Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪಡೆದು ವಂಚನೆ ; 30 ವರ್ಷಗಳ ಬಳಿಕ ಆರೋಪಿ ಶಿರಸಿ ಪೊಲೀಸರ ಬಲೆಗೆ 

01-07-25 12:07 pm       HK News Desk   ಕ್ರೈಂ

ನೌಕರಿ ಕೊಡಿಸುವುದಾಗಿ 200 ರೂಪಾಯಿ ಪಡೆದು ವ್ಯಕ್ತಿಯೊಬ್ಬರಿಗೆ ವಂಚಿಸಿದ ವ್ಯಕ್ತಿಯನ್ನು 30 ವರ್ಷಗಳ ಬಳಿಕ ಶಿರಸಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ ಘಟನೆ ನಡೆದಿದೆ. ಬೈಂದೂರಿನ ಬಿ.ಕೆ.ರಾಮಚಂದ್ರ ರಾವ್ ಬಂಧಿತ ಆರೋಪಿ. 

ಕಾರವಾರ, ಜು 01 : ನೌಕರಿ ಕೊಡಿಸುವುದಾಗಿ 200 ರೂಪಾಯಿ ಪಡೆದು ವ್ಯಕ್ತಿಯೊಬ್ಬರಿಗೆ ವಂಚಿಸಿದ ವ್ಯಕ್ತಿಯನ್ನು 30 ವರ್ಷಗಳ ಬಳಿಕ ಶಿರಸಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ ಘಟನೆ ನಡೆದಿದೆ. ಬೈಂದೂರಿನ ಬಿ.ಕೆ.ರಾಮಚಂದ್ರ ರಾವ್ ಬಂಧಿತ ಆರೋಪಿ. 

ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ 30 ವರ್ಷದ ಹಿಂದೆ ವ್ಯಕ್ತಿಯೋರ್ವರಿಗೆ ನೌಕರಿ ಕೊಡಿಸುವುದಾಗಿ ಹೇಳಿ  200 ರೂ. ಪಡೆದು ಮೋಸ ಮಾಡಿದ್ದ. ಈ ಬಗ್ಗೆ ಪ್ರಕರಣ ದಾಖಲಾದರೂ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಂಡಿದ್ದ. 

ಶಿರಸಿ ಗ್ರಾಮೀಣ ಠಾಣೆಯ ಪಿಐ ಮಂಜುನಾಥ್ ಎಂ. ಮತ್ತು ಪಿಎಸ್ಐ ಸಂತೋಷ್ ಕುಮಾರ್ ಎಂ. ನೇತೃತ್ವದಲ್ಲಿ ಪೊಲೀಸರು ಆರೋಪಿಯನ್ನು ಬೆಂಗಳೂರಿನ ಬಳೆಪೇಟೆಯಲ್ಲಿ ಬಂಧಿಸಿದ್ದಾರೆ.  ಆರೋಪಿ ಬಂಧಿಸಿ  ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಜೈಲಿಗೆ ಹಾಕಲಾಗಿದೆ‌.

In a surprising turn of events, a man who allegedly defrauded someone of ₹200 on the pretext of offering a job has been arrested by Sirsi police after 30 years. The accused, B.K. Ramachandra Rao from Byndoor, was apprehended in Bengaluru.