ಬ್ರೇಕಿಂಗ್ ನ್ಯೂಸ್
29-06-25 04:26 pm HK News Desk ಕ್ರೈಂ
ದಾವಣಗೆರೆ, ಜೂ 29 : ಪೆಟ್ರೋಲ್ ಸುರಿದು ಎಟಿಎಂ ಒಡೆಯಲು ಖದೀಮರು ಮುಂದಾಗಿದ್ದು, ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡ ಬಳಿಕ ಪರಾರಿಯಾದ ಘಟನೆ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ ಕಳೆದ ಮಧ್ಯರಾತ್ರಿ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕಳ್ಳರು ಮಧ್ಯರಾತ್ರಿ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರಕ್ಕೆ ನುಗ್ಗಿದ್ದಾರೆ. ಮೊದಲು ಕಬ್ಬಿಣದ ಸರಳು ಬಳಸಿ ಎಟಿಎಂ ಒಡೆಯಲು ಯತ್ನಿಸಿದ್ದಾರೆ. ಅದು ಸಾಧ್ಯವಾಗದೇ ಇದ್ದಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಈ ವೇಳೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ. ದಟ್ಟ ಹೊಗೆ ಆವರಿಸುತ್ತಿದ್ದಂತೆ ಎಸ್ಕೇಪ್ ಆಗಿದ್ದಾರೆ.
ವಿಚಾರ ತಿಳಿಯುತ್ತಿದ್ದಂತೆ ಬ್ಯಾಂಕ್ ಸಿಬ್ಬಂದಿ ಪೊಲೀಸರ ಸಮೇತ ಎಟಿಎಂ ಬಳಿಗೆ ಧಾವಿಸಿದ್ದಾರೆ. ಬಿಳಿಚೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಎಫ್ಐಆರ್ ದಾಖಲಾಗಿದೆ.
ಇನ್ನು ಇದೇ ದಾವಣಗೆರೆಯಲ್ಲಿ ಆರು ತಿಂಗಳ ಹಿಂದಷ್ಟೇ ಎಸ್ ಬಿಐ ಬ್ಯಾಂಕ್ ಗೆ ಕನ್ನ ಹಾಕಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿ 17 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು.
ಬ್ಯಾಂಕ್ ದರೋಡೆಯಲ್ಲಿ ಇದೇ ಮೊದಲ ಬಾರಿಗೆ ಸೊತ್ತು ಸಹಿತ ಅರೋಪಿಗಳ ಬಂಧನವಾಗಿತ್ತು. ಈ ಹಿಂದೆ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದಲ್ಲಿ ಕರ್ನಾಟಕ ಬ್ಯಾಂಕ್ ನಲ್ಲಿ ಎರಡು ಬಾರಿ ದರೋಡೆ ನಡೆದಿತ್ತು. ಇದುವರೆಗೂ ದರೋಡೆಕೋರರ ಸುಳಿವು ಕೂಡ ಸಿಕ್ಕಿಲ್ಲ. ಆದರೆ ನ್ಯಾಮತಿ ಪಟ್ಟಣದ ಎಸ್ ಬಿಐ ಬ್ಯಾಂಕ್ ದರೋಡೆ ನಡೆದ ಆರು ತಿಂಗಳಲ್ಲಿ ಅರೋಪಿಗಳ ಪತ್ತೆ ಮಾಡಿ ಸೊತ್ತು ಸಮೇತ ಬಂದಿಸಿದರು.
A group of unidentified miscreants attempted to rob an ATM by setting it on fire in Bilichodu village, Jagalur taluk, late last night. The incident was captured on CCTV footage installed at the ATM center.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 05:34 pm
HK News Staffer
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm