿಯಾ ಟುಡೇ’ ಗೆ ತಿಳಿಸಿದ್ದಾರೆ.

ತನ್ನ ಜೀವಕ್ಕೆ ಅಪಾಯವಿದ್ದ ಕಾರಣ 2016ರಲ್ಲಿ ಕರಿಮಾ ತನ್ನ ಕೆಲವು ಸ್ನೇಹಿತರು ಹಾಗೂ ಬಲೂಚ್ ಕಾರ್ಯಕರ್ತರ ಸಹಾಯದಿಂದ ಬಲೂಚಿಸ್ತಾನದಿಂದ ತಪ್ಪಿಸಿಕೊಂಡಿದ್ದರು. ಪಾಕಿಸ್ತಾನ ಮಾಜಿ ಸೇನಾಧಿಕಾರಿಗಳು ಕೆನಡಾದಲ್ಲಿ ನೆಲೆಸಿದ್ದನ್ನು ಕರಿಮಾ ತೀವ್ರವಾಗಿ ಟೀಕಿಸುತ್ತಿದ್ದರು. ಪಾಕಿಸ್ತಾನ ವಶದಿಂದ ಬಲೂಚಿಸ್ತಾನವನ್ನು ಸ್ವತಂತ್ರಗೊಳಿಸಬೇಕೆಂದು ಪ್ರತಿಪಾದಿಸುತ್ತಿದ್ದವರಲ್ಲಿ ಕರಿಮಾ ಕೂಡ ಒಬ್ಬರಾಗಿದ್ದರು.
2016ರಲ್ಲಿ ಭಾರತದ ಪ್ರಧಾನಿ ಮೋದಿಯವರಿಗಾಗಿ ರಕ್ಷಾ ಬಂಧನ ಸಂದೇಶವನ್ನು ರೆಕಾರ್ಡ್ ಮಾಡಿದ್ದರು. 2016ರಲ್ಲಿ ಬ್ರಿಟನ್ ನ ಪ್ರಮುಖ ಪ್ರಸಾರ ಸಂಸ್ಥೆ ಬಿಬಿಸಿ ಆಯ್ಕೆ ಮಾಡಿರುವ 100 ಅತ್ಯಂತ ಪ್ರಭಾವಶಾಲಿ ಮಹಿಳೆಯರಲ್ಲಿ ಕರಿಮಾ ಕೂಡ ಒಬ್ಬರಾಗಿದ್ದರು.
ಕರಿಮಾ ಬಲೂಚ್ ನಿಧನಕ್ಕೆ ಬಲೂಚ್ ರಾಷ್ಟ್ರೀಯ ಚಳುವಳಿಯು 40 ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.
Human rights activist and former chairperson of Baloch Students Organisation – Azad, Karima Baloch was reportedly found dead in Toronto, Canada Sunday.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm