ಬ್ರೇಕಿಂಗ್ ನ್ಯೂಸ್
22-12-20 06:25 pm Headline Karnataka News Network ಕ್ರೈಂ
ಹೊಸದಿಲ್ಲಿ, ಡಿ.22: ಕೆನಡಾದಲ್ಲಿ ಆಶ್ರಯ ಪಡೆಯಲು 2016ರಲ್ಲಿ ಪಾಕಿಸ್ತಾನದಿಂದ ಪಾರಾಗಿದ್ದ ಬಲೂಚ್ ಕಾರ್ಯಕರ್ತೆ ಕರಿಮಾ ಬಲೂಚ್ ಹಾರ್ಬರ್ ಫ್ರಂಟ್ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸ್ಥಳೀಯ ಮೂಲಗಳ ಪ್ರಕಾರ, ಟೊರೊಂಟೊದ ಲೇಕ್ಶೋರ್ ಬಳಿಯ ದ್ವೀಪವೊಂದರಲ್ಲಿ ಆಕೆಯ ಮೃತದೇಹ ಮುಳುಗಿರುವ ಸ್ಥಿತಿಯಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕರಿಮಾ ಅವರ ಪತಿ ಹಾಗೂ ಸಹೋದರರು ಮೃತದೇಹದ ಗುರುತನ್ನು ಪತ್ತೆ ಹಚ್ಚಿದ್ದು, ಮೃತದೇಹ ಈಗಲೂ ಪೊಲೀಸರ ಬಳಿ ಇದೆ.
ಟೊರೊಂಟೊ ಪೊಲೀಸ್ ಹಾಗೂ ಕೆನಡಾದ ಭದ್ರತಾ ಸಂಸ್ಥೆ ಸಿಎಸ್ಎಸ್ ಕರಿಮಾ ಸಾವಿನಲ್ಲಿ ಪಾಕಿಸ್ತಾನದ ಕೈವಾಡದ ಸಾಧ್ಯತೆಯ ಬಗ್ಗೆ ತನಿಖೆ ನಡೆಸಬೇಕು ಎಂದು ಟೊರೊಂಟಾದ ತಾರೆಕ್ ಫತ್ಹಾ ‘ಇಂಡಿಯಾ ಟುಡೇ’ ಗೆ ತಿಳಿಸಿದ್ದಾರೆ.

ತನ್ನ ಜೀವಕ್ಕೆ ಅಪಾಯವಿದ್ದ ಕಾರಣ 2016ರಲ್ಲಿ ಕರಿಮಾ ತನ್ನ ಕೆಲವು ಸ್ನೇಹಿತರು ಹಾಗೂ ಬಲೂಚ್ ಕಾರ್ಯಕರ್ತರ ಸಹಾಯದಿಂದ ಬಲೂಚಿಸ್ತಾನದಿಂದ ತಪ್ಪಿಸಿಕೊಂಡಿದ್ದರು. ಪಾಕಿಸ್ತಾನ ಮಾಜಿ ಸೇನಾಧಿಕಾರಿಗಳು ಕೆನಡಾದಲ್ಲಿ ನೆಲೆಸಿದ್ದನ್ನು ಕರಿಮಾ ತೀವ್ರವಾಗಿ ಟೀಕಿಸುತ್ತಿದ್ದರು. ಪಾಕಿಸ್ತಾನ ವಶದಿಂದ ಬಲೂಚಿಸ್ತಾನವನ್ನು ಸ್ವತಂತ್ರಗೊಳಿಸಬೇಕೆಂದು ಪ್ರತಿಪಾದಿಸುತ್ತಿದ್ದವರಲ್ಲಿ ಕರಿಮಾ ಕೂಡ ಒಬ್ಬರಾಗಿದ್ದರು.
2016ರಲ್ಲಿ ಭಾರತದ ಪ್ರಧಾನಿ ಮೋದಿಯವರಿಗಾಗಿ ರಕ್ಷಾ ಬಂಧನ ಸಂದೇಶವನ್ನು ರೆಕಾರ್ಡ್ ಮಾಡಿದ್ದರು. 2016ರಲ್ಲಿ ಬ್ರಿಟನ್ ನ ಪ್ರಮುಖ ಪ್ರಸಾರ ಸಂಸ್ಥೆ ಬಿಬಿಸಿ ಆಯ್ಕೆ ಮಾಡಿರುವ 100 ಅತ್ಯಂತ ಪ್ರಭಾವಶಾಲಿ ಮಹಿಳೆಯರಲ್ಲಿ ಕರಿಮಾ ಕೂಡ ಒಬ್ಬರಾಗಿದ್ದರು.
ಕರಿಮಾ ಬಲೂಚ್ ನಿಧನಕ್ಕೆ ಬಲೂಚ್ ರಾಷ್ಟ್ರೀಯ ಚಳುವಳಿಯು 40 ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.
Human rights activist and former chairperson of Baloch Students Organisation – Azad, Karima Baloch was reportedly found dead in Toronto, Canada Sunday.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm