ಬ್ರೇಕಿಂಗ್ ನ್ಯೂಸ್
29-06-25 02:26 pm HK News Desk ಕ್ರೈಂ
ತುಮಕೂರು, ಜೂನ್ 29 : ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಕಣ್ಣಿಗೆ ಖಾರದ ಪುಡಿ ಎರಚಿ ಕುತ್ತಿಗೆ ಮೇಲೆ ಕಾಲಿಟ್ಟು ಉಸಿರುಕಟ್ಟಿಸಿ ಕೊಲೆ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕಾಡುಶೆಟ್ಟಿ ಹಳ್ಳಿಯಲ್ಲಿ ಈ ಘಟನೆ ನಡೆದಿದ್ದು ಪತಿಯನ್ನು ಪ್ರಿಯಕರನ ಜೊತೆ ಸೇರಿ ಪತ್ನಿಯೇ ಕೊಲೆ ಮಾಡಿದ್ದಾಳೆ. ತಿಪಟೂರು ತಾಲೂಕಿನ 50 ವರ್ಷದ ಶಂಕರಮೂರ್ತಿ ಎಂಬವರನ್ನು ಅವರ ಪತ್ನಿ ಸುಮಂಗಳಾ ಮತ್ತು ಆಕೆಯ ಪ್ರಿಯಕರ ನಾಗರಾಜು ಹತ್ಯೆ ಮಾಡಿದ್ದು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ತಿಪಟೂರು ತಾಲೂಕಿನ ನೊಣವಿನಕೆರೆ ಬಳಿಯ ಕಾಡುಶೆಟ್ಟಿಹಳ್ಳಿಯಲ್ಲಿ ಜೂನ್ 24 ರಂದು ಈ ಕೊಲೆ ನಡೆದಿದೆ. ಕೊಲೆಯ ನಂತರ ಶವವನ್ನು ಗೋಣಿಚೀಲದಲ್ಲಿ ತುಂಬಿ ಸುಮಾರು 30 ಕಿಮೀ ಸಾಗಿಸಿ, ತುರುವೇಕೆರೆ ತಾಲೂಕಿನ ದಂಡನಶಿವರ ಪೊಲೀಸ್ ಠಾಣಾ ವ್ಯಾಪ್ತಿಯ ತೋಟದ ಬಾವಿಯೊಂದಕ್ಕೆ ಎಸೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸುಮಂಗಳಾ ತಿಪಟೂರು ನಗರದ ಕಲ್ಪತರು ಕಾಲೇಜಿನ ಗರ್ಲ್ಸ್ ಹಾಸ್ಟೆಲ್ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು. ಇದೇ ವೇಳೆ, ಕರಡಾಳು ಸಂತೆ ಗ್ರಾಮದ ನಾಗರಾಜು ಜೊತೆ ಅಕ್ರಮ ಸಂಬಂಧ ಬೆಳೆಸಿದ್ದಳು. ಇವರ ಸಂಬಂಧಕ್ಕೆ ಪತಿ ಶಂಕರಮೂರ್ತಿ ಅಡ್ಡಿಯಾಗಿದ್ದ. ಈ ಕಾರಣಕ್ಕಾಗಿ, ಸುಮಂಗಲಾ ಮತ್ತು ನಾಗರಾಜು ಸೇರಿ ಶಂಕರಮೂರ್ತಿ ಕೊಲೆಗೆ ಯೋಜನೆ ರೂಪಿಸಿದ್ದರು.
ಜೂನ್ 24 ರಂದು ಶಂಕರಮೂರ್ತಿ ತೋಟದ ಮನೆಯಲ್ಲಿ ಒಬ್ಬಂಟಿ ಮಲಗಿದ್ದಾಗ ಸುಮಂಗಲಾ ಮತ್ತು ನಾಗರಾಜು ಆತನ ಕಣ್ಣಿಗೆ ಖಾರದ ಪುಡಿ ಎರಚಿ, ದೊಣ್ಣೆಯಿಂದ ಹೊಡೆದು, ಕೊನೆಗೆ ಕುತ್ತಿಗೆ ಮೇಲೆ ಕಾಲಿಟ್ಟು ಭೀಕರವಾಗಿ ಕೊಲೆ ಮಾಡಿದ್ದಾರೆ. ಬಳಿಕ ಶವವನ್ನು ಗೋಣಿಚೀಲದಲ್ಲಿ ತುಂಬಿ, ಸುಮಾರು 30 ಕಿಮೀ ದೂರದ ತುರುವೇಕೆರೆ ಎಂಬಲ್ಲಿಗೆ ಒಯ್ದು ತೋಟದ ಬಾವಿಗೆ ಎಸೆದಿದ್ದಾರೆ. ಕೃತ್ಯದ ನಂತರ, ಆರೋಪಿಗಳು ಯಾವುದೇ ಶಂಕೆಗೆ ಒಳಗಾಗದಂತೆ ಗ್ರಾಮಕ್ಕೆ ಹಿಂದಿರುಗಿದ್ದರು.
ನೊಣವಿನಕೆರೆ ಪೊಲೀಸರು ತನಿಖೆ ಆರಂಭಿಸಿದ್ದು, ಅಕ್ರಮ ಸಂಬಂಧ ಮಾಹಿತಿ ಆಧರಿಸಿ ಸುಮಂಗಳಾಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೊಲೆ ಕೃತ್ಯ ಬೆಳಕಿಗೆ ಬಂದಿದೆ. ಶವವನ್ನು ತೋಟದ ಬಾವಿಯಿಂದ ತೆಗೆಯಲಾಗಿದೆ. ತಿಪಟೂರಿನಲ್ಲಿ ಈ ಘಟನೆ ಸ್ಥಳೀಯರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
A man was found dead under suspicious circumstances in Kadushetti Halli, a village near Nonavinakere in Tipatur taluk, Tumakuru district. The incident, which occurred on June 24, has led to the detention of the man's wife and one other individual for questioning. The deceased has been identified as 50-year-old Shankaramoorthy, a resident of the village
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am